ಪೆಪ್ಸಿಕೋ ಇಂಡಿಯಾ ಸಿಇಒ ಡಿ ಶಿವಕುಮಾರ್ ರಾಜೀನಾಮೆ
ಬೆಂಗಳೂರು, ಅಕ್ಟೋಬರ್ 10: ಪೆಪ್ಸಿಕೋ ಇಂಡಿಯಾದ ಚೇರ್ಮನ್ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಿ ಶಿವಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಪೆಪ್ಸಿಕೋ ತೊರೆದ ಬಳಿಕ ಆದಿತ್ಯ ಬಿರ್ಲಾ ಸಮೂಹ ಸಂಸ್ಥೆಯ ಉಪಾಧ್ಯಕ್ಷರಾಗಿ ನೇಮಕವಾಗಿದ್ದಾರೆ. ಬಿರ್ಲಾ ಸಂಸ್ಥೆ ಮುಖ್ಯಸ್ಥ ಕುಮಾರಮಂಗಲಂ ಬಿರ್ಲಾಗೆ ನೇರವಾಗಿ ಶಿವಕುಮಾರ್ ಅವರು ವರದಿ ಮಾಡಲಿದ್ದಾರೆ.

ಸುಮಾರು 36 ದೇಶಗಳಲ್ಲಿ ಬಿರ್ಲಾ ಸಂಸ್ಥೆಯು ಟೆಲಿಕಮ್ಯೂನಿಕೇಷನ್, ಸಿಮೆಂಟ್, ಕೆಮಿಕಲ್ಸ್, ಗಣಿಗಾರಿಕೆ, ಜವಳಿ, ರೀಟೈಲ್, ಇ ಕಾಮರ್ಸ್ ಮುಂತಾದ ಕ್ಷೇತ್ರಗಳಲ್ಲಿ ತನ್ನ ವ್ಯವಹಾರವನ್ನು ಹೊಂದಿದೆ.
ಡಿ ಶಿವಕುಮಾರ್ ಸ್ಥಾನಕ್ಕೆ ಪೆಪ್ಸಿಕೋ ಸಂಸ್ಥೆಯ ಈಜಿಪ್ಟ್ ಹಾಗೂ ಜೋರ್ಡಾನ್ ನ ಪ್ರಧಾನ ವ್ಯವಸ್ಥಾಪಕರಾಗಿರುವ ಅಹ್ಮದ್ ಎಲ್ ಶೇಖ್ ಅವರನ್ನು ಕರೆ ತರಲಾಗಿದೆ. ಪೆಪ್ಸಿಕೋನ ಬ್ರಾಂಡ್ ಗಳಾದ ಕ್ವಾಕರ್, ಟ್ರೊಪಿಕಾನಾಗೆ ಮಾರುಕಟ್ಟೆಯಲ್ಲಿ ಬೆಲೆ ತರುವಂತೆ ಮಾಡುವಲ್ಲಿ ಶಿವಕುಮಾರ್ ಶ್ರಮ ವಹಿಸಿದ್ದರು.
2020ರ ವೇಳೆಗೆ ಭಾರತದಲ್ಲಿ 33,000 ಕೋಟಿ ಹೂಡಿಕೆ ಮಾಡಲಿರುವ ಪೆಪ್ಸಿಕೋ 38 ಬಾಟ್ಲಿಂಗ್ ಪ್ಲಾಂಟ್ಸ್ ಹಾಗೂ ಮೂರು ಆಹಾರ ಸಂಸ್ಕರಣಾ ಕಾರ್ಖಾನೆಗಳನ್ನು ಸ್ಥಾಪಿಸಲು ಶಿವಕುಮಾರ್ ಕಾರಣರಾಗಿದ್ದಾರೆ. ನೋಕಿಯಾ, ಹಿಂದೂಸ್ತಾನ್ ಲಿವರ್, ಫಿಲಿಫ್ಸ್ ಸೇರಿದಂತೆ ದೊಡ್ಡ ಸಂಸ್ಥೆಗಳ ಬೆಳವಣಿಗೆಗಳಿಗೆ ಶಿವಕುಮಾರ್ ಶ್ರಮಿಸಿದ್ದರು.
ಇತ್ತೀಚೆಗೆ ಕೋಕಾ ಕೋಲಾ ಇಂಡಿಯಾದ ಅಧ್ಯಕ್ಷ ವೆಂಕಟೇಶ್ ಕಿಣಿ ಅವರು ಸಂಸ್ಥೆ ತೊರೆದಿದ್ದನ್ನು ಇಲ್ಲಿ ಸ್ಮರಿಸಬಹುದು.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications