10 ಬ್ಯಾಂಕುಗಳು ವಿಲೀನವಾಗಿ 4 ಬ್ಯಾಂಕ್, ಉದ್ಯೋಗ ಕಡಿತ ಭೀತಿ ಬೇಡ
ನವದೆಹಲಿ, ಆಗಸ್ಟ್ 30: ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆಗಾಗಿ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ನಿರ್ಧಾರಗಳ ಪೈಕಿ ಬ್ಯಾಂಕ್ ವಿಲೀನ ಪ್ರಕ್ರಿಯೆಯೂ ಸೇರಿದೆ. ದೇಶದ ಜಿಡಿಪಿ ಮೊದಲ ತ್ರೈಮಾಸಿಕದಲ್ಲೇ ಕುಸಿದು 5% ರಷ್ಟಿದೆ. ಆಟೋಮೊಬೈಲ್ ಸೇರಿ ಉತ್ಪಾದನಾ ಕ್ಷೇತ್ರಗಳಲ್ಲಿ ಉದ್ಯೋಗ ಕಡಿತ ಮುಂದುವರೆದಿದೆ. ಹೀಗಾಗಿ, ಇಂದು ಘೋಷಣೆಗೊಂಡ ಬ್ಯಾಂಕ್ ವಿಲೀನ ಪ್ರಕ್ರಿಯೆಯಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದ ಸಿಬ್ಬಂದಿಗೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಅಭಯ ನೀಡಿದ್ದಾರೆ.
"ಈ ಹಿಂದೆ ಬ್ಯಾಂಕ್ ಆಫ್ ಬರೋಡಾ, ವಿಜಯ ಬ್ಯಾಂಕ್ ಹಾಗೂ ದೇನಾ ಬ್ಯಾಂಕ್ ವಿಲೀನವಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿವೆ. ವಿಲೀನದ ಬಳಿಕ ಸಿಬ್ಬಂದಿಗಳನ್ನು ಕೆಲಸದಿಂದ ತೆಗೆದು ಹಾಕಿಲ್ಲ, ಹೀಗಾಗಿ, ಈಗ 10 ಬ್ಯಾಂಕ್ ವಿಲೀನದ ಬಳಿಕ ಹೊರ ಹೊಮ್ಮುವ 4 ಬ್ಯಾಂಕ್ ಗಳ ಉದ್ಯೋಗಿಗಳು ಸೇರಿದಂತೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಉದ್ಯೋಗ ಕಡಿತದ ಭೀತಿ ಬೇಡ" ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.
Counter view on the Bank mergers by @kaul_vivek . My take is that while jobs may not be shed immediately there could be a policy to gradually downsize as people retire achieving same result over 5 years.Hopefully this will be done. If not then mergers will make little sense https://t.co/JCsd0m7PNK
— Sumanth Raman (@sumanthraman) August 30, 2019
ಬ್ಯಾಂಕಿಂಗ್ ಕ್ಷೇತ್ರಕ್ಕೆ ಉತ್ತೇಜನ:
2017ರಲ್ಲಿ ಒಟ್ಟಾರೆ 27 ಸಾರ್ವಜನಿಕ ವಲಯದ ಬ್ಯಾಂಕ್(PSB) ಗಳಿದ್ದವು ಈಗ 12ಕ್ಕಿಳಿದಿವೆ. 2018-19ರ ಆರ್ಥಿಕ ವರ್ಷದಲ್ಲಿ 65,000 ಕೋಟಿ ರು PSBಗಳ ಮರು ಮಾರುಕಟ್ಟೆ ಮೌಲ್ಯಕ್ಕೆ ಮೀಸಲಿಡಲಾಗಿತ್ತು, ಡಿಸೆಂಬರ್ 31, 2018ರ ಅವಧಿಗೆ 51,533 ಕೋಟಿ ರು ನೀಡಲಾಗಿತ್ತು. ಇದಕ್ಕೂ ಹಿಂದಿನ ಆರ್ಥಿಕ ವರ್ಷದಲ್ಲಿ ಬ್ಯಾಂಕಿಂಗ್ ಕ್ಷೇತ್ರಕ್ಕೆ ಉತ್ತೇಜನ ನೀಡಲು ಸರ್ಕಾರ 90,000 ಕೋಟಿ ಮೀಸಲಿಟ್ಟಿತ್ತು.

ಈಗ 10 PSBಗಳಿಗೆ ಒಟ್ಟಾರೆ, 55,250 ಕೋಟಿ ರು ತುಂಬಲಾಗುತ್ತಿದ್ದು, ಇದರಲ್ಲಿ ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 16,000 ಕೋಟಿ ರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ವಿಲೀನಕ್ಕೆ 11,700 ಕೋಟಿ ರು, ಕೆನರಾ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 6,500 ಕೋಟಿ ರು ಹಾಗೂ ಇಂಡಿಯನ್ ಬ್ಯಾಂಕ್ ನೇತೃತ್ವದ ವಿಲೀನಕ್ಕೆ 2,500 ಕೋಟಿ ರು ಸಿಗಲಿದೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications