Just in: ಪೇಟಿಎಂ ಬಳಕೆಗೆ ಸಮಸ್ಯೆ, ಸರಿಪಡಿಸುತ್ತೇವೆ ಎಂದ ಕಂಪನಿ
ನವದೆಹಲಿ, ಆ.05: ಡಿಜಿಟಲ್ ಪಾವತಿ ವೇದಿಕೆ ಪೇಟಿಎಂ (Paytm)ನಲ್ಲಿ ದೋಷಗಳು ಕಾಣಿಸಿಕೊಂಡಿದ್ದ ಬೆನ್ನಲ್ಲೇ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ದೂರುಗಳನ್ನು ದಾಖಲಿಸಿದ್ದರು. ಈ ಹಿನ್ನೆಲೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ಭರವಸೆ ನೀಡಿದೆ.
Paytm Money ಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿನ ಕಂಪನಿಯು, "ನೆಟ್ವರ್ಕ್ ದೋಷದಿಂದಾಗಿ, ದೇಶಾದ್ಯಂತ Paytm ಬಳಕೆದಾರರು ಕಷ್ಟಪಡುತ್ತಿದ್ದಾರೆ. ನಿಮ್ಮಲ್ಲಿ ಕೆಲವರು Paytm ಮನಿ ಅಪ್ಲಿಕೇಶನ್/ವೆಬ್ಸೈಟ್ಗೆ ಲಾಗ್ ಇನ್ ಮಾಡುವಲ್ಲಿ ಸಮಸ್ಯೆಯನ್ನು ಎದುರಿಸುತ್ತಿರಬಹುದು. ನಾವು ಈಗಾಗಲೇ ಸಮಸ್ಯೆಯನ್ನು ಸರಿಪಡಿಸಲು ಕೆಲಸ ಮಾಡುತ್ತಿದ್ದೇವೆ. ಶೀಘ್ರವಾಗಿ. ಅದನ್ನು ಪರಿಹರಿಸಿದ ತಕ್ಷಣ ನಾವು ನಿಮಗೆ ತಿಳಿಸುತ್ತೇವೆ" ಎಂದಿದೆ.

ಪೇಟಿಎಂ ಬಳಕೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವದನ್ನು ಕಂಪನಿ ಒಪ್ಪಿಕೊಂಡಿದ್ದು, "ನಮ್ಮ ಕೆಲವು ವ್ಯಾಪಾರ ಮತ್ತು F&O ಬಳಕೆದಾರರು ತಮ್ಮ ವಹಿವಾಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಯಾವಾಗಲೂ ನಿಮ್ಮ ಜೊತೆಗೆ ನ್ಯಾಯಯುತ ಮತ್ತು ಪಾರದರ್ಶಕವಾಗಿರಲು ನಮ್ಮ ನಿರಂತರ ಪ್ರಯತ್ನ ನಡೆಯುತ್ತಿದೆ. ನಿಮ್ಮ ಸಮಸ್ಯೆಗಳನ್ನು [email protected] ನಲ್ಲಿ ಇಮೇಲ್ ಮೂಲಕ ನಮಗೆ ತಿಳಿಸಿ" ಎಂದು ವಿನಂತಿ ಮಾಡಿದೆ.

"ಸಮಸ್ಯೆ ಇದೆ. ನಾವು ಅದನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಅಂತಹ ಬಾಹ್ಯ ಸಮಸ್ಯೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಾವು ಶ್ರಮಿಸುತ್ತಿದ್ದೇವೆ. ನಿಮ್ಮ ಬೆಂಬಲಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು" ಎಂದಿದೆ.
ಹಲವಾರು Paytm ಬಳಕೆದಾರರು ಪಾವತಿಗಳನ್ನು ಮಾಡಲು Paytm ಅಪ್ಲಿಕೇಶನ್ ಮತ್ತು ವೆಬ್ಸೈಟ್ಗೆ ಲಾಗ್ ಇನ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದರು. ಕೆಲವರು ಇದನ್ನು "ಕಳ್ಳತನ" ಎಂದು ಕೂಡ ಕರೆದಿದ್ದಾರೆ.
Paytm ಗ್ರಾಹಕರಿಗೆ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಮೊಬೈಲ್, ಡೈರೆಕ್ಟ್-ಟು-ಹೋಮ್ ರೀಚಾರ್ಜ್, ಹಣ ವರ್ಗಾವಣೆ ಸೇರಿದಂತೆ ಹಲವಾರು ಸೇವೆಗಳಿಗೆ ಡಿಜಿಟಲ್ ಪಾವತಿಗಳನ್ನು ಮಾಡಲು ಸಹಾಯಕವಾಗಿದೆ.
ಇನ್ನು, ಪೇಟಿಎಂ ಕಂಪನಿಯನ್ನು ನಿರ್ವಹಿಸುವ ಒನ್97 ಕಮ್ಯೂನಿಕೇಶನ್ಸ್ ಕಂಪನಿಗೆ ಎಂಡಿ ಮತ್ತು ಸಿಇಒ ಆಗಿ ವಿಜಯ್ ಶೇಖರ್ ಶರ್ಮಾ ಮರು ನೇಮಕವಾಗಿದ್ದಾರೆ. ಇವರ ಅಧಿಕಾರಾವಧಿ 2027 ಡಿಸೆಂಬರ್ 18ರವರೆಗೂ ಇರಲಿದೆ.
-
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ












Click it and Unblock the Notifications