Breaking: ಭಾರತೀಯ ನೋಟಿನಲ್ಲಿ ಗಾಂಧಿ ಜೊತೆ ಟ್ಯಾಗೋರ್, ಕಲಾಂ ಫೋಟೋ ಹಾಕಲ್ಲ
ನವದೆಹಲಿ, ಜೂನ್ 6: ಭಾರತದಲ್ಲಿ ಅಸ್ತಿತ್ವದಲ್ಲಿರುವ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.
ದೇಶದ ಕರೆನ್ಸಿಗಳ ಮೇಲೆ ಮಹಾತ್ಮ ಗಾಂಧಿಯವರ ಭಾವಚಿತ್ರವನ್ನು ಬದಲಾಯಿಸುವ ಕುರಿತು ಸಾಕಷ್ಟು ವದಂತಿಗಳು ಹರಡಿದ ಬೆನ್ನಲ್ಲೇ ಆರ್ಬಿಐ ಈ ಸ್ಪಷ್ಟನೆ ನೀಡಿದ್ದು, ಎಲ್ಲ ವದಂತಿಗಳನ್ನು ತಳ್ಳಿ ಹಾಕಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಕರೆನ್ಸಿ ನೋಟಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿಯ ಚಿತ್ರದ ಜೊತೆಗೆ, ಮತ್ತಿಬ್ಬರು ದೇಶದ ಗಣ್ಯರ ಚಿತ್ರವನ್ನೂ ಹಾಕಲು ಚಿಂತನೆ ನಡೆಸಿದೆ ಎಂದು ವರದಿಯಾಗಿತ್ತು.

ಗಾಂಧೀಜಿ ಜೊತೆ ಟ್ಯಾಗೋರ್, ಕಲಾಂ ಫೋಟೋ:
ದೇಶದ ಕರೆನ್ಸಿ ನೋಟುಗಳಲ್ಲಿ ಬಹು ಅಂಕಿಗಳ ವಾಟರ್ ಮಾರ್ಕ್ ಅನ್ನು ಬಳಸುವ ಉದ್ದೇಶದಿಂದ ಮಹಾತ್ಮ ಗಾಂಧೀಜಿ ಭಾವಚಿತ್ರದ ಜೊತೆಗೆ ರವೀಂದ್ರನಾಥ ಟ್ಯಾಗೋರ್ ಮತ್ತು ಮಾಜಿ ರಾಷ್ಟ್ರಪತಿ ಡಾ.ಎ.ಪಿ.ಜೆ ಅಬ್ದುಲ್ ಕಲಾಂ ಚಿತ್ರವನ್ನೂ ಮುಂದಿನ ದಿನಗಳಲ್ಲಿ ಕರೆನ್ಸಿ ನೋಟಿನಲ್ಲಿ ಬರುವ ಸಾಧ್ಯತೆಯಿದೆ ಎನ್ನುವ ಬಗ್ಗೆ ವರದಿಗಳು ಹರಿದಾಡಿದ್ದವು.

ಎರಡು ವಿಭಿನ್ನ ಸೆಟ್ ಕರೆನ್ಸಿ ನೋಟುಗಳ ಪೈಕಿ ಒಂದನ್ನು ಅಂತಿಮಗೊಳಿಸಿ ಕೇಂದ್ರ ವಿತ್ತ ಸಚಿವಾಲಯಕ್ಕೆ ಕಳುಹಿಸಿಕೊಡುವಂತೆ ಐಐಟಿ ಪ್ರಾಧ್ಯಾಪಕ ಶಹಾನಿರಿಗೆ ಸೂಚಿಸಲಾಗಿದೆ. ಉನ್ನತ ಮಟ್ಟದ ಸಭೆಯ ನಂತರ ಈ ಬಗ್ಗೆ ಅಂತಿಮ ನಿರ್ಧಾರವನ್ನು ಕ್ಯಾಬಿನೆಟ್ನಲ್ಲಿ ತೆಗೆದುಕೊಳ್ಳಲಾಗುವುದು.
ರಿಸರ್ವ್ ಬ್ಯಾಂಕಿನ ಆಂತರಿಕ ಸಮಿತಿಯು ಎರಡು ವರ್ಷದ ಕೆಳಗೆಯೇ ಮಹಾತ್ಮ ಗಾಂಧಿ ಜೊತೆ ಟ್ಯಾಗೋರ್ ಮತ್ತು ಕಲಾಂ ಅವರ ಚಿತ್ರವನ್ನು ಸೇರಿಸುವಂತೆ ಪ್ರಸ್ತಾಪಿಸಲಾಗಿತ್ತು. ಈ ಹಿನ್ನಲೆ ವಿನ್ಯಾಸವನ್ನು ಸಿದ್ದ ಪಡಿಸುವಂತೆ ಮೈಸೂರು ಮತ್ತು ಹೊಶಂಗಾಬಾದ್ ನಲ್ಲಿರುವ ಕರೆನ್ಸಿ ನೋಟ್ ಮುದ್ರಣಾಲಯಕ್ಕೆ ಸೂಚನೆ ನೀಡಲಾಗಿತ್ತು ಎಂದು ವರದಿಯಾಗಿತ್ತು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications