ಟ್ರಾಯ್ ಆದೇಶ: ಜಿಯೋ ಸಮ್ಮರ್ ಆಫರ್ ನಲ್ಲಿ ಬದಲಾವಣೆ
ಜಿಯೋ ವಿರುದ್ಧ ಇತರ ಟೆಲಿಕಾಂ ಕಂಪನಿಗಳು ಟ್ರಾಯ್ ಗೆ ದೂರು ನೀಡಿದ್ದವು. ಈ ಹಿನ್ನೆಲೆಯಲ್ಲಿ, ಟ್ರಾಯ್ ಸಂಸ್ಥೆಯು ಜಿಯೋ ಸಂಸ್ಥೆಗೆ ಈಗ ಚಾಲ್ತಿಯಲ್ಲಿರುವ ಮೂರು ತಿಂಗಳ ಸಮ್ಮರ್ ಆಫರ್ ನಿಲ್ಲಿಸುವಂತೆ ಸೂಚಿಸಿದೆ.
ನವದೆಹಲಿ, ಏಪ್ರಿಲ್ 6: ಹೆಚ್ಚೆಚ್ಚು ಗ್ರಾಹಕರನ್ನು ಸೆಳೆಯಲು ಜಿಯೋ ಟೆಲಿಕಾಂ ಸಂಸ್ಥೆಯು ಪದೇ ಪದೇ ನೀಡುತ್ತಿದ್ದ ಆಫರ್ ಗಳ ಭರಾಟೆಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ.
ಇತ್ತೀಚೆಗೆ, ಆ ಕಂಪನಿಯು ಬಿಡುಗಡೆಗೊಳಿಸಿದ್ದ ಜಿಯೋ ಸಮ್ಮರ್ ಆಫರ್ ಅನ್ನು ಬದಲಿಸಿಕೊಳ್ಳುವಂತೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಆದೇಶಿದ್ದು, ಈ ಹಿನ್ನೆಲೆಯಲ್ಲಿ ತನ್ನ ಸಮ್ಮರ್ ಆಫರ್ ನಲ್ಲಿ ಕೆಲ ಬದಲಾವಣೆಗಳನ್ನು ಅದು ಮಾಡಿಕೊಂಡಿದೆ.

ಕಳೆದ ವರ್ಷ ಜಿಯೋ ಸಂಸ್ಥೆ ಆರಂಭವಾದಾಗಿನಿಂದ ಒಂದಿಲ್ಲೊಂದು ಆಫರ್ ಗಳಲ್ಲಿ ತನ್ನ ಗ್ರಾಹಕರನ್ನು ತೇಲಾಡಿಸುತ್ತಿರುವ ಜಿಯೋ ವಿರುದ್ಧ ಇತರ ಟೆಲಿಕಾಂ ಕಂಪನಿಗಳು ಟ್ರಾಯ್ ಗೆ ದೂರು ನೀಡಿದ್ದವು. ಈ ಹಿನ್ನೆಲೆಯಲ್ಲಿ, ಟ್ರಾಯ್ ಸಂಸ್ಥೆಯು ಜಿಯೋ ಸಂಸ್ಥೆಗೆ ಈಗ ಚಾಲ್ತಿಯಲ್ಲಿರುವ ಮೂರು ತಿಂಗಳ ಸಮ್ಮರ್ ಆಫರ್ ನಿಲ್ಲಿಸುವಂತೆ ಸೂಚಿಸಿದೆ.
ಕಳೆದ ತಿಂಗಳ 31ರಂದು ಜಿಯೋ ಸಮ್ಮರ್ ಆಫರ್ ಘೋಷಿಸಿದ್ದ ಜಿಯೋ ಸಂಸ್ಥೆ, ತನ್ನಲ್ಲಿ ಪ್ರೈಮ್ ಸದಸ್ಯತ್ವ ಪಡೆದ ತನ್ನ ಗ್ರಾಹಕರು 303 ರು. ಗಳಿಗೆ ರೀಚಾರ್ಜ್ ಮಾಡಿಸಿದರೆ ಸಾಕು ಅವರು ಮೂರು ತಿಂಗಳ ಕಾಲ ಉಚಿತವಾಗಿ ಕರೆ ಹಾಗೂ ಡೇಟಾ ಸೌಕರ್ಯ ಪಡೆಯಬಹುದಾಗಿತ್ತು. ಆದರೆ, ಈ ಸೌಲಭ್ಯಕ್ಕೆ ಬ್ರೇಕ್ ಬಿದ್ದಿದ್ದು, 303 ಹಾಗೂ ಅದಕ್ಕಿಂತ ಹೆಚ್ಚು ರು.ಗಳ ರೀಚಾರ್ಜ್ ಮಾಡಿಸುವವರು, ಇತರ ನೆಟ್ ವರ್ಕ್ ಗಳಂತೆ ಕೇವಲ 30 ದಿನಗಳಿಗೆ ಮಾತ್ರ ಜಿಯೋ ಸೌಲಭ್ಯ ಪಡೆಯಲಿದ್ದಾರೆ.
ಆದರೆ, ಪ್ರೈಮ್ ಸದಸ್ಯತ್ವ ಪಡೆದು 303 ಹಾಗೂ ಅದಕ್ಕಿಂತ ಮೇಲ್ಪಟ್ಟ ದರಗಳಲ್ಲಿ ರೀಚಾರ್ಜ್ ಮಾಡಿಸಿ ಸಮ್ಮರ್ ಆಫರ್ ನಲ್ಲಿ ನೋಂದಾಯಿಸಿಕೊಂಡಿದ್ದ ಗ್ರಾಹಕರಿಗೆ ಈ ಮೊದಲು ಘೋಷಿಸಿದ್ದಂತೆ 3 ತಿಂಗಳ ಉಚಿತ ಡೇಟಾ, ಕರೆ ಆಫರ್ ಮುಂದುವರಿಯಲಿದೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications