ಹೊಸ ಸಿಮ್ ಖರೀದಿಸುವ ಮುನ್ನ ಈ ಸುದ್ದಿ ತಪ್ಪದೇ ಓದಿ
ನವದೆಹಲಿ, ಏಪ್ರಿಲ್ 28: ಹೊಸ ಸಿಮ್ ಅಲ್ಲದೆ, ಬ್ಯಾಂಕ್ ಖಾತೆ ಸೇರಿದಂತೆ ಎಲ್ಲಾ ಸೌಲಭ್ಯಗಳ ಮುಂದುವರಿಕೆಗೆ ಆಧಾರ್ ಕಾರ್ಡ್, ಲೈವ್ ಫೋಟೋ ಜತೆಗೆ ಮುಖ ದೃಢಿಕರಣ(face recognition) ಕಡ್ಡಾಯವಾಗಲಿದೆ ಎಂಬ ನಿಯಮ ಕೊಂಚ ಬದಲಾವಣೆಯಾಗಿದೆ.
ಮುಖ್ಯವಾಗಿ ಸಿಮ್ ಕಾರ್ಡ್ ಖರೀದಿಯಲ್ಲಿ ಹೊಸ ನಿಯಮ ಜಾರಿಗೆ ಬರಲಿದ್ದು, ಹೊಸ ಸಿಮ್ ಖರೀದಿ ಮಾಡಲು ಆಧಾರ್ ಕಾರ್ಡ್ ಕಡ್ಡಾಯ ಎಂಬ ನಿಯಮ ತೆಗೆದು ಹಾಕಲಾಗಿದೆ. ಮೇ 1 ರ ನಂತರ ಹೊಸ ಸಿಮ್ ಕಾರ್ಡ್ ಖರೀದಿ ನಿಯಮ ಬದಲಾವಣೆ ಜಾರಿಗೆ ಬರಲಿದೆ.
ಮೊಬೈಲ್ ಫೋನ್ ಸಿಮ್ ನಂಬರ್ ಹಾಗೂ ಆಧಾರ್ ವಿಶಿಷ್ಟ ಗುರುತಿನ ಚೀಟಿ ಸಂಖ್ಯೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು

ಟೆಲಿಕಾಂ ಕಂಪನಿಗಳು ಡಿಜಿಟಲ್ ಕೆವೈಸಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದ್ದು, ಕೆಲವು ಗಂಟೆಯೊಳಗೆ ಗ್ರಾಹಕರ ದಾಖಲೆ ಪರಿಶೀಲನೆ ಹಾಗೂ ಹೊಸ ಸಿಮ್ ಆಕ್ಟಿವೇಷನ್ ಜಾರಿಗೊಳ್ಳಲಿದೆ. ಇನ್ನೊಂದು ಮುಖ್ಯ ಸಂಗತಿಯೆಂದರೆ, ಒಂದೇ ದಾಖಲೆ ಪತ್ರದಲ್ಲಿ ಒಂದು ದಿನ ಎರಡು ಸಿಮ್ ಕಾರ್ಡ್ ಖರೀದಿ ಮಾಡಬಹುದಾಗಿದೆ. ಒಂದು ವಿಳಾಸ ದೃಢೀಕೃತ ಐಡಿ ನೀಡಿ ಒಟ್ಟು 9 ಸಿಮ್ ಪಡೆಯಬಹುದು.
ಹೊಸ ಸಿಮ್ ನೀಡುವ ವೇಳೆ ಬೆರಳಚ್ಚಿನ ಜೊತೆ ಮುಖದ ದೃಢೀಕರಣ ಪಡೆಯಬೇಕಾಗುತ್ತದೆ. ಇದನ್ನು ಉಲ್ಲಂಘನೆ ಮಾಡಿದರೆ ದಂಡ ವಿಧಿಸಲಾಗುವುದು ಎಂದು ಯುಐಡಿಎಐ ಹೇಳಿದೆ.
ವರ್ಚ್ಯುಯಲ್ ಆಧಾರ್ ಕಾರ್ಡ್ ಬಳಸಿದರೆ ಬೆರಳಚ್ಚು ಅಥವಾ ಕಣ್ಣಿನ ಗುರುತು ನೀಡಿದರೆ ಸಾಕು. ಇಕೈವೆಸಿ ದೃಢಿಕರಣವಾದ ಬಳಿಕ ಕೂಡಾ ಲೈವ್ ಫೋಟೋವನ್ನು ಸಿಮ್ ಆಕ್ಟಿವೇಟ್ ಮಾಡಲು, ದೃಢೀಕರಣಕ್ಕಾಗಿ ಬಳಸಲಾಗುತ್ತದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications