ಬಿಜೆಪಿ ಜಯದ ಎಫೆಕ್ಟ್: ಸೆನ್ಸೆಕ್ಸ್, ನಿಫ್ಟಿಯಲ್ಲಿ ದಾಖಲೆಯ ಏರಿಕೆ
ಉತ್ತರ ಪ್ರದೇಶ ಚುನಾವಣಾ ಫಲಿತಾಂಶವು ದೇಶೀಯ ಷೇರು ಮಾರುಕಟ್ಟೆಯ ಮೇಲೆ ಗಾಢವಾದ ಪರಿಣಾಮ ಬೀರುತ್ತದೆ ಎಂದು ಮೊದಲೇ ತಜ್ಞರು ಅಂದಾಜಿಸಿದ್ದರು. ಈಗ ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆದ್ದಿದ್ದು ಷೇರು ಪೇಟೆಯ ಹುರುಪಿಗೆ ಕಾರಣವಾಗಿದೆ.
ಮುಂಬೈ, ಮಾರ್ಚ್ 14: ಇತ್ತೀಚೆಗೆ ನಡೆದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವುದು ನಿರೀಕ್ಷೆಯಂತೆ ಷೇರು ಪೇಟೆಯ ಮೇಲೂ ಸಕಾರಾತ್ಮಕ ಪರಿಣಾಮ ಬೀರಿದೆ.
ಸತತ ಮೂರು ದಿನಗಳ ರಜೆಯ ನಂತರ ಮಂಗಳವಾರ ಆರಂಭವಾಗುತ್ತಲೇ ಷೇರುಪೇಟೆ, ಸೆನ್ಸೆಕ್ಸ್ ಸುಮಾರು 600 ಅಂಕಗಳ ಏರಿಕೆ ಕಂಡು, 29,561ಕ್ಕೆ ಮುಟ್ಟಿತು.[ಬಿಜೆಪಿಗೆ ಭರ್ಜರಿ ಗೆಲುವು, ಮಂಗಳವಾರ ತಿಳಿಯಲಿದೆ ಷೇರುಪೇಟೆಯ ಒಲವು]

ಇನ್ನು, ನಿಫ್ಟಿಯು 188 ಅಂಕಗಳ ದಾಖಲೆಯ ಏರಿಕೆ ಕಂಡು ದಾಖಲೆಯ 9,122ಕ್ಕೆ ಬಂದು ಮುಟ್ಟಿತು. ಇನ್ನು, ರುಪಾಯಿ ಸಹ ಡಾಲರ್ ವಿರುದ್ಧದ ಸಮರದಲ್ಲಿ 66.17ರಷ್ಟು ಸಾಮರ್ಥ್ಯ ವೃದ್ಧಿಸಿಕೊಂಡಿತು. ಇದು ಕಳೆದೊಂದು ವರ್ಷದಲ್ಲಿ ರುಪಾಯಿ ಗಳಿಸಿದ ಅತಿ ಹೆಚ್ಚಿನ ಮೌಲ್ಯವಾಗಿದೆ. ಕಳೆದ ವಾರಾಂತ್ಯದಲ್ಲಿ ರುಪಾಯಿ ಮೌಲ್ಯ 66.74ರಷ್ಟಿತ್ತು.[ಐಸಿಐಸಿಐ ಬ್ಯಾಂಕಲ್ಲಿ ಹೆಚ್ಚು ವಂಚನೆ : ಆರ್ ಬಿ ಐ]
ಇನ್ನು, ಬಿಎಸ್ ಇ ಷೇರು ಮಾರುಕಟ್ಟೆಗೆ ಸುಮಾರು 1.31 ಲಕ್ಷ ರು. ಬಂಡವಾಳ ಹರಿದುಬಂದಿದೆ ಎಂದು ಮೂಲಗಳು ತಿಳಿಸಿವೆ. ಸ್ಥಿರ ಸರ್ಕಾರಗಳು ಹಾಗೂ ಉದ್ದಿಮೆ ಸ್ನೇಹಿ ಸರ್ಕಾರಗಳಿದ್ದರೆ ಹೀಗೆ ಬಂಡವಾಳದ ಹರಿವು ಹೆಚ್ಚಿರುತ್ತದೆ ಎಂದು ಮಾರುಕಟ್ಟೆ ತಜ್ಞರು ತಿಳಿಸಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications