ಕೇಬಲ್ನಲ್ಲಿ ನಿಮ್ಮ ಇಷ್ಟದ ಚಾನೆಲ್ಗೆ ಮಾತ್ರ ಹಣ ಕೊಡಿ
ಬೆಂಗಳೂರು, ಡಿ. 24 : ಕೇಬಲ್ ಬಿಲ್ ಜಾಸ್ತಿ ಆಯ್ತಪ್ಪ ಎಂದು ಹೇಳುವ ಜನರಿಗೆ ಸಿಹಿ ಸುದ್ದಿ ಕಾದಿದೆ. ಡಿಟಿಎಚ್ ಮಾದರಿಯಲ್ಲಿ ನಿಮಗೆ ಬೇಕಾದ ಚಾನೆಲ್ಗಳಿಗೆ ಮಾತ್ರ ಹಣ ಪಾವತಿ ಮಾಡುವ ವ್ಯವಸ್ಥೆ ಕೇಬಲ್ ಟಿವಿ ಗ್ರಾಹಕರಿಗೂ 2015ರಲ್ಲಿ ಲಭ್ಯವಾಗಲಿದೆ, ಇದರಿಂದ ಕೇಬಲ್ ಬಿಲ್ ಕಡಿಮೆಯಾಗಲಿದೆ.
ಡೈರೆಕ್ಟ್ ಟು ಹೋಮ್ (ಡಿಟಿಎಚ್) ಮಾದರಿಯಲ್ಲೇ ಸೆಟ್ಟಾಪ್ ಬಾಕ್ಸ್ ಕೇಬಲ್ ಸೇವೆಯಲ್ಲೂ ಗ್ರಾಹಕರಿಗೆ ಇಷ್ಟದ ಚಾನೆಲ್ಗಳ ಆಯ್ಕೆಗೆ ಅವಕಾಶ ಕಲ್ಪಿಸಲು ರಾಜ್ಯ ಕೇಬಲ್ ಟಿ.ವಿ ಆಪರೇಟರ್ಗಳ ಸಂಘ ನಿರ್ಧರಿಸಿದೆ. ಇದರಂತೆ ನೀವು ಪ್ಯಾಕೇಜ್ಗೆ ಅನುಗುಣವಾಗಿ ಹಣ ಪಾವತಿ ಮಾಡುವ ಅವಕಾಶವಿದೆ.

ಸದ್ಯ, ಬೆಂಗಳೂರು ಮತ್ತು ಮೈಸೂರಿನಲ್ಲಿರುವ ಸೆಟ್ಟಾಪ್ ಬಾಕ್ಸ್ ಕೇಬಲ್ ಸಂಪರ್ಕದಾರರಿಗೆ ತಮ್ಮ ನೆಚ್ಚಿನ ಚಾನೆಲ್ಗಳ ಪ್ಯಾಕೇಜ್ ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಜನವರಿಯಲ್ಲಿ ನೀಡಲಾಗುತ್ತದೆ. ಪ್ಯಾಕೇಜ್ಗೆ ಸಂಬಂಧಿಸಿದಂತೆ ದರ ಪಟ್ಟಿ ನಿಗದಿಯಾಗಲಿದ್ದು, ಜನವರಿಯಲ್ಲಿ ಇದು ಬಿಡುಗಡೆಗೊಳ್ಳಲಿದೆ. [ಕೇಬಲ್ ಟಿವಿ ನೋಡಲು ಹೆಚ್ಚು ಹಣ ಪಾವತಿಸಬೇಕು]
ರಾಜ್ಯ ಕೇಬಲ್ ಟಿ.ವಿ ಆಪರೇಟರ್ಗಳ ಸಂಘದ (ಕೆಎಸ್ಸಿಒಎ) ಅಧ್ಯಕ್ಷ ವಿ.ಎಸ್.ಪ್ಯಾಟ್ರಿಕ್ ರಾಜು ಅವರು ಈ ಕುರಿತು ಮಾಹಿತಿ ನೀಡಿದ್ದು, 4 ಬಗೆಯ ಚಾನೆಲ್ ಪ್ಯಾಕೇಜ್ಗಳನ್ನು ಸಿದ್ಧಪಡಿಸಲಾಗಿದೆ ಎಂದು ತಿಳಿಸಿದ್ದಾರೆ. ಗ್ರಾಹಕರು ಆಯ್ಕೆ ಮಾಡಿಕೊಳ್ಳುವ ಪ್ಯಾಕೇಜ್ಗೆ ಅನುಗುಣವಾಗಿ ದರ ನಿಗದಿಯಾಗಲಿದೆ. ಈ ಬಗ್ಗೆ ಕೇಬಲ್ನಲ್ಲೇ ವಿವರಗಳನ್ನು ಪ್ರಸಾರ ಮಾಡಿ, ಕರಪತ್ರಗಳ ಮೂಲಕ ಜನರಿಗೆ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಹೇಗಿದೆ ಪ್ಯಾಕೇಜ್ : ಗ್ರಾಹಕರಿಗೆ ಮೊದಲ ಹಂತದ ಬೇಸಿಕ್ ಪ್ಯಾಕೇಜ್ನಲ್ಲಿ 203 ಚಾನೆಲ್ಗಳನ್ನು ನೀಡಲಾಗುತ್ತದೆ. ಅದಕ್ಕೆ ರೂ. 118 ದರವಿರುತ್ತದೆ. ಸರ್ಕಾರದ ತೆರಿಗೆ ಹಾಗೂ ಚಾನೆಲ್ ಸಂಸ್ಥೆಗಳು ನಿಗದಿಪಡಿಸಿರುವ ಶುಲ್ಕಕ್ಕೆ ಅನುಗುಣವಾಗಿ ಪ್ಯಾಕೇಜ್ಗಳ ದರಪಟ್ಟಿ ಸಿದ್ಧಪಡಿಸಲಾಗಿದೆ ಎಂದು ಪ್ಯಾಟ್ರಿಕ್ ರಾಜು ತಿಳಿಸಿದರು.
ಬೆಂಗಳೂರಿನಲ್ಲಿ 22 ಲಕ್ಷ ಮತ್ತು ಮೈಸೂರಿನಲ್ಲಿ 1.50 ಲಕ್ಷ ಸೆಟ್ಟಾಪ್ ಬಾಕ್ಸ್ ಕೇಬಲ್ ಸಂಪರ್ಕದಾರರಿದ್ದಾರೆ. ಜನವರಿಯಿಂದ ಈ ಗ್ರಾಹಕರಿಗೆ ಇಷ್ಟದ ಚಾನೆಲ್ಗಳಿಗೆ ಮಾತ್ರ ಹಣ ಪಾವತಿ ಮಾಡುವ ಸೇವೆ ಲಭ್ಯವಾಗಲಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications