ಸಹಕಾರಿ ಬ್ಯಾಂಕುಗಳು ಇನ್ಮುಂದೆ ಆರ್ಬಿಐ ವ್ಯಾಪ್ತಿಗೆ: ಬ್ಯಾಂಕಿಂಗ್ ಕಾಯ್ದೆಗೆ ತಿದ್ದುಪಡಿ
ನವದೆಹಲಿ, ಸೆಪ್ಟೆಂಬರ್ 22: ಬ್ಯಾಂಕ್ ಠೇವಣಿದಾರರ ಹಿತವನ್ನು ಕಾಯಲು ಸಹಕಾರಿ ಬ್ಯಾಂಕುಗಳನ್ನು ಇನ್ಮುಂದೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್ಬಿಐ) ಮೇಲ್ವಿಚಾರಣಾ ವ್ಯಾಪ್ತಿಗೆ ತರುವ ಮಸೂದೆಯನ್ನು ಸಂಸತ್ತು ಮಂಗಳವಾರ ಅಂಗೀಕರಿಸಿದೆ.
ಮಸೂದೆ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949 ಅನ್ನು ತಿದ್ದುಪಡಿ ಮಾಡುವ ಮೂಲಕ, ಈ ಕಾಯಿದೆಯು ಬ್ಯಾಂಕುಗಳ ಕಾರ್ಯನಿರ್ವಹಣೆಯನ್ನು ನಿಯಂತ್ರಿಸುತ್ತದೆ ಮತ್ತು ಬ್ಯಾಂಕುಗಳ ಪರವಾನಗಿ, ನಿರ್ವಹಣೆ ಮತ್ತು ಕಾರ್ಯಾಚರಣೆಗಳಂತಹ ವಿವಿಧ ಅಂಶಗಳ ಬಗ್ಗೆ ವಿವರಗಳನ್ನು ನೀಡುತ್ತದೆ.
2,000 ನೋಟು ಮುದ್ರಣವನ್ನ ನಿಲ್ಲಿಸಲ್ಲ: ಅನುರಾಗ್ ಠಾಕೂರ್
ಜೂನ್ 26ರಂದು ಹೊರಡಿಸಲಾದ ಸುಗ್ರೀವಾಜ್ಞೆ ರೂಪದಲ್ಲಿ ಈ 'ಬ್ಯಾಂಕಿಂಗ್ ನಿಯಂತ್ರಣ(ತಿದ್ದುಪಡಿ) ಕಾಯ್ದೆ 2020' ಈಗಾಗಲೇ ಜಾರಿಯಲ್ಲಿದೆ. ರಾಜ್ಯಸಭೆಯು ಧ್ವನಿಮತದ ಮೂಲಕ ಮಸೂದೆಗೆ ಅನುಮೋದನೆ ನೀಡಿದೆ. ಲೋಕಸಭೆಯು ಈಗಾಗಲೇ ಸೆ. 16ರಂದು ಅಂಗೀಕಾರ ನೀಡಿತ್ತು.
ಪ್ರಾಥಮಿಕ ಕೃಷಿ ಸಾಲ ಸಂಘಗಳು ಮತ್ತು ಸಹಕಾರಿ ಭೂ ಅಡಮಾನ ಬ್ಯಾಂಕುಗಳಂತಹ ಕೆಲವು ಸಹಕಾರಿ ಸಂಘಗಳಿಗೆ ಈ ಕಾಯ್ದೆ ಅನ್ವಯಿಸುವುದಿಲ್ಲ.
ರಾಜ್ಯಸಭೆಯಲ್ಲಿ ಮಸೂದೆ ಅಂಗೀಕಾರದ ಬಳಿಕ ಮಾತನಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ''ಠೇವಣಿದಾರರ ಹಿತವನ್ನು ಸಂಪೂರ್ಣವಾಗಿ ರಕ್ಷಿಸುವುದು ಈ ಮಸೂದೆಯ ಉದ್ದೇಶ ಎಂದು ತಿಳಿಸಿದರು.
ಸಹಕಾರಿ ಬ್ಯಾಂಕುಗಳಲ್ಲಿ ವೃತ್ತಿಪರತೆಯನ್ನು ಬಲಪಡಿಸುವುದು, ಬಂಡವಾಳ ಕ್ರೂಢೀಕರಣಕ್ಕೆ ಅವಕಾಶ, ಆಡಳಿತ ವ್ಯವಸ್ಥೆ ಸುಧಾರಣೆ, ಮೇಲ್ವಿಚಾರಣೆ ಆರ್ಬಿಐ ವ್ಯಾಪ್ತಿಗೆ ತರುವುದು ಇದರ ಪ್ರಮುಖ ಉದ್ದೇಶವಾಗಿದೆ.