ಕೇಂದ್ರ ಬಜೆಟ್ ಮಂಡನೆಗೂ ಮುನ್ನ ನೌಕರ ವರ್ಗಕ್ಕೆ ನೆಮ್ಮದಿಯ ಸುದ್ದಿ
ನವದೆಹಲಿ, ಜೂನ್ 30: ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಕಡಿಮೆ ಮಾಡುವ ವಿತ್ತ ಸಚಿವಾಲಯದ ಶಿಫಾರಸ್ಸನ್ನು ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ (ಇಪಿಎಫ್ ಒ) ತಿರಸ್ಕರಿಸಿದೆ. ಹೀಗಾಗಿ, ಕೇಂದ್ರ ಬಜೆಟ್ ಮಂಡನೆಗೂ ಮುನ್ನ ನೌಕರ ವರ್ಗಕ್ಕೆ ನೆಮ್ಮದಿಯ ಸುದ್ದಿ ಸಿಕ್ಕಿದೆ.
ಆದಾಯ ತೆರಿಗೆ ಮೇಲಿನ ವಿನಾಯಿತಿಯ ಪ್ರಮಾಣವನ್ನು ಹೆಚ್ಚಿಸುವ ಮೂಲಕ ಮಧ್ಯಮ ವರ್ಗದ ನೌಕರರಿಗೆ ಖುಷಿ ನೀಡಿದ್ದ ಕೇಂದ್ರ ಸರ್ಕಾರ, ಮತ್ತೊಂದು ಸಿಹಿ ಸುದ್ದಿ ನೀಡಿತ್ತು.
ನೌಕರರ ಭವಿಷ್ಯ ನಿಧಿಯ (ಇಪಿಎಫ್) ಮೇಲಿನ ಬಡ್ಡಿದರವನ್ನು ಶೇ 0.10ರಷ್ಟು ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ನಿರ್ಧಾರ ಪ್ರಕಟಿಸಿತ್ತು. ಆದರೆ, ಈ ಬಾರಿಯ ಮೋದಿ ಸರ್ಕಾರ್ 2.0ನ ಬಜೆಟ್ ಗೂ ಮುನ್ನ ಪಿಎಫ್ ಬಡ್ಡಿದರವನ್ನು ತಗ್ಗಿಸುವ ಪ್ರಸ್ತಾಪನೆ ಬಂದಿತ್ತು.

ಲೋಕಸಭೆ ಚುನಾವಣೆಗೂ ಮುನ್ನ ಶೇ 8.55ರಷ್ಟಿದ್ದ ಇಪಿಎಫ್ ಬಡ್ಡಿದರವು ಶೇ 8.65ಕ್ಕೆ ಹೆಚ್ಚಳ ಮಾಡಲಾಗಿತ್ತು. ಅದರೆ, ಕಾರ್ಮಿಕ ಸಚಿವಾಲಯ, ಇಪಿಎಫ್ ಒ ನಿರ್ಧಾರವನ್ನು ವಿತ್ತ ಸಚಿವಾಲಯ ವಿರೋಧಿಸಿತ್ತು. ಬ್ಯಾಂಕಿಗೆ ಠೇವಣಿ ದರ ಹೆಚ್ಚಳವಾಗಿದ್ದು, ಸರಿ ಹೊಂದಿಸಲು ಪಿಎಫ್ ಬಡ್ಡಿದರ ತಗ್ಗಿಸುವಂತೆ ಸೂಚಿಸಲಾಗಿತ್ತು.
ಬಡ್ಡಿದರ ಏರಿಕೆ ನಿರ್ಧಾರದಿಂದ ಆರು ಕೋಟಿ ಗ್ರಾಹಕರಿಗೆ ಅನುಕೂಲವಾಗಲಿದ್ದು, ಕೇಂದ್ರ ಸರ್ಕಾರಕ್ಕೆ 151 ಕೋಟಿ ರೂಪಾಯಿ ಹೆಚ್ಚುವರಿ ಹೊರೆಯಾಗಲಿದೆ.
ಪಿಎಫ್ ಲೆಕ್ಕಾಚಾರ: ಮೂಲ ವೇತನ ಮತ್ತು ತುಟ್ಟಿಭತ್ಯೆ(ಡಿಎ) ಒಟ್ಟು ಮೊತ್ತದ ಶೇ 12ರಷ್ಟು ಪರಿಗಣಿಸಲಾಗುತ್ತದೆ. ಈ ಪೈಕಿ ಉದ್ಯೋಗದಾತರ ವಂತಿಗೆ ಶೇ 3.67ರಷ್ಟು ಪಿಎಫ್ ಗೆ ಹಾಗೂ ಶೇ 8.33ರಷ್ಟು ಪಿಎಫ್ ಪಿಂಚಣಿ ನಿಧಿಗೆ ಹಾಗೂ ಶೇ 0.5% ಉದ್ಯೋಗಿಗಳ ವಿಮಾ ಯೋಜನೆಗೆ ಸೇರಲಿದೆ. ನೌಕರನ ಸಂಬಳ 15 ಸಾವಿರಕ್ಕಿಂತ ಕಡಿಮೆಯಿದ್ರೆ ಆತನ ಸಂಬಳದಲ್ಲಿ ಪ್ರತಿ ತಿಂಗಳು ಶೇಕಡಾ 12ರಷ್ಟು ಭಾಗ ಪಿಎಫ್ ಖಾತೆ ಸೇರುತ್ತದೆ. ಕಂಪನಿ ಶೇಕಡಾ 8.33ರಷ್ಟು ಪಿಂಚಣಿ ಯೋಜನೆಗೆ ಹಾಗೂ ಶೇಕಡಾ 3.67ರಷ್ಟು ಇಪಿಎಫ್ ಗೆ ಹಣ ನೀಡುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications