ಅತಿ ಆಶಾವಾದಿ ಬ್ಯಾಂಕ್ಗಳೇ ಕೆಟ್ಟ ಸಾಲಕ್ಕೆ ಹೊಣೆಗಾರರು: ರಘುರಾಂ ರಾಜನ್
ನವದೆಹಲಿ, ಸೆಪ್ಟೆಂಬರ್ 11: ಕೆಟ್ಟ ಸಾಲದ ಪ್ರಮಾಣ ಮಿತಿ ಮೀರಿ ಹೆಚ್ಚಲು ಅತಿ ಆಶಾವಾದಿ ಬ್ಯಾಂಕರ್ಗಳು, ಸರ್ಕಾರದ ನೀತಿ ನಿರ್ಣಯದ ವಿಳಂಬ ಮತ್ತು ಆರ್ಥಿಕತೆಯ ಬೆಳವಣಿಗೆಯಲ್ಲಿನ ಬದಲಾವಣೆಗಳು ಕಾರಣ ಎಂದು ಆರ್ಬಿಐ ಮಾಜಿ ಗವರ್ನರ್ ರಘುರಾಂ ರಾಜನ್ ಸಂಸದೀಯ ಸಮಿತಿಗೆ ತಿಳಿಸಿದ್ದಾರೆ.
ಅಂದಾಜು ಸಮಿತಿಯ ಅಧ್ಯಕ್ಷ ಮುರಳಿ ಮನೋಹರ್ ಜೋಶಿ ಅವರಿಗೆ ಬರೆದಿರುವ ಪತ್ರದಲ್ಲಿ ರಾಜನ್, ಯುಪಿಎ ಮತ್ತು ಎನ್ಡಿಎ ಸರ್ಕಾರಗಳ ಅವಧಿಯಲ್ಲಿ ಕಲ್ಲಿದ್ದಲು ಗಣಿಗಳ ಹಂಚಿಕೆ ಅವ್ಯವಹಾರದ ಕುರಿತ ತನಿಖೆಯ ವಿಳಂಬದಂತಹ ವಿವಿಧ ಸರ್ಕಾರಿ ಸಮಸ್ಯೆಗಳು ಕೂಡ ಇದ್ದಕ್ಕೆ ಕಾರಣ ಎಂದು ಹೇಳಿದ್ದಾರೆ.
2006-2008ರ ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ಪ್ರಬಲವಾಗಿದ್ದಾಗ ಹೆಚ್ಚು ಪ್ರಮಾಣದಲ್ಲಿ ಕೆಟ್ಟ ಸಾಲಗಳು ಸೃಷ್ಟಿಯಾಗಿದ್ದವು. ವಿದ್ಯುತ್ ಸ್ಥಾವರದಂತಹ ಹಳೆಯ ಮೂಲಸೌಕರ್ಯ ಯೋಜನೆಗಳು ಸೂಕ್ತ ಸಮಯ ಮತ್ತು ಬಜೆಟ್ಗೆ ಅನುಗುಣವಾಗಿ ಪೂರ್ಣಗೊಂಡಿದ್ದವು.

ಈ ಸಮಯದಲ್ಲಿ ಬ್ಯಾಂಕುಗಳು ಪ್ರಮಾದಗಳನ್ನೆಸಗಿದ್ದವು. ಹಿಂದಿನ ಬೆಳವಣಿಗೆ ಮತ್ತು ಚಟುವಟಿಕೆಗಳನ್ನು ಭವಿಷ್ಯದಲ್ಲಿಯೂ ನಿರೀಕ್ಷಿಸಿದ್ದವು. ಹೀಗಾಗಿ ಯೋಜನೆಗಳ ಮೇಲಿನ ಅಧಿಕ ಹೂಡಿಕೆ ಹಾಗೂ ಕಡಿಮೆ ಈಕ್ವಿಟಿಯನ್ನು ಒಪ್ಪಿಕೊಳ್ಳಲು ಉತ್ಸುಕವಾಗಿದ್ದವು. ಕೆಲವೊಮ್ಮೆ ಬ್ಯಾಂಕುಗಳು ಪ್ರಮೋಟರ್ಗಳ ಹೂಡಿಕೆ ಬ್ಯಾಂಕುಗಳ ಯೋಜನಾ ವರದಿಯ ಆಧಾರದಲ್ಲಿ ಸಾಲ ನೀಡಲು ಸಹಿ ಹಾಕುತ್ತಿದ್ದವು.
ಆದರೆ, ನಿರೀಕ್ಷೆ ಮಾಡಿದ ರೀತಿಯಲ್ಲಿ ಬೆಳವಣಿಗೆಆಗಲಿಲ್ಲ. ಜಾಗತಿಕ ಹಣಕಾಸು ಬಿಕ್ಕಟ್ಟಿನ ಬೆನ್ನಲ್ಲೇ ಪ್ರಬಲ ಜಾಗತಿಕ ಬೆಳವಣಿಗೆ ಕುಂಠಿತವಾಯಿತು. ಇದು ಭಾರತಕ್ಕೂ ವಿಸ್ತರಿಸಿತು.
ವಸೂಲಾಗದ ಸಾಲದ (ಎನ್ಪಿಎ) ಕುರಿತ ಬ್ಯಾಂಕರ್ಗಳು ಮತ್ತು ಹೂಡಿಕೆದಾರರ ಆಸಕ್ತಿ ಕೂಡ ಇದಕ್ಕೆ ಕಾರಣ ಎಂದು ಅವರು ಹೇಳಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications