ಕಿಸಾನ್ ವಿಕಾಸ್ ಪತ್ರ ಪಡೆಯಲು ಪ್ಯಾನ್ ಕಾರ್ಡ್ ಬೇಕಿಲ್ಲ!
ನವದೆಹಲಿ, ನ.18: ಶಾಶ್ವತ ಖಾತೆ ಸಂಖ್ಯೆ ಅಥವಾ ಪ್ಯಾನ್ ಕಾರ್ಡ್ ನಂಬರ್ ಇಲ್ಲದಿದ್ದರೂ 'ಕಿಸಾನ್ ವಿಕಾಸ್ ಪತ್ರ' ಪಡೆಯುವ ಮೂಲಕ ಸಣ್ಣ ಮಟ್ಟದ ಹೂಡಿಕೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ.
ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಹಾಗೂ ವಾರ್ತಾ ಸಚಿವ ರವಿಶಂಕರ್ ಪ್ರಸಾದ್ ಅವರು ಈ ಬಗ್ಗೆ ಮಂಗಳವಾರ ಮಾತನಾಡಿ ಕಿಸಾನ್ ವಿಕಾಸ್ ಪತ್ರ ಪಡೆಯಲು ಇದ್ದ ಕೆಲವು ಅನನುಕೂಲಗಳನ್ನು ಸರಿಪಡಿಸಲಾಗಿದೆ ಎಂದಿದ್ದಾರೆ.
ಸಣ್ಣ ಉಳಿತಾಯ ಯೋಜನೆಗಳಿಗೆ ಪುಷ್ಟಿ ನೀಡಲು ನಿರ್ಧರಿಸಲಾಗಿದೆ. ಈ ಬಗ್ಗೆ ಬಜೆಟ್ ನಲ್ಲೇ ಘೋಷಿಸಲಾಗಿತ್ತು. ಅದರಂತೆ ಸಣ್ಣ ಹೂಡಿಕೆದಾರರ ನೆಚ್ಚಿನ ಯೋಜನೆಯಾದ ಕೆವಿಪಿಯಲ್ಲಿ ಹಣ ತೊಡಗಿಸಲು ಹೆಚ್ಚಿನ ಅವಕಾಶ ಲಭ್ಯವಿದ್ದು, ಹೂಡಿಕೆ ವಿಧಾನ ಈಗ ಸರಳೀಕೃತಗೊಂಡಿದೆ ಎಂದು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.
ಕಿಸಾನ್ ವಿಕಾಸ್ ಪತ್ರ ಅಲ್ಲದೆ ಎಲ್ಲಾ ರಾಷ್ಟ್ರೀಯ ಉಳಿತಾಯ ಯೋಜನೆ(NSS) KYC ಬದಲಾದ ನಿಯಮಗಳು ಜನವರಿ 2012ರಿಂದ ಅನ್ವಯವಾಗುವಂತೆ ಅಂಚೆ ಕಚೇರಿ ಹಾಗೂ ಬ್ಯಾಂಕ್ ಗಳಲ್ಲಿ ಲಭ್ಯವಿದೆ ಎಂದಿದ್ದಾರೆ.

ಕೆವಿಪಿಯಲ್ಲಿ 1000, 5,000, 10,000 ಹಾಗೂ 50,000 ರು ತನಕ ಹೂಡಿಕೆ ಮಾಡಬಹುದಾಗಿದ್ದು, ಹೂಡಿಕೆ ಮಿತಿಯಲ್ಲಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕೆವಿಪಿಗಳನ್ನು ಒಬ್ಬರ ಹೆಸರು ಅಥವಾ ಜಂಟಿ ಹೆಸರಿನಲ್ಲಿ ಪಡೆದುಕೊಳ್ಳಬಹುದಾಗಿದ್ದು ಎಲ್ಲವೂ ಒಬ್ಬರಿಂದ ಒಬ್ಬರಿಗೆ ವರ್ಗಾವಣೆ ಮಾಡಬಹುದಾಗಿದೆ.
ಒಂದು ಅಂಚೆ ಕಚೇರಿಯಿಂದ ಮತ್ತೊಂದು ಅಂಚೆ ಕಚೇರಿಗೆ ವರ್ಗಾಯಿಸಬಹುದಾಗಿದೆ. ಕೆವಿಪಿಗಳನ್ನು ಸೆಕ್ಯುರಿಟಿಯಾಗಿಟ್ಟು ಬ್ಯಾಂಕ್ ಗಳಿಂದ ಸಾಲ ಪಡೆಯಬಹುದಾಗಿದೆ. ಕೆವಿಪಿ ಮೆಚುರಿಟಿ ಅವಧಿ 8 ವರ್ಷ 4 ತಿಂಗಳಾಗಿರುತ್ತದೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications