ಪೇಟಿಎಂನಿಂದ 1 ಲಕ್ಷಕ್ಕೂ ಅಧಿಕ ಎಟಿಎಂ ಸ್ಥಾಪನೆ
ಬೆಂಗಳೂರು, ಡಿಸೆಂಬರ್ 06: ನಗದುರಹಿತ ಬ್ಯಾಂಕಿಂಗ್ ವ್ಯವಹಾರವನ್ನು ನಡೆಸಲು ಮುಂದಾಗಿರುವ ಸಾರ್ವಜನಿಕರಿಗೆ ನೆರವಾಗಲು ಈಗ ಅನೇಕ ಅಪ್ಲಿಕೇಷನ್ ಗಳಿವೆ. ಈ ಪೈಕಿ ಪೇಟಿಎಂ ತನ್ನದೇ ಆದ ಪೇಮೆಂಟ್ ಬ್ಯಾಂಕಿಂಗ್ ಸೇವೆ ಆರಂಭಿಸಿದ್ದು ತಿಳಿದಿರಬಹುದು, ಈಗ ಎಟಿಎಂ ಮಾದರಿಯಲ್ಲಿ ಬ್ಯಾಂಕಿಂಗ್ ಪಾಯಿಂಟ್ ಗಳನ್ನು ಸ್ಥಾಪಿಸಲು ಮುಂದಾಗಿದೆ.
ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ದೇಶದಲ್ಲಿ ಒಟ್ಟು 1 ಲಕ್ಷ ಎಟಿಎಂಗಳನ್ನು ತೆರೆಯಲು ಉದ್ದೇಶಿಸಿದೆ. ಈ ಮೂಲಕ ತನ್ನ ಗ್ರಾಹಕರಿಗೆ ವಹಿವಾಟು ನಡೆಸಲು ಹೊಸ ವೇದಿಕೆ ಒದಗಿಸುತ್ತಿದೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಹಣವನ್ನು ಡೆಪಾಸಿಟ್ ಹಾಗೂ ವಿತ್ ಡ್ರಾ ಮಾಡಲು ಗ್ರಾಹಕರಿಗೆ ಸ್ಥಳೀಯ ಬ್ಯಾಂಕ್ ಪ್ರತಿನಿಧಿಗಳು ಸಹಕರಿಸುತ್ತಾರೆ. ಈಗಾಗಲೇ ದೆಹಲಿ, ಲಕ್ನೋ, ಕಾನ್ಪುರ, ಅಲಹಾಬಾದ್, ವಾರಣಾಸಿ, ಅಲಿಗಢ ಸೇರಿದಂತೆ ವಿವಿಧೆಡೆ 3,000 ಎಟಿಎಂಗಳನ್ನು ಪ್ರಾಯೋಗಿಕವಾಗಿ ಆರಂಭಿಸಲಾಗಿದೆ.
ಪೇಟಿಎಂ ಆ್ಯಪ್ ನಲ್ಲಿ ಪ್ರತ್ಯೇಕ ಬ್ಯಾಂಕ್ ಸೆಕ್ಷನ್ ಎಂದು ಸೌಲಭ್ಯ ನೀಡಲಾಗುತ್ತದೆ. ಪೇಮೆಂಟ್, ಡಿಜಿಟಲ್ ಡೆಬಿಟ್ ಕಾರ್ಡ್, ಪಾಸ್ಬುಕ್ ಸೌಲಭ್ಯ ಕೂಡ ಇರಲಿದೆ. ಮುಂದಿನ ಮೂರು ವರ್ಷಗಳ ಅವಧಿಗೆ 3000 ಕೋಟಿ ರೂಪಾಯಿ ಹೂಡಿಕೆ ಮಾಡಲು ಪೇಟಿಎಂ ನಿರ್ಧರಿಸಿದ್ದು, ಉಚಿತ ಡೆಬಿಟ್ ಕಾರ್ಡ್ ಗಳ ವಿತರಣೆಯನ್ನು ಹೆಚ್ಚಿಸಲು ನಿರ್ಧರಿಸಿದೆ.
ಭಾರತದ ಅತ್ಯುತ್ತಮ 5 ಮೊಬೈಲ್ ಅಪ್ಲಿಕೇಶನ್ಗಳು ಯಾವವು?
ಪೇಮೆಂಟ್ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಏರ್ ಟೆಲ್ ಪೇಮೆಂಟ್ ಬ್ಯಾಂಕ್, ಫಿನೋ ಪೇಮೆಂಟ್ ಬ್ಯಾಂಕ್ ಹಾಗೂ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸದ್ಯಕ್ಕೆ ಚಾಲನೆಯಲ್ಲಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications