ಕೇಂದ್ರ ಸರಕಾರಿ ನೌಕರರ ವೇತನ ಹೆಚ್ಚಳದಿಂದ ದೇಶಕ್ಕೇ ಒಳಿತು!
ಬೆಂಗಳೂರು, ಜೂನ್ 28: ಏಳನೇ ವೇತನ ಆಯೋಗದ ಶಿಫಾರಸುಗಳು ಜುಲೈ ಒಂದರಿಂದಲೇ ಜಾರಿ ಆಗುತ್ತದೆ ಎಂಬ ಸುದ್ದಿ ದೇಶದ ಆರ್ಥಿಕತೆಗೆ ಬಲ ತುಂಬುವಂಥದ್ದು ಎಂದು ಈಗ ಎಲ್ಲ ಕಡೆ ಕೇಳಿಬರುತ್ತಿದೆ. ಏಕೆಂದರೆ ಈ ನಿರ್ಧಾರದಿಂದ ಐವತ್ತು ಲಕ್ಷಕ್ಕೂ ಹೆಚ್ಚು ಕೇಂದ್ರ ಸರಕಾರಿ ನೌಕರರಿಗೆ ಅನುಕೂಲವಾಗುತ್ತದೆ.
ಇದು ಅಷ್ಟಕ್ಕೇ ನಿಲ್ಲುವುದಿಲ್ಲ. ದೇಶದ ಆರ್ಥಿಕತೆಗೆ ಬಲ ತುಂಬುತ್ತದೆ. ಅದು ಹೇಗೆ ಅಂತೀರಾ? ಈಗ ವೇತನ ಜಾಸ್ತಿ ಆಗುವುದರ ಜತೆಗೆ ಅದರ ಬಾಕಿ ಮೊತ್ತ, ಅಂದರೆ ಪೂರ್ವಾನ್ವಯ ಆಗುವಂತೆ ಹಣ ಉದ್ಯೋಗಿಗಳ ಕೈ ಸೇರುತ್ತದೆ. ಮನೆ ಖರೀದಿಸಬೇಕು, ಕಾರು ಕೊಳ್ಳಬೇಕು, ಚಿನ್ನ ಖರೀದಿಸಬೇಕು ಹೀಗೆ ನಾನಾ ಆಸೆಗಳನ್ನಿಟ್ಟುಕೊಂಡವರು ಅವುಗಳಿಗಾಗಿ ಖರ್ಚು ಮಾಡ್ತಾರೆ.

ಅಷ್ಟೇ ಅಲ್ಲ, ಗೃಹ ಬಳಕೆ ವಸ್ತುಗಳ ಖರೀದಿ, ಪ್ರವಾಸ ಕೂಡ ಮಾಡುವ ಸಾಧ್ಯತೆ ಇರುತ್ತದೆ. ಎಲ್ಲ ಖರ್ಚಿನ ಬಾಬ್ತೇ ಅನ್ನೋದಾದರೆ, ಉಳಿತಾಯ ಯೋಜನೆಗಳಲ್ಲಿ ಹಣ ತೊಡಗಿಸುವವರು, ಷೇರು ಮಾರುಕಟ್ಟೆಯಲ್ಲಿ, ಮ್ಯೂಚುವಲ್ ಫಂಡ್ ಗಳಲ್ಲಿ ಹಣ ತೊಡಗಿಸುವವರು, ಆದಾಯ ತೆರಿಗೆ ಉಳಿಸಲು ಹೂಡಿಕೆ ಮಾಡುವವರು, ತಾವು ಪಡೆದಿದ್ದ ಸಾಲವನ್ನು ಮರು ಪಾವತಿಸುವವರು ಹೀಗೆ ನಾನಾ ಬಗೆಯಲ್ಲಿ ಹಣದ ಚಲಾವಣೆ ಆರಂಭವಾಗುತ್ತದೆ.
ಇದರಿಂದ ಅಪನಗದೀಕರಣದ ವೇಳೆಯಲ್ಲಿ ಸ್ವಲ್ಪ ಮಟ್ಟಿಗೆ ಕುಂದಿದಂತೆ ಇದ್ದ ರಿಯಲ್ ಎಸ್ಟೇಟ್ ಹಾಗೂ ಇತರ ವ್ಯವಹಾರಗಳಿಗೂ ಬಲ ಬರುವುದರಲ್ಲಿ ಅನುಮಾನ ಇಲ್ಲ. ಜನರಲ್ಲಿ ಖರೀದಿಸುವ ಹಾಗೂ ವೆಚ್ಚ ಮಾಡುವ ಶಕ್ತಿ ಹೆಚ್ಚಿದಂತೆಲ್ಲ. ಆರ್ಥಿಕ ವ್ಯವಹಾರಗಳು ಚಿಗುರತ್ತವೆ. ಜತೆ ಉದ್ಯೋಗ ಸೃಷ್ಟಿಗೆ ಅನುಕೂಲ ಆಗುತ್ತದೆ. ಈಗ ತಿಳೀತಾ ಏಳನೇ ವೇತನ ಆಯೋಗದ ಜಾರಿ ಆದರೆ ಎಷ್ಟೆಲ್ಲ ವ್ಯತ್ಯಾಸ ಆಗುತ್ತದೆ?
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications