ಇನ್ಫೋಸಿಸ್ ಗೆ ಮತ್ತೆ ನಂದನ್ ನಿಲೇಕಣಿ ಸಾರಥಿ?
ಬೆಂಗಳೂರು, ಆಗಸ್ಟ್ 23: ಭಾರತದ ಎರಡನೇ ಅತಿದೊಡ್ಡ ಸಾಫ್ಟ್ ವೇರ್ ಸಂಸ್ಥೆಯಾದ ಬೆಂಗಳೂರು ಮೂಲದ ಇನ್ಫೋಸಿಸ್ ಸಂಸ್ಥೆಯ ಸಿಇಒ ಸ್ಥಾನಕ್ಕೆ ವಿಶಾಲ್ ಸಿಕ್ಕಾ ರಾಜೀನಾಮೆ ನೀಡಿದ್ದು ಹೂಡಿಕೆದಾರರಲ್ಲಿ ಅಸಮಾಧಾನ ಮೂಡಿಸಿದೆ.
ಈ ನಡುವೆ ಇನ್ಫೋಸಿಸ್ ಸಹ ಸ್ಥಾಪಕ ನಂದನ್ ನಿಲೇಕಣಿ ಅವರನ್ನು ಮತ್ತೆ ಸಂಸ್ಥೆಯ ಮುಖ್ಯಸ್ಥರನ್ನಾಗಿ ಕರೆ ತರಲು ಇನ್ಫೋಸಿಸ್ ನ ಬೋರ್ಡ್ ಮುಂದಾಗಿದೆ.
ಇನ್ಫೋಸಿಸ್ ಬೋರ್ಡ್ ನ ಸದಸ್ಯರು ಅಸಮಾಧಾನವನ್ನು ಇನ್ಫೋಸಿಸ್ ಸ್ಥಾಪಕ ಎನ್.ಆರ್ ನಾರಾಯಣ ಮೂರ್ತಿ ಅವರ ಮೇಲೆ ಹೇರಿದ್ದಾರೆ. ಬುಧವಾರ(ಆಗಸ್ಟ್ 23) ಹೂಡಿಕೆದಾರರನ್ನು ಉದ್ದೇಶಿಸಿ ನಾರಾಯಣ ಮೂರ್ತಿ ಅವರು ಮಾತನಾಡುವ ಕಾರ್ಯಕ್ರಮ ರದ್ದಾಗಿದೆ.

71 ವರ್ಷ ವಯಸ್ಸಿನ ನಾರಾಯಣ ಮೂರ್ತಿ ಅವರು ಬೋರ್ಡ್ ಸದಸ್ಯರ ವಿರೋಧ ಕಟ್ಟಿಕೊಳ್ಳದೆ ನಾಜೂಕಾಗಿ ವ್ಯವಹಾರ ಮುಗಿಸಿಕೊಳ್ಳುವ ಸಾಧ್ಯತೆಯಿದೆ.1981ರಲ್ಲಿ ಎನ್ ಆರ್ ನಾರಾಯಣ ಮೂರ್ತಿ ಅವರ ಜತೆಗೆ ನಂದನ್ ನಿಲೇಕಣಿ ಅವರು ಕೂಡಾ ಸಹ ಸ್ಥಾಪಕರಾಗಿ ಇನ್ಫೋಸಿಸ್ ಸ್ಥಾಪಿಸಿದರು.
2009ರಲ್ಲಿ ಯುಐಡಿಎಐ ಯೋಜನೆ ಅಥವಾ ಆಧಾರ್ ಕಾರ್ಡ್ ಯೋಜನೆ ಅನುಷ್ಠಾನದ ಚೇರ್ಮನ್ ಆಗಿ ನಂದನ್ ನಿಲೇಕಣಿ ಕಾರ್ಯನಿರ್ವಹಿಸಿದರು. ಹೀಗಾಗಿ, ಅನಿವಾರ್ಯವಾಗಿ ಇನ್ಫೋಸಿಸ್ ತೊರೆದರು.
7,700 ಕೋಟಿ ರೂ ಆಸ್ತಿಯ ಒಡೆಯ ನಂದನ್ ಅವರು ಇನ್ಫೋಸಿಸ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿದ್ದವರು. ಯುಪಿಎ ಸರ್ಕಾರದ ಅವಧಿಯಲ್ಲಿ ಆಧಾರ್ ಚೇರ್ಮನ್ ಆಗಿ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ಅಲಂಕರಿಸಿದವರು. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಪಡೆದು ಭರ್ಜರಿಯಾಗಿ ಕ್ಯಾಂಪೇನ್ ಮಾಡಿದರೂ ಎಚ್ .ಎನ್ ಅನಂತ್ ಕುಮಾರ್ ಅವರು ಡಬ್ಬಲ್ ಹ್ಯಾಟ್ರಿಕ್ ತಪ್ಪಿಸಲು ಸಾಧ್ಯವಾಗ್ಲಿಲ್ಲ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications