ಎಲ್ಲ ಬ್ಯಾಂಕ್ಗಳನ್ನು ಖಾಸಗೀಕರಣ ಮಾಡೊಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ, ಮಾರ್ಚ್ 16: ಸಾರ್ವಜನಿಕ ವಲಯದ ಎಲ್ಲ ಬ್ಯಾಂಕ್ಗಳನ್ನೂ ಖಾಸಗೀಕರಣಗೊಳಿಸುವುದಿಲ್ಲ. ಏನೇ ಆದರೂ ಉದ್ಯೋಗಿಗಳ ಹಿತವನ್ನು ರಕ್ಷಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭರವಸೆ ನೀಡಿದ್ದಾರೆ.
ಖಾಸಗೀಕಣದ ಪ್ರಸ್ತಾಪ ವಿರೋಧಿಸಿ ಒಂಬತ್ತು ಬ್ಯಾಂಕ್ ಒಕ್ಕೂಟಗಳು ನಡೆಸುತ್ತಿರುವ ಎರಡು ದಿನಗಳ ಮುಷ್ಕರದ ನಡುವೆ ಸುದ್ದಿಗಾರರೊಂದಿಗೆ ಮಂಗಳವಾರ ಮಾತನಾಡಿದ ನಿರ್ಮಲಾ, 'ದೇಶದ ಆಕಾಂಕ್ಷೆಗಳನ್ನು ಬ್ಯಾಂಕುಗಳು ತಲುಪಬೇಕು ಎಂದು ನಾವು ಬಯಸಿದ್ದೇವೆ' ಎಂದರು.
'ಯಾವ ಬ್ಯಾಂಕುಗಳು ಖಾಸಗೀಕರಣಗೊಳ್ಳುವ ಸಂಭವವಿದೆಯೋ, ಅವುಗಳ ಪ್ರತಿ ಸಿಬ್ಬಂದಿ ಸದಸ್ಯರ ಹಿತಾಸಕ್ತಿಯನ್ನು ರಕ್ಷಿಸಲಾಗುವುದು. ಏನೇ ಕಷ್ಟಬಂದರೂ ಹಾಲಿ ಉದ್ಯೋಗಿಗಳ ಹಿತಾಸಕ್ತಿಯನ್ನು ಕಾಪಾಡಲಾಗುವುದು' ಎಂದು ನಿರ್ಮಲಾ ಸೀತಾರಾಮನ್ ಹೇಳಿದರು. ಮುಂದೆ ಓದಿ.

ಪಿಎಸ್ಬಿ ಮುಂದುವರಿಯುತ್ತದೆ
'ನಾವು ಪಿಎಸ್ಬಿಗಳನ್ನು (ಖಾಸಗಿ ಸಾರ್ವಜನಿಕ ಬ್ಯಾಂಕುಗಳು) ಮುಂದುವರಿಸುತ್ತೇವೆ ಎಂಬುದನ್ನು ಸಾರ್ವಜನಿಕ ವಲಯದ ಉದ್ಯಮಶೀಲ ನೀತಿ ಸ್ಪಷ್ಟವಾಗಿ ಹೇಳಿದೆ. ಎಲ್ಲ ಕೆಲಸಗಾರರ ಹಿತಾಸಕ್ತಿಗಳನ್ನು ಖಂಡಿತವಾಗಿಯೂ ಸಂಪೂರ್ಣವಾಗಿ ರಕ್ಷಿಸಲಾಗುವುದು' ಎಂದರು.

ಅದನ್ನೂ ಹೊರಗುತ್ತಿಗೆ ನೀಡಿರಬೇಕು
ಬ್ಯಾಂಕ್ಗಳ ಖಾಸಗೀಕರಣದ ಕುರಿತು ಟ್ವೀಟ್ ಮಾಡಿದ್ದ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ ನಿರ್ಮಲಾ, 'ರಾಹುಲ್ ಗಾಂಧಿ ಬಹುಶಃ ತಮ್ಮ ಹೇಳಿಕೆಗಳನ್ನು ಹೊರಗಿನವರಿಗೆ ಹೊರಗುತ್ತಿಗೆ ನೀಡಿರಬೇಕು. ಈ ಎರಡು ಸಾಲುಗಳು ಸಹಾಯ ಮಾಡುವುದಿಲ್ಲ. ಅವರು ಗಂಭೀರ ಚರ್ಚೆಯಲ್ಲಿ ತೊಡಗಿಸಿಕೊಳ್ಳುವುದನ್ನು ನಾನು ಬಯಸುತ್ತೇನೆ' ಎಂದು ವ್ಯಂಗ್ಯವಾಡಿದರು.

ಮೊದಲು ಹೋಮ್ವರ್ಕ್ ಮಾಡಿಕೊಳ್ಳಲಿ
'ಕಾಂಗ್ರೆಸ್ ಭ್ರಷ್ಟಾಚಾರವನ್ನು ರಾಷ್ಟ್ರೀಕರಣಗೊಳಿಸಿತ್ತು. ಇದಕ್ಕೆ ರಾಹುಲ್ ಗಾಂಧಿ ಅವರಿಗೆ ನಮ್ಮಿಂದ ಪ್ರತಿಕ್ರಿಯೆ ಬರಲಿದೆ. ರಾಹುಲ್ ಗಾಂಧಿ ಮೊದಲು ಆಲೋಚಿಸಿ ಹೋಮ್ ವರ್ಕ್ ಮಾಡಿಕೊಳ್ಳಲಿ. ಬಳಿಕ ನಮ್ಮ ವಿರುದ್ಧ ಆರೋಪ ಮಾಡಲಿ' ಎಂದು ಟೀಕಿಸಿದರು.

ಮೋದಿ ಆಪ್ತರಿಗೆ ಮಾರಾಟ
'ಭಾರತ ಸರ್ಕಾರವು ಲಾಭವನ್ನು ಖಾಸಗೀಕರಣ ಮಾಡುತ್ತಿದೆ ಮತ್ತು ನಷ್ಟವನ್ನು ರಾಷ್ಟ್ರೀಕರಣಗೊಳಿಸುತ್ತಿದೆ. ಪಿಎಸ್ಬಿಗಳನ್ನು ಮೋದಿ ಆಪ್ತ ಸ್ನೇಹಿತರಿಗೆ ಮಾರಾಟ ಮಾಡುತ್ತಿರುವುದು ಭಾರತದ ಹಣಕಾಸು ಭದ್ರತೆಯೊಂದಿಗಿನ ಅಪಾಯಕಾರಿ ರಾಜಿಯಾಗಿದೆ. ಮುಷ್ಕರ ನಡೆಸುತ್ತಿರುವ ಉದ್ಯೋಗಿಗಳೊಂದಿಗೆ ನಾನು ಸಹಾನುಭೂತಿಯಿಂದ ನಿಲ್ಲುತ್ತೇನೆ' ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದರು.
-
ಪ್ರಧಾನಿ ಮೋದಿಗೆ ಕರೆ ಮಾಡಿದ ಟ್ರಂಪ್: ಶಾಂತಿ ಸ್ಥಾಪನೆಗೆ ಭಾರತದ ಬೆಂಬಲ, ಮಹತ್ವ ಮಾತುಕತೆ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ












Click it and Unblock the Notifications