ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

9.5 ಲಕ್ಷ ರು ತನಕ ತೆರಿಗೆ ಉಳಿಸಬಹುದು : ಪಿಯೂಶ್ ಗೋಯೆಲ್

|
Google Oneindia Kannada News

ನವದೆಹಲಿ, ಫೆಬ್ರವರಿ 13: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಆದಾಯ ತೆರಿಗೆ ಪಾವತಿದಾರರಿಗೆ ಶುಭ ಸುದ್ದಿ ಸಿಕ್ಕಿತ್ತು. ವಾರ್ಷಿಕ ಆದಾಯ 5 ಲಕ್ಷ ರೂ. ವರೆಗೆ ತೆರಿಗೆ ಕಟ್ಟಬೇಕಿಲ್ಲ ಜತೆಗೆ ತೆರಿಗೆ ರಿಬೇಟ್ 2500 ರೂ. ನಿಂದ 12,500 ರೂ.ಗೆ ಏರಿಸಲಾಗಿದೆ ಎಂಬ ವಿಷಯ ಸಂತಸ ತಂದಿತ್ತು. ಈಗ ಸಚಿವ ಪಿಯೂಶ್ ಗೊಯೆಲ್ ಅವರು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದ್ದಾರೆ.

ಕೇಂದ್ರ ಸರ್ಕಾರ ಮಂಡಿಸಿರುವ ಮಧ್ಯಂತರ ಬಜೆಟ್ ನಲ್ಲಿ ತೆರಿಗೆ ವಿನಾಯಿತಿ ಪ್ರಸ್ತಾಪನೆಯುಳ್ಳ ಹಣಕಾಸು ವಿಧೇಯಕ ಲೋಕಸಭೆಯಲ್ಲಿ ಅಂಗೀಕಾರ ದೊರೆತಿದೆ.

 ಮೋದಿ ಸರಕಾರದಿಂದ ಮಧ್ಯಮ ವರ್ಗೀಯ ಆದಾಯ ತೆರಿಗೆದಾರರಿಗೆ ಸೂಪರ್ ಗಿಫ್ಟ್ ಮೋದಿ ಸರಕಾರದಿಂದ ಮಧ್ಯಮ ವರ್ಗೀಯ ಆದಾಯ ತೆರಿಗೆದಾರರಿಗೆ ಸೂಪರ್ ಗಿಫ್ಟ್

ವಾರ್ಷಿಕ ರೂ. 9 ಲಕ್ಷದಿಂದ ರೂ. 9.5 ಲಕ್ಷದವರೆಗೆ ಆದಾಯ ಹೊಂದಿರುವ ಮಧ್ಯಮ ವರ್ಗದವರು ಉಳಿತಾಯ ಯೋಜನೆಗಳ ಲಾಭ ಪಡೆಯುವ ಮೂಲಕ ವೈಯಕ್ತಿಕ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದು ಹಣಕಾಸು ಸಚಿವ ಪಿಯೂಷ್ ಗೋಯಲ್ ಮಂಗಳವಾರ ಹೇಳಿದ್ದಾರೆ.

People with income up to Rs 9.5 L can escape tax liability: FM Piyush Goyal

ಹಣಕಾಸು ವಿಧೇಯಕ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದಕೇಂದ್ರ ವಿತ್ತ ಸಚಿವ ಪಿಯೂಶ್ ಗೊಯೆಲ್, ವಾರ್ಷಿಕ 9 ಲಕ್ಷ ರೂ.ನಿಂದ 9.5 ಲಕ್ಷ ರೂ. ವರೆಗೂ ಆದಾಯ ಹೊಂದಿರುವ ಮಧ್ಯಮ ವರ್ಗದವರು ಉಳಿತಾಯ ಯೋಜನೆಗಳ ಲಾಭ ಪಡೆಯುವ ಮೂಲಕ ವೈಯಕ್ತಿಕ ಆದಾಯ ತೆರಿಗೆಯಿಂದ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ ಎಂದರು.

ದೇಶದ ಆರ್ಥಿಕತೆಗೆ, ಜನಸಾಮಾನ್ಯರು ಮತ್ತು ಮಧ್ಯಮ ವರ್ಗದವರಿಗೆ ಹೊಸ ತೆರಿಗೆ ನೀತಿಯಿಂದ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು. ಹಣಕಾಸು ವಿಧೇಯಕ 2019ರಲ್ಲಿ ಸ್ಟಾಂಡರ್ಡ್ ಡಿಡಕ್ಷನ್ 40 ಸಾವಿರ ರುನಿಂದ 50 ಸಾವಿರ ರುಗಳಿಗೆ ಏರಿಕೆಯಾಗಿದೆ. ಹೀಗಾಗಿ, ಮಧ್ಯಮ ವರ್ಗದ ತೆರಿಗೆದಾರರಿಗೆ ಅನುಕೂಲವಾಗಲಿದೆ ಎಂದರು.

English summary
Stressing that tax concessions have been provided with a view to help poor and middle class people living on a tight budget, Finance Minister Piyush Goyal on Tuesday said that now individuals earning up to Rs 9.5 lakh can escape liability by taking advantage of saving schemes.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X