ಡೆಬಿಟ್ ಕಾರ್ಡ್ ಬಳಕೆದಾರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ
Recommended Video

ನವದೆಹಲಿ, ಜನವರಿ 02: ಅಪನಗದೀಕರಣ ಜಾರಿಗೊಂಡ ಬಳಿಕ ಡಿಜಿಟಲ್ ಇಂಡಿಯಾ ಸೇವೆ, ನಗದು ರಹಿತ ವಹಿವಾಟಿಗೆ ಕೇಂದ್ರ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಾ ಬಂದಿದೆ.
ಡೆಬಿಟ್ ಕಾರ್ಡ್ ಬಳಕೆದಾರರು, ಸಣ್ಣವರ್ತಕರಿಗೆ ಹೇರಿಕೆ ಎನಿಸುತ್ತಿದ್ದ ಮರ್ಚಂಟ್ ಡಿಸ್ಕೌಂಟ್ ರೇಟ್(ಎಂಡಿಆರ್) ಮೇಲೆ ಸರ್ಕಾರ ಕಡಿವಾಣ ಹಾಕಿದೆ. ಈ ಬಗ್ಗೆ ಕೇಂದ್ರ ಸಚಿವ ಸಂಪುಟ ನಿರ್ಧಾರ ಕೈಗೊಂಡಾಗ ಒನ್ಇಂಡಿಯಾ ಕನ್ನಡದಲ್ಲಿ ಸುದ್ದಿ ಪ್ರಕಟಿಸಲಾಗಿತ್ತು.
ಇದರಂತೆ, ಜನವರಿ 01, 2018ರಿಂದಲೇ ಹೊಸ ನಿಯಮ ಜಾರಿಗೆ ಬರಲಿದ್ದು, 2000 ರುಪಾಯಿ ತನಕದ ನಗದು ರಹಿತ ಕಾರ್ಡ್ ಬಳಕೆ ವಹಿವಾಟಿನ ಮೇಲೆ ಎಂಡಿಆರ್ ಶುಲ್ಕ ವಿಧಿಸಲಾಗುವುದಿಲ್ಲ ಎಂದು ವಿತ್ತ ಸಚಿವಾಲಯ ಸೋಮವಾರದಂದು ಪ್ರಕಟಿಸಿದೆ.

ಡೆಬಿಟ್ ಕಾರ್ಡ್, BHIM ಅಪ್ಲಿಕೇಷನ್ ಅಥವಾ ಯಾವುದೇ ಆಧಾರ್ ಆಧಾರಿತ ಪೇಮೆಂಟ್ ವ್ಯವಸ್ಥೆ ಮೂಲಕ 2,000 ರುಪಾಯಿ ವರೆಗಿನ ವಹಿವಾಟಿನ ಮೇಲೆ ಯಾವುದೇ ಶುಲ್ಕ ಇರುವುದಿಲ್ಲ .ಇದರಿಂದ ಸರ್ಕಾರದ ಬೊಕ್ಕಸಕ್ಕೆ 2,512 ಕೋಟಿ ರು ಹೊರೆ ಬೀಳಲಿದೆ.
Happy Digital 2018. Dec Qtr BHIM txn rise 86% to 145.6 M with value of 13174 Cr. Further impetus to Digital Payments, Govt 2 reimburse charges for txns upto Rs 2000 on debit cards/ BHIM. Zero charges on merchants. Go Digital, Embrace Transparency @PMOIndia @FinminIndia @PIB_India pic.twitter.com/5ai3G0IoTD
— Rajeev kumar (@rajeevkumr) January 1, 2018
ಡಿಜಿಟಲ್ ವಹಿವಾಟನ್ನು ಉತ್ತೇಜಿಸಲು ಕೇಂದ್ರ ಸರ್ಕಾರ ಈ ಶುಲ್ಕ ಕಡಿತಗೊಳಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರವೇ ವರ್ತಕರ ರಿಯಾಯಿತಿ ದರವನ್ನು (ಎಂಡಿಆರ್) ಪಾವತಿ ಮಾಡಲಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications