ನೋಟ್ ಬ್ಯಾನ್ ಬಗ್ಗೆ ಇದೇ ಮೊದಲು ತುಟಿಬಿಚ್ಚಿದ ರಘುರಾಮ್
ಅಪನಗದೀಕರಣ ಬೆಂಬಲಿಸಿರಲಿಲ್ಲ ಎಂದ ಆರ್ ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್. ಅಪನಗದೀಕರಣದಿಂದ ಸುಮಾರು 2 ರಿಂದ 2.50 ಲಕ್ಷ ಕೋಟಿ ರು. ನಷ್ಟ ಎಂದ ರಘುರಾಮ್.
Recommended Video

ನವದೆಹಲಿ, ಸೆಪ್ಟಂಬರ್ 4: ಕಳೆದ ವರ್ಷ ಮೋದಿ ಸರ್ಕಾರ ಕೈಗೊಂಡಿದ್ದ ಅಪನಗದೀಕರಣದ ವಿಚಾರವಾಗಿ ಭಾರತೀಯ ರಿಸರ್ವ್ ಬ್ಯಾಂಕ್ ನ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ಅವರು, ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ.
ಹಾಗಂತ ಅವರು ಮೋದಿ ವಿರುದ್ಧ ಹೇಳಿಕೆ ನೀಡಿಲ್ಲ. ತಮ್ಮ ಮನಸ್ಸಿನಲ್ಲಿನ ಎಲ್ಲಾ ವಿಚಾರವನ್ನೂ 'ಐ ಡೂ ವಾಟ್ ಐ ಡು' ಎಂಬ ಪುಸ್ತಕದಲ್ಲಿ ಅವರು ದಾಖಲಿಸಿದ್ದಾರೆ.

ಅಪನಗದೀಕರಣಕ್ಕೆ ನನ್ನ ವಿರೋಧವಿದೆ. ಇದನ್ನು ನಾನು ಪ್ರೋತ್ಸಾಹಿಸುವುದಿಲ್ಲ. ಇದರಿಂದ ದೇಶದ ಜಿಡಿಪಿಗೆ ಭಾರೀ ಹೊಡೆತ ಬೀಳುತ್ತದೆ. ಇಂಥ ನಿರ್ಧಾರಗಳನ್ನು ಕೈಗೊಳ್ಳುವಾಗ ಸಾಕಷ್ಟು ಪೂರ್ವ ತಯಾರಿ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ತಾವು ಆರ್ ಬಿಐ ಗವರ್ನರ್ ಆಗಿದ್ದ ವೇಳೆ, ಕೇಂದ್ರ ಸರ್ಕಾರ ಅಪನಗದೀಕರಣದ ಬಗ್ಗೆ ಚರ್ಚಿಸಿರಲಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಅಲ್ಲದೆ, ಇತ್ತೀಚೆಗೆ, ಆರ್ ಬಿಐಯು ಶೇ. 99ರಷ್ಟು ಹಳೇ ನೋಟುಗಳು ಮತ್ತೆ ಆರ್ ಬಿಐಗೆ ಬಂದಿವೆ ಎಂದು ಹೇಳಿತ್ತು. ಆದರೆ, ಇದು ಅಪನಗದೀಕರಣದ ಯಶಸ್ಸು ಎಂದು ಹೇಳಲಾಗದು ಎಂದು ರಘುರಾಮ್ ತಿಳಿಸಿದ್ದಾರೆ.
''ಅಪನಗದೀಕರಣ ಆಗಿದೆ. ಅದರ ಪರಿಣಾಮವಾಗಿ ಜಿಡಿಪಿಗೂ ಹೊಡೆತ ಬಿದ್ದಿದೆ. ಭಾರತ ಸರ್ಕಾರಕ್ಕೆ 2 ಲಕ್ಷ ಕೋಟಿ ರು. ಗಳಿಂದ 2.50 ಲಕ್ಷ ರು. ಗಳವರೆಗೂ ನಷ್ಟವಾಗಿರುವುದು ಮನಸ್ಸಿಗೆ ಬೇಸರವಾಗಿದೆ'' ಎಂದು ಅವರು ತಿಳಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications