ಬೆಂಗಳೂರಲ್ಲಿ ಒನ್ಪ್ಲಸ್ 2019 ಬಿಡುಗಡೆಗೆ ಅದ್ದೂರಿ ಕಾರ್ಯಕ್ರಮ
ಬೆಂಗಳೂರು, ಏಪ್ರಿಲ್ 24: ಯಶಸ್ವಿಯಾದ ವರ್ಷವನ್ನು ಪೂರೈಸಿದ ಹಿನ್ನೆಲೆಯಲ್ಲಿ 2019ರ ಹೊಚ್ಚ ಹೊಸದಾದ ಒನ್ಪ್ಲಸ್ ಅನ್ನು ಬೆಂಗಳೂರು ಇಂಟರ್ ನ್ಯಾಷನಲ್ ಎಕ್ಸಿಬಿಷನ್ ಸೆಂಟರ್ ನಲ್ಲಿ 2019 ರ ಮೇ 14 ರಂದು ಸಂಜೆ 8.15 ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಇದು ಹೊಸ ಉತ್ಪನ್ನದ ಅತಿದೊಡ್ಡ ಕಾರ್ಯಕ್ರಮವಾಗಿದೆ. ಕೌಶಲ್ಯಭರಿತವಾದ ಕಲೆಗಾರಿಕೆ ಮತ್ತು ಪ್ರಗತಿದಾಯಕ ತಂತ್ರಜ್ಞಾನಗಳು ಸೇರಿದಂತೆ ಭವಿಷ್ಯದ ವೈಶಿಷ್ಟ್ಯತೆಗಳನ್ನು ಒಳಗೊಂಡ ಹೊಸ ಡಿವೈಸ್ ಅನ್ನು ಪರಿಚಯಿಸಲಾಗುತ್ತಿದೆ.
2019 ರ ಏಪ್ರಿಲ್ 25 ರಂದು ಬೆಳಗ್ಗೆ 10 ಗಂಟೆಯಿಂದ ಒನ್ಪ್ಲಸ್.ಇನ್ ನಲ್ಲಿ ಕಾರ್ಯಕ್ರಮಗಳ ಪ್ರವೇಶಪತ್ರಗಳನ್ನು ಪಡೆಯಬಹುದಾಗಿದೆ. ಅತ್ಯದ್ಭುತವಾದ ಡಿವೈಸ್ಗಳ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾಗಬಹುದಾಗಿದೆ. ಒನ್ಪ್ಲಸ್ನ ಸಿಬ್ಬಂದಿ ಮತ್ತು ಇತರೆ ಸಮುದಾಯದ ಸದಸ್ಯರನ್ನು ಭೇಟಿ ಮಾಡಲು ಹಾಗೂ ಹಲವಾರು ಸಂವಾದಗಳ ಅನುಭವ, ಹೊಸ ಹೊಸ ಉತ್ಪನ್ನಗಳ ಪ್ರಾತ್ಯಕ್ಷಿಕೆಯನ್ನೂ ವೀಕ್ಷಿಸಬಹುದಾಗಿದೆ. ಇದಕ್ಕಾಗಿ ಕೂಡಲೇ ನೀವು ನೋಂದಣಿ ಮಾಡಿಸಿಕೊಳ್ಳಿ.
ಕಾರ್ಯಕ್ರಮ ಪಟ್ಟಿ:
* 2019 ರ ಮೇ 14 ರಂದು
* ಮಾಧ್ಯಮ ನೋಂದಣಿ: ಸಂಜೆ 7 ಗಂಟೆಯಿಂದ
* ಬಿಡುಗಡೆ ಕಾರ್ಯಕ್ರಮ ರಾತ್ರಿ 8.15 ರಿಂದ.

ನೂತನ ಮೈಲಿಗಲ್ಲು ಸ್ಥಾಪಿಸುವ ಈ ಕಾರ್ಯಕ್ರಮದಲ್ಲಿ ಒನ್ಪ್ಲಸ್ಗೆ ಒಂದು ರೂಪ ಕೊಡುವಲ್ಲಿ ಶ್ರಮಿಸಿದ ಒನ್ಪ್ಲಸ್ ಸಮುದಾಯ ಇರಲಿದೆ. ಒನ್ಪ್ಲಸ್ ಕಂಪನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ದಾಖಲೆಯ ರೂಪದಲ್ಲಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ವಿಶ್ವದಾದ್ಯಂತದ ಒನ್ಪ್ಲಸ್ನ 8000 ಕ್ಕೂ ಅಧಿಕ ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ. ಭಾರತವಷ್ಟೇ ಅಲ್ಲ, ಯುಎಸ್ಎ ಮತ್ತು ಯೂರೋಪ್ನಲ್ಲಿಯೂ ಈ ಹೊಸ ಡಿವೈಸ್ಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿವೆ.
Sometimes we forget the significance of a number. An icon of perfection and beauty that has always inspired the extraordinary. Here's our 7. #OnePlus7 pic.twitter.com/7VFdP9r5XF
— OnePlus India (@OnePlus_IN) April 23, 2019
ಬೆಂಗಳೂರಿನಲ್ಲಿ ನಡೆಯಲಿರುವ ಈ ಅಭೂತಪೂರ್ವವಾದ ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಾಗದಿರುವವರು ಲೈವ್ಸ್ಟ್ರೀಂನಲ್ಲಿ ಕಾರ್ಯಕ್ರಮವನ್ನು ವೀಕ್ಷಿಸಬಹುದಾಗಿದೆ. ಈ ಬಿಡುಗಡೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಮ್ಮ ಒನ್ಪ್ಲಸ್ 7 ಸರಣಿಯ ಅಧಿಕೃತ ಪೇಜ್ ಒನ್ಪ್ಲಸ್.ಇನ್ ಗೆ ಭೇಟಿ ನೀಡಬಹುದಾಗಿದೆ. ಒನ್ಪ್ಲಸ್ 7 ಸರಣಿಯ ನೋಟಿಫೈ ಮಿ'ಯಲ್ಲಿ ಲೈವ್ ಇರುತ್ತದೆ. ಅಲ್ಲದೇ, ನಮ್ಮ ಅಧಿಕೃತ ಎಕ್ಸ್ಕ್ಲೂಸಿವ್ ಆನ್ಲೈನ್ ಮಾರಾಟ ಸಂಸ್ಥೆನಲ್ಲಿಯೂ ನೇರಪ್ರಸಾರವಿರಲಿದೆ.
-
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು












Click it and Unblock the Notifications