ಈ ಅವಧಿಯಲ್ಲಿ NEFT ಮೂಲಕ ಹಣ ವರ್ಗಾವಣೆ ಸಾಧ್ಯವಿಲ್ಲ: ಆರ್ಬಿಐ
ನವದೆಹಲಿ, ಮೇ 17: ಆನ್ಲೈನ್ನಲ್ಲಿ ಹಣ ವರ್ಗಾವಣೆ ಮಾಡುವ ಗ್ರಾಹಕರ ಗಮನಕ್ಕೆ, ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ಫರ್ (ಎನ್ಇಎಫ್ಟಿ) ವ್ಯವಸ್ಥೆ ಮೇ 23ರಂದು 14 ಗಂಟೆಗಳ ಕಾಲ ಕಾರ್ಯ ನಿರ್ವಹಿಸುವುದಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಹೇಳಿದೆ.
ಶನಿವಾರ ಮಧ್ಯರಾತ್ರಿಯಿಂದ ಭಾನುವಾರ ಮಧ್ಯಾಹ್ನದ ತನಕ ಎನ್ಇಎಫ್ಟಿ ಮೂಲಕ ಹಣ ವರ್ಗಾವಣೆ ಸಾಧ್ಯವಿಲ್ಲ, ತಾಂತ್ರಿಕ ಅಪ್ಗ್ರೇಡ್ಗೆ ಒಳಪಡುತ್ತಿದೆ. ಮೇ 23 ರ ಮಧ್ಯಾಹ್ನ 14:00 ಗಂಟೆ ನಂತರ ಎಂದಿನಂತೆ ಸೇವೆ ಲಭ್ಯವಾಗಲಿದೆ ಎಂದು ಆರ್ಬಿಐ ಸೂಚಿಸಿದೆ.
ಈ ಬಗ್ಗೆ ಗ್ರಾಹಕರಿಗೆ ತಿಳಿಸುವಂತೆ ಬ್ಯಾಂಕುಗಳಿಗೆ ಆರ್ಬಿಐ ನಿರ್ದೇಶಿಸಿದೆ. ಈ ಅವಧಿಯಲ್ಲಿ ಆರ್ಟಿಜಿಎಸ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಆರ್ಬಿಐ ತಿಳಿಸಿದೆ.
ಎಲೆಕ್ಟ್ರಾನಿಕ್ ಫಂಡ್ ಟ್ರಾನ್ಸ್ಫರ್ (ಎನ್ಇಎಫ್ಟಿ) ವ್ಯವಸ್ಥೆ ದಿನದ 24 ಗಂಟೆಗಳ ಕಾಲ, ವರ್ಷದ 365 ದಿನಗಳ ಕಾಲ ಲಭ್ಯವಿರಲಿದೆ.

ನ್ಯಾಷನಲ್ ಇಲೆಕ್ಟ್ರಾನಿಕ್ ಫಂಡ್ ಟ್ರಾನ್ಸಫರ್ (NEFT) ಎಂಬುದು ಆನ್ ಲೈನ್ ಮೂಲಕ ಹಣ ರವಾನೆ ಮಾಡುವ ವಿಧಾನವಾಗಿದೆ. ಐಎಫ್ ಎಸ್ ಸಿ ಕೋಡ್ ಬಳಸಿ ಹಣ ರವಾನೆ ಮಾಡಬಹುದಾಗಿದ್ದು, ಕೆಲವೇ ಗಂಟೆಗಳಲ್ಲಿ ಹಣ ವರ್ಗಾವಣೆಯಾಗುತ್ತದೆ. ಹಣ ರವಾನೆ ಮಾಡುವಾಗ ಫಲಾನುಭವಿಯ ಖಾತೆ ಸಂಖ್ಯೆಯನ್ನು ಸೇರಿಸಬೇಕು. ನಂತರ ವರ್ಗಾವಣೆ ಮಾಡಬೇಕಾದ ಹಣವನ್ನು ನಮೂದಿಸಬೇಕು. ಒಂದು ದಿನಕ್ಕೆ 10 ಲಕ್ಷದವರೆಗೆ ಹಣ ವರ್ಗಾವಣೆ ಮಾಡಬಹುದಾಗಿದೆ.
ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಖಾಸಗಿ ವಲಯದ ಐಸಿಐಸಿಐ ಬ್ಯಾಂಕ್, ಎಚ್ ಡಿ ಎಫ್ ಸಿ ಬ್ಯಾಂಕ್ ಗಳು NEFT ಸೌಲಭ್ಯದಿಂದ ಹಣ ವರ್ಗಾವಣೆಗಾಗಿ ಯಾವುದೇ ಶುಲ್ಕ ವಿಧಿಸುವುದಿಲ್ಲ.
ಸಾಮಾನ್ಯವಾಗಿ ಗ್ರಾಹಕರು ಭಾರಿ ಮೊತ್ತದ ಹಣವನ್ನು ವರ್ಗಾವಣೆ ಮಾಡಲು ಆರ್ಟಿಜಿಎಸ್ ಸೌಲಭ್ಯ ಬಳಸುತ್ತಾರೆ. ಈ ಮುಂಚೆ ಎಸ್ಬಿಐ, ನೆಫ್ಟ್ ಗೆ 1 ರಿಂದ 5 ರೂ. ಹಾಗೂ ಆರ್ಟಿಜಿಎಸ್ ಗೆ 5ರಿಂದ 50 ರೂಪಾಯಿವರೆಗೆ ಶುಲ್ಕ ವಿಧಿಸುತ್ತಿತ್ತು.ಆದರೆ, ಆರ್ ಬಿಐ ಸೂಚನೆ ಮೇರೆಗೆ ಶುಲ್ಕ ತೆಗೆದು ಹಾಕಲಾಗಿದೆ.
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications