ಇನ್ಮುಂದೆ ಪೇಟಿಎಂ ಬಳಸಿ ಎಲ್ಐಸಿ ಪ್ರೀಮಿಯಂ ಪಾವತಿಸಿ
ಬೆಂಗಳೂರು, ನವೆಂಬರ್ 21: ವಿಮಾ ಪಾಲಿಸಿಗಳ ಪ್ರೀಮಿಯಂ ಪಾವತಿ ಸೇವೆಯನ್ನು ಮತ್ತಷ್ಟು ವಿಸ್ತರಿಸಿರುವ ಪೇಟಿಎಂ, ಇದಕ್ಕೆ ಸಂಬಂಧಿಸಿದಂತೆ ಭಾರತದ ಅತ್ಯಂತ ಬೃಹತ್ ವಿಮಾ ಸಂಸ್ಥೆಯಾದ ಭಾರತೀಯ ಜೀವ ವಿಮಾ ನಿಗಮ'ದೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.
ಇದರಿಂದಾಗಿ, ಎಲ್ಐಸಿ ಪಾಲಿಸಿದಾರರು ಇನ್ನುಮುಂದೆ ಕ್ಷಣಾರ್ಧದಲ್ಲಿ, ಆನ್-ಲೈನ್ ಮೂಲಕ ತಮ್ಮ ಕಂತಿನ ಮೊತ್ತವನ್ನು ಪಾವತಿಸುವುದು ಸಾಧ್ಯವಾಗಲಿದೆ.
ಇದಲ್ಲದೆ, ಮುಂಚೂಣಿ ವಿಮಾ ಸಂಸ್ಥೆಗಳಾದ ಐಸಿಐಸಿಐ ಪ್ರುಡೆನ್ಷಿಯಲ್ ಲೈಫ್, ರಿಲಯನ್ಸ್ ಲೈಫ್, ಮ್ಯಾಕ್ಸ್ ಲೈಫ್ ಇನ್ಶುರೆನ್ಸ್, ಎಚ್ ಡಿಎಫ್ ಸಿ ಲೈಫ್, ಟಾಟಾ ಎಐಎ, ಎಸ್ ಬಿಐ ಲೈಫ್, ಆದಿತ್ಯ ಬಿರ್ಲಾ ಸನ್ ಲೈಫ್, ಕೆನಾ ಎಚ್ಎಸ್ ಬಿಸಿ ಲೈಫ್ ಇನ್ಶುರೆನ್ಸ್, ಶ್ರೀರಾಮ್ ಲೈಫ್ ಮತ್ತು ಸ್ಟಾರ್ ಲೈಫ್ ಮುಂತಾದ 30ಕ್ಕೂ ಹೆಚ್ಚು ಸಂಸ್ಥೆಗಳ ಜೀವವಿಮೆ ಕಂತುಗಳನ್ನು ಕೂಡ ಪೇಟಿಎಂ ಮೂಲಕ ಆನ್-ಲೈನ್ ನಲ್ಲಿ ಸುಲಭವಾಗಿ ಪಾವತಿಸಬಹುದು ಎಂದು ಪೇಟಿಎಂ ಸಂಸ್ಥೆಯ ಸಿಒಒ ಕಿರಣ್ ವಸಿರೆಡ್ಡಿ ಹೇಳಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, "ಸಾಮಾನ್ಯವಾಗಿ ನಮ್ಮ ದೇಶದಲ್ಲಿ ವಿಮಾ ಕಂತುಗಳನ್ನು ಹೆಚ್ಚಿನ ಪಾಲಿಸಿದಾರರು ಸಾಂಪ್ರದಾಯಿಕ ಮಾದರಿಯಲ್ಲೇ ಪಾವತಿಸುತ್ತಿದ್ದಾರೆ. ಇಂತಹ ಕೋಟ್ಯಂತರ ಪಾಲಿಸಿದಾರರು ಸುಗಮವಾಗಿ ಮತ್ತು ಸುಲಭವಾಗಿ, ಕೇವಲ ಅರೆಕ್ಷಣದಲ್ಲಿ ತಾವಿದ್ದ ಜಾಗದಿಂದಲೇ ಆನ್-ಲೈನ್ ಮೂಲಕ ಕಂತುಗಳನ್ನು ಪಾವತಿಸುವಂತೆ ಮಾಡಬೇಕೆಂಬುದು ನಮ್ಮ ಆಶಯವಾಗಿದೆ. ಆನ್ಲೈನ್ ಮೂಲಕ ಪಾವತಿ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳಿವೆ ಎನ್ನುವುದನ್ನು ನಾವು ನಮ್ಮ ಗ್ರಾಹಕರಿಗೆ ತಿಳಿಸಿಕೊಡಲಿದ್ದೇವೆ,'' ಎಂದಿದ್ದಾರೆ.
ಪಾಲಿಸಿಗಳ ಲೆಕ್ಕ ಹಿಡಿದು ಹೇಳುವುದಾದರೆ, 360 ದಶಲಕ್ಷ ವಿಮಾ ಪಾಲಿಸಿಗಳನ್ನು ಹೊಂದಿರುವ ಭಾರತವು ಈ ವಿಚಾರದಲ್ಲಿ ಜಗತ್ತಿನಲ್ಲೇ ಅತ್ಯಂತ ದೊಡ್ಡ ಜೀವವಿಮಾ ವಲಯವಾಗಿದೆ.
ಇದರ ಜತೆಗೆ, ಮುಂದಿನ ಐದು ವರ್ಷಗಳಲ್ಲಿ ಈ ವಲಯವು ವರ್ಷಕ್ಕೆ ಶೇಕಡ 12ರಿಂದ 15ರಷ್ಟು ಸಂಯೋಜಿತ ಬೆಳವಣಿಗೆಯನ್ನು ಹೊಂದುವ ನಿರೀಕ್ಷೆ ಇದೆ.
ಸದ್ಯಕ್ಕೆ 50 ಶತಕೋಟಿ ಡಾಲರ್ ಮೌಲ್ಯ ಹೊಂದಿರುವ ದೇಶದ ಜೀವವಿಮಾ ವಲಯವು ಮುಂದಿನ ಒಂದು ದಶಕದಲ್ಲಿ ನಾಲ್ಕು ಪಟ್ಟು ಬೆಳವಣಿಗೆ ಹೊಂದಲಿದ್ದು, 200 ಶತಕೋಟಿ ಡಾಲರ್ ಮುಟ್ಟಲಿದೆ.
ಸಾರ್ವಜನಿಕರಿಗೆ ಅನುಕೂಲಕರವಾದ ವಿಧಾನಗಳನ್ನು ಪರಿಚಯಿಸುವ ಮೂಲಕ ಈ ಮಾರುಕಟ್ಟೆಯನ್ನು ಸದ್ಬಳಕೆ ಮಾಡಿಕೊಳ್ಳುವುದು ಪೇಟಿಎಂ ಸಂಸ್ಥೆಯ ಗುರಿಯಾಗಿದೆ ಎಂದು ಕಿರಣ್ ವಸಿರೆಡ್ಡಿ ತಿಳಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications