ವಿಲೀನದ ಬಳಿಕ ಯಾವ ಬ್ಯಾಂಕಿನ ಮಾರುಕಟ್ಟೆ ಮೌಲ್ಯ ಎಷ್ಟಾಗಲಿದೆ?
ನವದೆಹಲಿ, ಆಗಸ್ಟ್ 30: ದೇಶದ ಆರ್ಥಿಕತೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಪ್ರಧಾನಿ ನೇತೃತ್ವದ ಬಿಜೆಪಿ ಸರ್ಕಾರ ಹತ್ತು ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಂಡಿದೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರದಂದು ಸುದ್ದಿಗೋಷ್ಠಿ ನಡೆಸಿ ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆ ಬಗ್ಗೆ ವಿವರಣೆ ನೀಡಿದರು.
ದೇಶದ 10 ಪ್ರಮುಖ ಬ್ಯಾಂಕ್ ಗಳನ್ನು ವಿಲೀನ ಪ್ರಕ್ರಿಯೆಗೆ ಒಳಪಡಿಸಲಾಗುತ್ತಿದ್ದು, ನಾಲ್ಕು ಬ್ಯಾಂಕ್ ಗಳಾಗಲಿವೆ. ಈ ಪ್ರಮುಖ ವಿಲೀನಕ್ಕೆ ಚಾಲನೆ ನೀಡಲಾಗಿದೆ. ಈ ವಿಲೀನ ಪ್ರಕ್ರಿಯೆ ಪೂರ್ಣಗೊಳ್ಳುತ್ತಿದ್ದಂತೆ ದೇಶದಲ್ಲಿ 12 ಸಾರ್ವಜನಿಕ ವಲಯದ ಬ್ಯಾಂಕ್ ಗಳು ಮಾತ್ರ ಕಾರ್ಯನಿರ್ವಹಿಸಲಿವೆ. 2017ರಲ್ಲಿ 27 ಸಾರ್ವಜನಿಕ ವಲಯ ಬ್ಯಾಂಕ್ ಗಳಿದ್ದವು.

1. ಪಂಜಾಬ್ ನ್ಯಾಷನಲ್ ಬ್ಯಾಂಕ್ ಜೊತೆಗೆ ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಹಾಗೂ ಯುನೈಟೆಡ್ ಬ್ಯಾಂಕ್ ವಿಲೀನ. ವಿಲೀನದ ಬಳಿಕ ಎಸ್ಬಿಐ ನಂತರ ಎರಡನೇ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕಿಂಗ್ ಸಂಸ್ಥೆ ಎನಿಸಲಿದೆ. ವಿಲೀನಗೊಂಡ ಬ್ಯಾಂಕ್ ಗಳ ವಹಿವಾಟು ಸುಮಾರು 17.95 ಕೋಟಿ ರು ಆಗಲಿದ್ದು, 11,437 ಬ್ರ್ಯಾಂಚ್ ಗಳನ್ನು ಹೊಂದಲಿದೆ.
2. ಕೆನರಾ ಬ್ಯಾಂಕ್ ಹಾಗೂ ಸಿಂಡಿಕೇಟ್ ಬ್ಯಾಂಕ್ ವಿಲೀನ
3. ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ, ಆಂಧ್ರ ಬ್ಯಾಂಕ್ ಹಾಗೂ ಕಾರ್ಪೊರೇಷನ್ ಬ್ಯಾಂಕ್
4. ಇಂಡಿಯನ್ ಬ್ಯಾಂಕ್ ಹಾಗೂ ಅಲಹಾಬಾದ್ ಬ್ಯಾಂಕ್ ವಿಲೀನವಾಗಲಿವೆ.
In place of fragmented lending capacity with 27 PSBs in 2017, now 12 #PSBs post consolidation. बड़े बैंक अब अपना लक्ष्य रखेंगे global मार्केट पर, मँझले बैंक बनेंगे राष्ट्रीय स्तर के और कुछ बैंक स्थानीय नेतृत्व करेंगे। @PMOIndia @FinMinIndia @PIB_India #PSBsFor5TrillionEconomy pic.twitter.com/Z4dcyZOG5f
— Rajeev kumar (@rajeevkumr) August 30, 2019
ವಿಲೀನದ ಬಳಿಕದ ಪರಿಣಾಮ:
* ಆರ್ ಬಿಐ ಆರ್ಥಿಕ ಮಾರ್ಗದರ್ಶಿ ಸೂತ್ರ, ಬೇಸೆಲ್ ನಿಯಮಗಳ ಅಡಿಯಲ್ಲಿ ವಿಲೀನ ಪ್ರಕ್ರಿಯೆ ನಡೆಯಲಿದೆ.
* ಬ್ಯಾಂಕಿಂಗ್ ಕ್ಷೇತ್ರದ ಸುಧಾರಣೆಗಾಗಿ 70,000 ಕೋಟಿ ರು ಸಾರ್ವಜನಿಕ ವಲಯದ ಬ್ಯಾಂಕುಗಳಿಗೆ ತುಂಬಲು ಸರ್ಕಾರ ಮುಂದಾಗಿರುವುದನ್ನು ಇಲ್ಲಿ ಸ್ಮರಿಸಬಹುದು. ಬ್ಯಾಂಕುಗಳ ಮಾರುಕಟ್ಟೆ ಮೌಲ್ಯದ ಮರು ಯೋಜನೆಯ ಭಾಗವಾಗಿ ವಿಲೀನ ಪ್ರಕ್ರಿಯೆಯಾಗಲಿದೆ.
* ಇದರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 16,000 ಕೋಟಿ ರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ವಿಲೀನಕ್ಕೆ 11,700 ಕೋಟಿ ರು, ಕೆನರಾ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 6,500 ಕೋಟಿ ರು ಹಾಗೂ ಇಂಡಿಯನ್ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 2,500 ಕೋಟಿ ರು ಸಿಗಲಿದೆ.
* ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನದ ಬಳಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿಲ್ಲ, ಹೀಗಾಗಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಭೀತಿ ಬೇಡ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications