N.R.Narayana Murthy: ಬಡತನ ನಿರ್ಮೂಲನೆ ಬಗ್ಗೆ ಇನ್ಫೋಸಿಸ್ ನಾರಾಯಣಮೂರ್ತಿ ನೀತಿ ಪಾಠ
ಇನ್ಫೋಸಿಸ್ ಸಹ ಸಂಸ್ಥಾಪಕ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದ್ದಾರೆ. ಈಗಾಗಲೇ ಉದ್ಯೋಗಿಗಳು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕೆಂಬ ಹೇಳಿಕೆ ನೀಡಿ ಆಕ್ರೋಶಕ್ಕೆ ಗುರಿಯಾಗಿದ್ದರು. ಇದೀಗ ಬಡತನ ನಿರ್ಮೂಲನೆ ಬಗ್ಗೆ ಮಾತನಾಡಿ ಗಮನ ಸೆಳೆದಿದ್ದಾರೆ. ಹಾಗಾದ್ರೆ ಏನು ಹೇಳಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಕೇವಲ ಉಚಿತ ಕೊಡುಗೆಗಳನ್ನು ಕೊಡುವುದರಿಂದ ದೇಶದಲ್ಲಿನ ಬಡತನ ನಿರ್ಮೂಲನೆ ಆಗುವುದಿಲ್ಲ. ಉದ್ಯೋಗ ಸೃಷ್ಟಿಯಿಂದ ಮಾತ್ರವೇ ಅಭಿವೃದ್ಧಿ ಸಾಧ್ಯ ಎಂದು ಹೇಳಿ ಗಮನ ಸೆಳದಿದ್ದಾರೆ.

ಮುಂಬೈನಲ್ಲಿ ನಡೆದ ಟೈಕೂನ್ ಮುಂಬೈ 2025 ಸಮಾವೇಶದಲ್ಲಿ ಮಾತನಾಡಿದ ಅವರು, ಕೇವಲ ಉಚಿತ ಕೊಡುಗೆ ಕೊಟ್ಟರೆ ಬಡತನ ಮಾಯ ಆಗುತ್ತದೆ ಎಂದುಕೊಂಡಿದ್ದರೆ ಅದು ತಪ್ಪು ಕಲ್ಪನೆಯಾಗಿದೆ. ಇದುವರೆಗೂ ಉಚಿತ ಕೊಡುಗೆಗಳನ್ನು ಕೊಟ್ಟಿರುವ ಯಾವ ದೇಶವೂ ಬಡತನದಿಂದ ಹೊರಬಂದಿಲ್ಲ. ಬದಲಿಗೆ ನಾವು ಹೆಚ್ಚು ಉದ್ಯಮಗಳನ್ನು ಸೃಷ್ಟಿಸಬೇಕು ಸೃಷ್ಟಿಸಬೇಕು ಎಂದು ಹೇಳಿದ್ದಾರೆ.
ಉಚಿತ ವಿದ್ಯುತ್ ಉದಾರಣೆಯಾಗಿ ನೀಡಿದ ಇನ್ಫೋಸಿಸ್ ನಾರಾಯಣ ಮೂರ್ತಿ ಅವರು, ಉಚಿತ ವಿದ್ಯುತ್ನಿಂದ ಮಕ್ಕಳಲ್ಲಿ ಓದುವ ಹವ್ಯಾಸ ಹೆಚ್ಚಿದೆಯೇ ಅಥವಾ ಪೋಷಕರ ಕಾಳಜಿ ಹೆಚ್ಚಿದೆಯೇ ಎಂದು ಅರಿಯಲು 6 ತಿಂಗಳಿಗೊಮ್ಮೆ ಸಮೀಕ್ಷೆ ನಡೆಸಬಹುದಾಗಿದೆ ಎಂದು ಹೇಳಿದ್ದಾರೆ.
ಇದೀಗ ಮೊದಲು ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ಜನರಿಗೆ ಉಪಯೋಗ ಆಗಲೆಂದು 5 ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದಾರೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಸಾರಿಗೆ ಬಸ್ಗಳಲ್ಲಿ ಉಚಿತ ಪ್ರಮಾಣದ ಅವಕಾಶವನ್ನು ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದೆ. ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಮನೆ ಯಮಾನಿ ಬ್ಯಾಂಕ್ ಖಾತೆಗೆ ಮಾಸಿಕ 2,000 ರೂಪಾಯಿ ನೀಡಲಾಗುತ್ತಿದೆ.
ಹಾಗೆಯೇ ಅನ್ನಭಾಗ್ಯ ಯೋಜನೆಯಡಿ ಉಚಿತ ಅಕ್ಕಿಯನ್ನು ನೀಡಲಾಗುತ್ತಿದ್ದು, ಯುವನಿಧಿ ಯೋಜನೆಯಡಿ ನಿರುದ್ಯೋಗ ಯುವಕ, ಯುವಕತಿಯರಿಗೆ ಹಣ ನೀಡಲು ಮುಂದಾಗಿದೆ. ಇದನ್ನು ನೂಡಿಕೊಂಡು ದೇಶದ ಹಲವೆಡೆ ಇದೇ ರೀತಿಯ ಮಾದರಿಯನ್ನು ಅನುಸರಿಸುತ್ತಿದ್ದಾರೆ. ಇನ್ನು ಇದೀಗ ಇನ್ಫೋಸಿಸ್ ನಾರಾಯಣ ಮೂರ್ತಿಯವರು ಈ ಯೋಜನೆಗಳನ್ನಿಟ್ಟುಕೊಂಡು ಏನಾದರೂ ಮಾತನಾಡಿದ್ದಾರೆಯಾ ಎನ್ನುವ ಪ್ರಶ್ನೆ ಮೂಡಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications