WhatsAppನ ಹೊಸ ವೈಶಿಷ್ಟ್ಯ: ಅಪರಿಚಿತ ಕರೆ ಸೈಲೆಂಟ್ ಮಾಡಲು ಅವಕಾಶ
ಬೆಂಗಳೂರು, ಜೂನ್ 20: ಅಪರಿಚಿತ ಸಂಖ್ಯೆಗಳಿಂದ ಸ್ಪ್ಯಾಮ್ ಕರೆಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೆಟಾ WhatsAppನಲ್ಲಿ ಹೊಸ ವೈಶಿಷ್ಟ್ಯವನ್ನು ಪರಿಚಯಿಸಿದೆ.
ಇದು ವಾಟ್ಸಾಪ್ ಬಳಕೆದಾರರಿಗೆ ಅಪರಿಚಿತ ಕರೆಗಳನ್ನು ಸ್ವಯಂಚಾಲಿತವಾಗಿ ಮ್ಯೂಟ್ ಮಾಡಲು ಅನುವು ಮಾಡಿಕೊಡುತ್ತದೆ. ಈ ಹೊಸ ವೈಶಿಷ್ಟ್ಯವು WhatsApp ಅನ್ನು ಇನ್ನಷ್ಟು ಬಳಕೆದಾರರಿಗೆ ಖಾಸಗಿಯನ್ನಾಗಿ ಮಾಡಲಿದ್ದು, ಬಳಕೆದಾರರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡುತ್ತದೆ.

ಈ ವೈಶಿಷ್ಟ್ಯವು ಇನ್ನು ಬೀಟಾ ಪರೀಕ್ಷೆ ಹಂತದಲ್ಲಿದೆ. ಸ್ಥಿರ ಆವೃತ್ತಿಯು ಈಗ Android ಮತ್ತು iOS ಸ್ಮಾರ್ಟ್ಫೋನ್ ಬಳಕೆದಾರರಿಗೆ ಲಭ್ಯವಿದೆ. ಗೌಪ್ಯತೆ ಸೆಟ್ಟಿಂಗ್ಗಳ ಮೆನು ಮೂಲಕ ಸಕ್ರಿಯಗೊಳಿಸಿದಾಗ ಅಪ್ಲಿಕೇಶನ್ ಸ್ವಯಂಚಾಲಿತವಾಗಿ ಅಪರಿಚಿತ ಸಂಖ್ಯೆಗಳಿಂದ ಕರೆಗಳನ್ನು ನಿಶ್ಯಬ್ದಗೊಳಿಸುತ್ತದೆ.
ನಿಮ್ಮ ಫೋನ್ನಲ್ಲಿ ನೀವು WhatsAppನ ಇತ್ತೀಚಿನ ಆವೃತ್ತಿಯನ್ನು ಇನ್ಸ್ಟಾಲ್ ಮಾಡಿರುವಿರಾ ಎಂಬುದನ್ನು ಖಚಿತಪಡಿಸಿಕೊಳ್ಳಿ ಅಥವಾ ಅದನ್ನು Google Play Store ಅಥವಾ Apple App Store ಮೂಲಕ ಅಪ್ಡೇಟ್ ಮಾಡಿ. WhatsAppನ ಸ್ಥಿರ ಆವೃತ್ತಿಯೊಂದಿಗೆ Galaxy S23 Ultra ಮತ್ತು Realme 11 Pro+ ನಂತಹ ಫೋನ್ಗಳಲ್ಲಿ ಈ ವೈಶಿಷ್ಟ್ಯವನ್ನು ಬಳಸಲು ಈಗಾಗಲೇ ಚಾಲ್ತಿಯಲ್ಲಿದೆ ಎಂದು ವರದಿಗಳು ತಿಳಿಸಿವೆ.
ಅಪರಿಚಿತ ಕರೆ ಸೈಲಂಟ್ ಮಾಡುವ ಹಂತಗಳು
1. WhatsApp ತೆರೆಯಿರಿ
2. ಮೇಲಿನ ಬಲ ಮೂಲೆಯಲ್ಲಿರುವ ಮೆನುವಿನ ಮೇಲೆ ಕ್ಲಿಕ್ ಮಾಡಿ
3. ಸೆಟ್ಟಿಂಗ್ಗಳಿಗೆ ಹೋಗಿ
4. ಗೌಪ್ಯತೆ ಮೇಲೆ ಕ್ಲಿಕ್ ಮಾಡಿ
5. ಕರೆಗಳನ್ನು ಆಯ್ಕೆಮಾಡಿ
6. ಅಪರಿಚಿತ ಕರೆ ಮಾಡುವವರನ್ನು ಮ್ಯೌಟ್ ಆಕ್ಟಿವೇಟ್ ಮಾಡಿ.
ಮೆಟಾ ವಾಟ್ಸಾಪ್ಗೆ ಪ್ರತಿ ವಾರ ಹೊಸ ವೈಶಿಷ್ಟ್ಯಗಳನ್ನು ಸೇರಿಸುತ್ತಿದೆ. ಕಂಪನಿಯು ಇತ್ತೀಚೆಗೆ ಆಯ್ದ ಮಾರುಕಟ್ಟೆಗಳಲ್ಲಿ WhatsApp ಚಾನೆಲ್ಗಳನ್ನು ಪರಿಚಯಿಸಿದೆ. ಅಲ್ಲದೆ WhatsApp ಕಳುಹಿಸಿದ ಸಂದೇಶಗಳನ್ನು 15 ನಿಮಿಷಗಳವರೆಗೆ ಎಡಿಟ್ ಮಾಡುವ ಅವಕಾಶವನ್ನೂ ನೀಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications