ಏನಿದು ಸವರನ್ ಗೋಲ್ಡ್ ಬಾಂಡ್? ಏನು ಪ್ರಯೋಜನ?
ನವದೆಹಲಿ, ಸೆ. 10: ಚಿನ್ನದ ನಗದೀಕರಣಕ್ಕಾಗಿ ಕೇಂದ್ರ ಸರ್ಕಾರ ಮೂರು ಪ್ರಮುಖ ಯೋಜನೆಗಳನ್ನು ಘೋಷಿಸಿದ್ದು, ಈ ಪೈಕಿ ಸವರನ್ ಗೋಲ್ಡ್ ಬಾಂಡ್ ಯೋಜನೆಗೆ ಕೇಂದ್ರ ಸಚಿವ ಸಂಪುಟದ ಒಪ್ಪಿಗೆ ಸಿಕ್ಕಿದೆ. ಚಿನ್ನದ ಖರೀದಿಗೆ ಬದಲಿ ಸೌಲಭ್ಯ ಒದಗಿಸುವುದು ಈ ಯೋಜನೆಯ ಉದ್ದೇಶವಾಗಿದೆ.
ದೇಶದಲ್ಲಿರುವ ಸುಮಾರು 20 ಸಾವಿರ ಟನ್ ಚಿನ್ನವನ್ನು ನಗದಾಗಿ ಪರಿವರ್ತಿಸಲು ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಹಾಲಿ ಜಾರಿಯಲ್ಲಿರುವ ಚಿನ್ನದ ಠೇವಣಿ ಮತ್ತು ಚಿನ್ನ ಸಾಲ ಯೋಜನೆಗೆ ಬದಲಾಗಿ ಮೂರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ. ಚಿನ್ನ ನಗದೀಕರಣ, ಸವರನ್ ಗೋಲ್ಡ್ ಬಾಂಡ್ ಹಾಗೂ ಇಂಡಿಯನ್ ಗೋಲ್ಡ್ ಕಾಯಿನ್ ಮೂರು ಹೊಸ ಯೋಜನೆಗಳಾಗಿವೆ.
ಸವರನ್ ಗೋಲ್ಡ್ ಯೋಜನೆಯ ಮೊದಲ ಹಂತದಲ್ಲಿ ಸುಮಾರು 50 ಟನ್ ಗಳಷ್ಟು ಮೌಲ್ಯಕ್ಕೆ ಸಮಾನವಾದ 13,500 ಕೋಟಿ ರು ಬೆಲೆ ಬಾಳುವ ಬಾಂಡ್ ಗಳನ್ನು ಸರ್ಕಾರ ವಿತರಿಸಲಿದೆ. [ಭಾರತದ ಪ್ರಮುಖ ನಗರಗಳಲ್ಲಿನ ಪ್ರಸ್ತುತ ಚಿನ್ನದ ಬೆಲೆ ಎಷ್ಟು ]
ಇದರಿಂದ ಚಿನ್ನದ ಆಮದು ಕಡಿಮೆ ಮಾಡುವುದು ಹಾಗೂ ಜನರು ಬಳಸದೆ ಕಪಾಟು ಸೇರಿರುವ ಚಿನ್ನವನ್ನು ಬ್ಯಾಂಕ್ನಲ್ಲಿಡುವಂತೆ ಮಾಡಿ ಬಡ್ಡಿ ನೀಡುವುದು ಸರ್ಕಾರದ ಉದ್ದೇಶವಾಗಿದೆ.

ಪ್ರತಿ ವರ್ಷ 1,000 ಟನ್ ಗಳಷ್ಟು ಚಿನ್ನ ಬಳಕೆಯಾಗುತ್ತಿದ್ದು, ಹೆಚ್ಚಿನ ಪ್ರಮಾಣ ಆಮದಾಗುತ್ತಿದೆ. ಇಂಧನದ ನಂತರ ಚಿನ್ನ ಆಮದು ಪ್ರಮಾಣವೇ ಅಧಿಕವಾಗಿದೆ. [ಬೆಂಗಳೂರು ಸಂಸ್ಥೆ ಪಾಲಾದ ಅತಿ ದೊಡ್ಡ ಚಿನ್ನ ಶುದ್ಧೀಕರಣ ಘಟಕ]
ಏನಿದು ಸವರನ್ ಗೋಲ್ಡ್ ಬಾಂಡ್?
* ಈ ಚಿನ್ನದ ಬಾಂಡ್ ನಲ್ಲಿ ಗ್ರಾಹಕರು ವಾರ್ಷಿಕವಾಗಿ 500 ಗ್ರಾಂ ತನಕ ಹೂಡಿಕೆ ಮಾಡಬಹುದು.
* ಹೂಡಿಕೆ ಉದ್ದೇಶದಿಂದ ಚಿನ್ನ ಖರೀದಿದಾರರಿಗೆ ಈ ಯೋಜನೆ
* 2, 5, 10 ಗ್ರಾಂಗಳ ಬಾಂಡ್ಗಳು ಲಭ್ಯ
* ಚಿನ್ನದ ಗಟ್ಟಿ ಬದಲು ಬಾಂಡ್ ಖರೀದಿಗೆ ಅವಕಾಶ
* ವಾರ್ಷಿಕ 500 ಗ್ರಾಂ ಗರಿಷ್ಠ ಹೂಡಿಕೆ ಮಿತಿ
* 5-7 ವರ್ಷಗಳ ಅವಧಿಗೆ ಬಾಂಡ್ ವಿತರಣೆ
* 2015-16ರ ಕೇಂದ್ರ ಬಜೆಟ್ ನಲ್ಲಿ ಘೋಷಿತ ಯೋಜನೆ ಇದಾಗಿದೆ.
ಬಾಂಡ್ ಎಲ್ಲಿ ಸಿಗುತ್ತದೆ?: ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳು, ಎನ್ ಬಿಎಫ್ ಸಿ ಹಾಗೂ ಅಂಚೆ ಕಚೇರಿ ಗಳಲ್ಲಿ ಸಿಗುತ್ತದೆ.
ಏನು ಪ್ರಯೋಜನ?: ಇತರೆ ಚಿನ್ನದ ಯೋಜನೆ ಮೇಲಿನ ಹೂಡಿಕೆಗೆ ಅನ್ವಯವಾಗುವ ತೆರಿಗೆ ಈ ಯೋಜನೆಗೂ ಅನ್ವಯವಾಗುತ್ತದೆ. ಹೂಡಿಕೆ ಮೇಲೆ ಬ್ಯಾಂಕಿನಿಂದ ಸಾಲ ಪಡೆಯಬಹುದಾಗಿದೆ. ಈ ಯೋಜನೆ ಭಾರತೀಯ ನಾಗರಿಕರಿಗೆ ಮಾತ್ರ ಲಭ್ಯವಿದೆ. ಹೂಡಿಕೆ ಮಾಡುವ ಚಿನ್ನದ ಗುಣಮಟ್ಟದ ಬಗ್ಗೆ ತಲೆ ಕೆಡಿಸಿಕೊಳ್ಳಬೇಕಿಲ್ಲ.
-
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ












Click it and Unblock the Notifications