ಮೋದಿ ಮತ್ತೆ ಪಿಎಂ ಆಗಲಿ, ಭಾರತ ಬೆಳಗಲಿ ಎಂದ ಇನ್ಫಿ ಮೂರ್ತಿ
ಬೆಂಗಳೂರು, ನವೆಂಬರ್ 14: 'ಪ್ರಧಾನಿ ನರೇಂದ್ರ ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ, ಇಂದಿನ ಆರ್ಥಿಕ ನೀತಿಗಳನ್ನು ಮುಂದುವರಿಸಿಕೊಂಡು ಹೋಗಬೇಕಿದೆ, ಇದರಿಂದ ಭಾರತ ಬೆಳಗಲಿದೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರು ಅಭಿಪ್ರಾಯಪಟ್ಟಿದ್ದಾರೆ.
ಎಕಾನಾಮಿಕ್ಸ್ ಟೈಮ್ಸ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ, ದೇಶದ ಆರ್ಥಿಕ ಬೆಳವಣಿಗೆಗೆ ಪ್ರಧಾನಿ ಮೋದಿ ಕಾರಣರಾಗಿದ್ದಾರೆ. ಜಿಎಸ್ಟಿಯನ್ನು ಪರಿಚಯಿಸಿ, ಉತ್ತಮ ಹಾಗೂ ವ್ಯವಸ್ಥಿತವಾಗಿ ಜಾರಿಗೊಳಿಸಿದ್ದಾರೆ. ಮೋದಿ ಹಾಗೂ ಅವರ ಸಚಿವ ಸಂಪುಟದವರು ಕಠಿಣವಾಗಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಮಟ್ಟದಲ್ಲಿ ಭ್ರಷ್ಟಾಚಾರ ಇಳಿಮುಖವಾಗಿದೆ ಎಂದಿದ್ದಾರೆ.

ಜಿಎಸ್ಟಿ ಮತ್ತು ನೋಟು ರದ್ಧತಿ ಕಾರ್ಯಗತಗೊಳಿಸುವಿಕೆ ಮತ್ತು ಅನುಷ್ಠಾನದ ಪ್ರಶ್ನೆಗೆ ಉತ್ತರಿಸಿದ್ದ ಮೂರ್ತಿ, ಪ್ರಧಾನಿ ಅವರು ಪ್ರಬಲವಾದ ಆರ್ಥಿಕ ಪ್ರಗತಿಯ ಮನಸ್ಸಿನಿಂದ ಸರ್ಕಾರವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ ಎಂದಿದ್ದಾರೆ. ಆರ್ ಬಿಐ, ಸಿಬಿಐನಂಥ ಸಂಸ್ಥೆಗಳ ಸ್ವಾಯುತ್ತತೆಗೆ ಬೆಂಬಲ ವ್ಯಕ್ತಪಡಿಸಿದರೂ, ಆರ್ ಬಿಐ ಗೊಂದಲವನ್ನು ಕೇಂದ್ರ ಸರ್ಕಾರ ಪರಿಹರಿಸಲು ಸೂಕ್ತ ಮಾರ್ಗ ಕಂಡುಕೊಳ್ಳಬೇಕಿದೆ ಎಂದರು.
'ನಾವು ಅನುಷ್ಠಾನದ ಜವಾಬ್ದಾರಿಯನ್ನು ಪ್ರಧಾನಿ ಒಬ್ಬರ ಮೇಲೆ ಹೊರಿಸಬಾರದು. ಅಧಿಕಾರಶಾಹಿ ಸಹ ಅದನ್ನು ಮಾಡಬೇಕಾಗುತ್ತದೆ'. ಆರ್ಥಿಕ ಬೆಳವಣಿಗೆ ಬಗ್ಗೆ ಪ್ರಧಾನಿ ಬಹಳ ಶಿಸ್ತು ಹೊಂದಿದ್ದು, ಅದನ್ನು ಮುಂದುವರೆಸಿಕೊಂಡು ನಡೆಯುವುದು ಉತ್ತಮ ಎಂದು ಹೇಳಿದರು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications