ಷೇರುಪೇಟೆಯಲ್ಲಿ ಕರಡಿ ಕುಣಿತ: ಸೆನ್ಸೆಕ್ಸ್, ನಿಫ್ಟಿ ಕುಸಿತ
ನವದೆಹಲಿ, ಜನವರಿ 18: ಭಾರತೀಯ ಮಾರುಕಟ್ಟೆಯಲ್ಲಿ ಸೋಮವಾರ ಕರಡಿ ಕುಣಿತ ಜೋರಾಗಿದ್ದು, ಹೂಡಿಕೆದಾರರು ಎಲ್ಲಾ ವಿಭಾಗದಲ್ಲಿ ಲಾಭದ ಬುಕ್ಕಿಂಗ್ ಕಡೆಗೆ ಮೊರೆ ಹೋಗಿದ್ದಾರೆ. ಮುಂಬೈ ಷೇರುಪೇಟೆ ಸೆನ್ಸೆಕ್ಸ್ 470 ಪಾಯಿಂಟ್ಸ್ ಕುಸಿತ ಕಂಡರೆ, ರಾಷ್ಟ್ರೀಯ ಷೇರುಪೇಟೆ ನಿಫ್ಟಿ 152 ಪಾಯಿಂಟ್ಸ್ ಇಳಿಕೆ ಸಾಧಿಸಿದೆ.
ಬಿಎಸ್ಇ ಸೂಚ್ಯಂಕ ಸೆನ್ಸೆಕ್ಸ್ 470.40 ಪಾಯಿಂಟ್ಸ್ ಅಥವಾ ಶೇಕಡಾ 0.96ರಷ್ಟು ಏರಿಕೆ ಕಂಡಿದ್ದು 48,564.27 ಪಾಯಿಂಟ್ಸ್ ಮುಟ್ಟಿದೆ. ಎಸ್ಎಸ್ಇ ಸೂಚ್ಯಂಕ ನಿಫ್ಟಿ 152.40 ಪಾಯಿಂಟ್ಸ್ ಅಥವಾ ಶೇಕಡಾ 1.06ರಷ್ಟು ಏರಿಕೆಗೊಂಡು 14,281.30ಗೆ ತಲುಪಿದೆ. ಇಂದು 900 ಷೇರುಗಳು ಏರಿಕೆಯನ್ನ ಸಾಧಿಸಿದ್ದು, 2,074 ಷೇರುಗಳು ಕುಸಿತ ಕಂಡಿವೆ ಮತ್ತು 144 ಷೇರುಗಳ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ.
ಯುಪಿಎಲ್, ರಿಲಯನ್ಸ್ ಇಂಡಸ್ಟ್ರೀಸ್, ಟೈಟಾನ್ ಕಂಪನಿ, ಎಚ್ಡಿಎಫ್ಸಿ ಬ್ಯಾಂಕ್ ಮತ್ತು ಐಟಿಸಿ ನಿಫ್ಟಿಯಲ್ಲಿ ಪ್ರಮುಖ ಲಾಭ ಗಳಿಸಿದರೆ, ಟಾಟಾ ಸ್ಟೀಲ್, ಟಾಟಾ ಮೋಟಾರ್ಸ್, ಒಎನ್ಜಿಸಿ, ಹಿಂಡಾಲ್ಕೊ ಮತ್ತು ಸನ್ ಫಾರ್ಮಾ ನಷ್ಟ ಅನುಭವಿಸಿದ ಪ್ರಮುಖ ಷೇರುಗಳಾಗಿವೆ.

ಬಹುತೇಕ ಎಲ್ಲಾ ವಲಯ ಸೂಚ್ಯಂಕಗಳು ಶೇಕಡಾ 4ರಷ್ಟು ಕುಸಿತಗೊಂಡರೆ, ಆಟೋಮೊಬೈಲ್, ಪಿಎಸ್ಯು ಬ್ಯಾಂಕ್ ಮತ್ತು ಫಾರ್ಮಾ ಸೂಚ್ಯಂಕಗಳು ಶೇಕಡಾ 2ರಷ್ಟು ಕುಸಿದವು. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕಗಳು ತಲಾ 2 ರಷ್ಟು ಇಳಿಕೆಗೊಂಡಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications