Just in: ಪೇಟಿಎಂ ಬಳಕೆಗೆ ಸಮಸ್ಯೆ, ಸರಿಪಡಿಸುತ್ತೇವೆ ಎಂದ ಕಂಪನಿ
ನವದೆಹಲಿ, ಆ.05: ಡಿಜಿಟಲ್ ಪಾವತಿ ವೇದಿಕೆ ಪೇಟಿಎಂ (Paytm)ನಲ್ಲಿ ದೋಷಗಳು ಕಾಣಿಸಿಕೊಂಡಿದ್ದ ಬೆನ್ನಲ್ಲೇ ಬಳಕೆದಾರರು ಸಾಮಾಜಿಕ ಮಾಧ್ಯಮದಲ್ಲಿ ದೂರುಗಳನ್ನು ದಾಖಲಿಸಿದ್ದರು. ಈ ಹಿನ್ನೆಲೆ ಸಮಸ್ಯೆಗಳನ್ನು ಪರಿಹರಿಸಲು ಕ್ರಮ ಕೈಗೊಳ್ಳುತ್ತಿರುವುದಾಗಿ ಕಂಪನಿ ಭರವಸೆ ನೀಡಿದೆ.
Paytm Money ಯ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿನ ಕಂಪನಿಯು, "ನೆಟ್ವರ್ಕ್ ದೋಷದಿಂದಾಗಿ, ದೇಶಾದ್ಯಂತ Paytm ಬಳಕೆದಾರರು ಕಷ್ಟಪಡುತ್ತಿದ್ದಾರೆ. ನಿಮ್ಮಲ್ಲಿ ಕೆಲವರು Paytm ಮನಿ ಅಪ್ಲಿಕೇಶನ್/ವೆಬ್ಸೈಟ್ಗೆ ಲಾಗ್ ಇನ್ ಮಾಡುವಲ್ಲಿ ಸಮಸ್ಯೆಯನ್ನು ಎದುರಿಸುತ್ತಿರಬಹುದು. ನಾವು ಈಗಾಗಲೇ ಸಮಸ್ಯೆಯನ್ನು ಸರಿಪಡಿಸಲು ಕೆಲಸ ಮಾಡುತ್ತಿದ್ದೇವೆ. ಶೀಘ್ರವಾಗಿ. ಅದನ್ನು ಪರಿಹರಿಸಿದ ತಕ್ಷಣ ನಾವು ನಿಮಗೆ ತಿಳಿಸುತ್ತೇವೆ" ಎಂದಿದೆ.

ಪೇಟಿಎಂ ಬಳಕೆಯಲ್ಲಿ ಸಮಸ್ಯೆ ಕಂಡು ಬರುತ್ತಿರುವದನ್ನು ಕಂಪನಿ ಒಪ್ಪಿಕೊಂಡಿದ್ದು, "ನಮ್ಮ ಕೆಲವು ವ್ಯಾಪಾರ ಮತ್ತು F&O ಬಳಕೆದಾರರು ತಮ್ಮ ವಹಿವಾಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ನಾವು ಅರ್ಥಮಾಡಿಕೊಂಡಿದ್ದೇವೆ. ಯಾವಾಗಲೂ ನಿಮ್ಮ ಜೊತೆಗೆ ನ್ಯಾಯಯುತ ಮತ್ತು ಪಾರದರ್ಶಕವಾಗಿರಲು ನಮ್ಮ ನಿರಂತರ ಪ್ರಯತ್ನ ನಡೆಯುತ್ತಿದೆ. ನಿಮ್ಮ ಸಮಸ್ಯೆಗಳನ್ನು [email protected] ನಲ್ಲಿ ಇಮೇಲ್ ಮೂಲಕ ನಮಗೆ ತಿಳಿಸಿ" ಎಂದು ವಿನಂತಿ ಮಾಡಿದೆ.

"ಸಮಸ್ಯೆ ಇದೆ. ನಾವು ಅದನ್ನು ಪರಿಹರಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ. ಅಂತಹ ಬಾಹ್ಯ ಸಮಸ್ಯೆಗಳು ಮರುಕಳಿಸದಂತೆ ನೋಡಿಕೊಳ್ಳಲು ನಾವು ಶ್ರಮಿಸುತ್ತಿದ್ದೇವೆ. ನಿಮ್ಮ ಬೆಂಬಲಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು" ಎಂದಿದೆ.
ಹಲವಾರು Paytm ಬಳಕೆದಾರರು ಪಾವತಿಗಳನ್ನು ಮಾಡಲು Paytm ಅಪ್ಲಿಕೇಶನ್ ಮತ್ತು ವೆಬ್ಸೈಟ್ಗೆ ಲಾಗ್ ಇನ್ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ದೂರಿದ್ದರು. ಕೆಲವರು ಇದನ್ನು "ಕಳ್ಳತನ" ಎಂದು ಕೂಡ ಕರೆದಿದ್ದಾರೆ.
Paytm ಗ್ರಾಹಕರಿಗೆ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಮೊಬೈಲ್, ಡೈರೆಕ್ಟ್-ಟು-ಹೋಮ್ ರೀಚಾರ್ಜ್, ಹಣ ವರ್ಗಾವಣೆ ಸೇರಿದಂತೆ ಹಲವಾರು ಸೇವೆಗಳಿಗೆ ಡಿಜಿಟಲ್ ಪಾವತಿಗಳನ್ನು ಮಾಡಲು ಸಹಾಯಕವಾಗಿದೆ.
ಇನ್ನು, ಪೇಟಿಎಂ ಕಂಪನಿಯನ್ನು ನಿರ್ವಹಿಸುವ ಒನ್97 ಕಮ್ಯೂನಿಕೇಶನ್ಸ್ ಕಂಪನಿಗೆ ಎಂಡಿ ಮತ್ತು ಸಿಇಒ ಆಗಿ ವಿಜಯ್ ಶೇಖರ್ ಶರ್ಮಾ ಮರು ನೇಮಕವಾಗಿದ್ದಾರೆ. ಇವರ ಅಧಿಕಾರಾವಧಿ 2027 ಡಿಸೆಂಬರ್ 18ರವರೆಗೂ ಇರಲಿದೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications