ಹಳೆ ನೋಟು ವಿನಿಮಯಕ್ಕೆ ಕೆಲ ದಿನಗಳಷ್ಟೇ ಬಾಕಿ!
ನವದೆಹಲಿ,ಜೂ.22: 2005 ಇಸವಿಗೂ ಮುಂಚಿನ 1,000 ಮತ್ತು 500 ರು ಮುಖಬೆಲೆಯ ನೋಟುಗಳನ್ನು ಬದಲಾಯಿಸಿಕೊಳ್ಳಲು ಕೆಲ ದಿನಗಳು ಮಾತ್ರ ಬಾಕಿ ಇದ್ದು , ಈ ಅವಧಿ ಜೂ.30ಕ್ಕೆ ಅಂತ್ಯವಾಗಲಿದೆ.
2005ರ ಪೂರ್ವ ಕರೆನ್ಸಿ ನೋಟುಗಳನ್ನು ಹಿಂದಕ್ಕೆ ತೆಗೆದುಕೊಳ್ಳಲು ಸಾರ್ವಜನಿಕರಿಗೆ ಜೂ.30ರ ಗಡುವು ವಿಧಿಸಿ ಭಾರತೀಯ ರಿಸರ್ವ್ ಬ್ಯಾಂಕ್(ಆರ್ಬಿಐ) ಆದೇಶ ನೀಡಿದೆ.
ಜೂ.30ರೊಳಗಾಗಿ ನಿಮ್ಮಲ್ಲಿರುವ 1,000 ಹಾಗೂ 500 ರು. ನೋಟುಗಳನ್ನು ನಿಮ್ಮ ಸಮೀಪದ ಬ್ಯಾಂಕ್ಗಳಲ್ಲಿ ಜಮಾ ಮಾಡಿ ಅಥವಾ ಬದಲಾಯಿಸಿಕೊಳ್ಳಬೇಕು. [ಭಾರತೀಯ ರುಪಾಯಿಗೆ ಬೆಲೆ ತಂದ ಮೋದಿ]

ಈ ಮುಂಚೆ ನೋಟು ಬದಲಾಯಿಸಲು ಜನವರಿ 1, 2015 ಕೊನೆ ದಿನಾಂಕ ಎಂದು ಹೇಳಲಾಗಿತ್ತು. ನಂತರ ಜನತೆಯ ಅನುಕೂಲಕ್ಕಾಗಿ ಈ ತಿಂಗಳ 30ರ ವರೆಗೆ ಈ ಅವಧಿಯನ್ನು ವಿಸ್ತರಿಸಿದೆ.
2005ರ ಪೂರ್ವ ಮುದ್ರಿತ ನೋಟುಗಳನ್ನು ಗುರುತಿಸುವುದು ತುಂಬಾ ಸುಲಭ. ಹಳೆ ನೋಟುಗಳ ಹಿಂಬದಿಯಲ್ಲಿ ಮುದ್ರಣದ ವರ್ಷವನ್ನು ಮುದ್ರಿಸಿರುವುದಿಲ್ಲ.
2005ರ ನಂತರದ ನೋಟುಗಳ ಕೆಳಭಾಗದಲ್ಲಿ ಮುದ್ರಿತ ವರ್ಷವನ್ನು ನಮೂದಿಸಲಾಗಿರುತ್ತದೆ. ಖೋಟಾ ನೋಟು ಚಲಾವಣೆ ನಿಯಂತ್ರಣಕ್ಕೆ ಈ ಯೋಜನೆ ರೂಪಿಸಲಾಗಿದೆ ಎಂದು ಆರ್ ಬಿಐ ಹೇಳಿದೆ.
ಸುಮಾರು 100 ರು ಮುಖಬೆಲೆಯ 86.87 ಕೋಟಿರು ನೋಟುಗಳು, 500 ರುನ 56.19 ಕೋಟಿ ರು ಹಾಗೂ 1,000 ರು ಬೆಲೆಯ 21.75 ಕೋಟಿ ರು ನೋಟುಗಳು ವಿನಿಮಯವಾಗಲಿದೆ. (ಪಿಟಿಐ)
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications