ನಿತ್ಯ ಪೆಟ್ರೋಲ್-ಡೀಸೆಲ್ ಬೆಲೆ ನಿಗದಿ, ಮೇ 1ರಿಂದ ಈ 5 ನಗರದಲ್ಲಿ ಪ್ರಯೋಗ
ಸಾರ್ವಜನಿಕ ಉದ್ಯಮದ ತೈಲ ಕಂಪೆನಿಗಳು ನಿತ್ಯವೂ ಪೆಟ್ರೋಲ್-ಡೀಸೆಲ್ ಬೆಲೆ ಪರಿಷ್ಕರಣೆಗೆ ಚಿಂತನೆ ನಡೆಸಿದ್ದವು. ಇದನ್ನು ಪ್ರಾಯೋಗಿಕವಾಗಿ ಮೇ 1ರಿಂದ ಐದು ನಗರಗಳಲ್ಲಿ ಜಾರಿಗೆ ತರಲು ನಿರ್ಧರಿಸಿರುವ ಮಾಹಿತಿ ಲಭ್ಯವಾಗಿದೆ
ನವದೆಹಲಿ, ಏಪ್ರಿಲ್ 12: ಆಯಾ ದಿನವೇ ಪೆಟ್ರೋಲ್ -ಡೀಸೆಲ್ ದರ ನಿಗದಿ ಮಾಡಬೇಕು ಎಂದು ಸಾರ್ವಜನಿಕ ಉದ್ದಿಮೆಯ ತೈಲ ಕಂಪೆನಿಗಳು ಚಿಂತನೆ ನಡೆಸಿರುವುದು ನಿಮಗೆ ಈಗಾಗಲೇ ಗೊತ್ತಿದೆ. ಅದರೆ ಯಾವಾಗಿನಿಂದ ಜಾರಿಗೆ ತರ್ತಾರೆ, ಇಡೀ ದೇಶದಲ್ಲಿ ತರ್ತಾರಾ ಎಂಬೆಲ್ಲ ಪ್ರಶ್ನೆಗಳಿಗೆ ಈ ವರದಿಯಲ್ಲಿ ಉತ್ತರವಿದೆ.
ದೇಶದಾದ್ಯಂತ ಈ ಆಲೋಚನೆ ಕಾರ್ಯರೂಪಕ್ಕೆ ತರುವ ಮೊದಲು ದೇಶದ ಐದು ನಗರಗಳಲ್ಲಿ ಮೇ 1ರಿಂದ ಈ ಯೋಜನೆ ಜಾರಿಗೆ ಬರುತ್ತದೆ. ದಕ್ಷಿಣದ ಪುದುಚೆರಿ-ವಿಶಾಖಪಟ್ಟಣ, ಪಶ್ಚಿಮದ ಉದಯ್ ಪುರ್, ಪೂರ್ವ ಭಾಗದ ಜಮ್ಷೆಡ್ ಪುರ್ ಮತ್ತು ಉತ್ತರದ ಚಂಡೀಗಢದಲ್ಲಿ ನಿತ್ಯ ಪೆಟ್ರೋಲ್-ಡೀಸೆಲ್ ದರ ನಿಗದಿ ಪಡಿಸುವ ಪ್ರಯೋಗ ಮಾಡಲಾಗುತ್ತದೆ ಎಂದು ಎಕನಾಮಿಕ್ ಟೈಮ್ಸ್ ನಲ್ಲಿ ವರದಿಯಾಗಿದೆ.[ಪ್ರತಿದಿನ ಪೆಟ್ರೋಲ್, ಡೀಸೆಲ್ ದರ ಪರಿಷ್ಕರಿಸಲು ಚಿಂತನೆ]

ಸದ್ಯಕ್ಕೆ ಸಾರ್ವಜನಿಕ ಉದ್ದಿಮೆಯ ತೈಲ ಕಂಪೆನಿಗಳು ಹದಿನೈದು ದಿನಕ್ಕೊಮ್ಮೆ ಬೆಲೆ ನಿಗದಿ ಮಾಡುತ್ತವೆ. ರುಪಾಯಿ ಮೌಲ್ಯ ಹಾಗೂ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರದ ಆಧಾರದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಇಂದಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಹಾಗೂ ಹಿಂದೂಸ್ತಾನ್ ಪೆಟ್ರೋಲಿಯಂನ ಬಂಕ್ ಗಳೇ ದೇಶದಲ್ಲಿ ಶೇ 90ರಷ್ಟಿವೆ.
ಈ ಐದು ನಗರಗಳಲ್ಲಿ ಇವುಗಲ ಇನ್ನೂರು ಬಂಕ್ ಗಳಿವೆ ಎಂದು ಮೂಲಗಳು ತಿಳಿಸಿವೆ. ಪ್ರಾಯೋಗಿಕವಾಗಿ ಮಾಡುವುದರಿಂದ ಇಡೀ ದೇಶದಲ್ಲಿ ಯೋಜನೆ ಜಾರಿಗೆ ತಂದರೆ ಎದುರಾಗಬಹುದಾದ ಸವಾಲುಗಳು ಏನು ಎಂದು ಗೊತ್ತಾಗುತ್ತದೆ. ಆದ್ದರಿಂದ ಹೀಗೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications