Petrol Price Today: ಏ.7ರಂದು ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ?
ನವದೆಹಲಿ, ಏಪ್ರಿಲ್ 7: ಉಕ್ರೇನ್ ಹಾಗೂ ರಷ್ಯಾದ ಯುದ್ಧದ ನಡುವೆ ದೇಶದಲ್ಲಿ ಕೆಲವು ದಿನಗಳಿಂದ ನಿರಂತರವಾಗಿ ಪೆಟ್ರೋಲ್ ಹಾಗೂ ಡೀಸೆಲ್ ದರದಲ್ಲಿ ಏರಿಕೆ ಕಂಡು ಬಂದಿದೆ. ಆದರೆ ಇಂದು (ಏಪ್ರಿಲ್ 7,2022) ಪೆಟ್ರೋಲ್, ಡೀಸೆಲ್ ಸ್ಥಿರವಾಗಿದೆ. ಕಳೆದ 17 ದಿನಗಳಲ್ಲಿ ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ 14ನೇ ಬಾರಿ ಹೆಚ್ಚಳವಾಗಿದ್ದು, ಲೀಟರ್ಗೆ ಒಟ್ಟು 10 ರೂಪಾಯಿ ಏರಿಕೆ ಆಗಿದೆ. ಇಂದು ಪೆಟ್ರೋಲ್ ಹಾಗೂ ಡೀಸೆಲ್ ದರವು ಯಥಾಸ್ಥಿತಿ ಕಾಯ್ದುಕೊಂಡಿದೆ.
ಸರ್ಕಾರಿ ಸ್ವಾಮ್ಯದ ಮೂರು ಪ್ರಮುಖ ತೈಲ ಕಂಪನಿಗಳು ಏಪ್ರಿಲ್ 7ರಂದು ಪೆಟ್ರೋಲ್, ಡೀಸೆಲ್ ದರ ಪರಿಷ್ಕರಣೆ ಮಾಡಿದ್ದು, ಇಂಧನ ದರ ಸ್ಥಿರವಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಲೀಟರ್ಗೆ ರೂ. 105.41 ಆಗಿದೆ. ಮಂಗಳವಾರ ದೆಹಲಿಯಲ್ಲಿ ಪೆಟ್ರೋಲ್ಗೆ 104.61 ರೂ. ಆಗಿತ್ತು. ಬುಧವಾರ ಪರಿಷ್ಕರಣೆಯ ಬಳಿಕ ಪೆಟ್ರೋಲ್ ಬೆಲೆ ರೂ. 105.41 ಕ್ಕೆ ಏರಿಕೆ ಆಗಿತ್ತು. ಇನ್ನು ಡಿಸೇಲ್ ಬೆಲೆಯು ಕೂಡಾ ಸ್ಥಿರವಾಗಿದ್ದು ರೂ.96.67 ಆಗಿದೆ. ಮಂಗಳವಾರ ದೆಹಲಿಯಲ್ಲಿ ಡೀಸೆಲ್ ಬೆಲೆ ರೂ.95.87 ಆಗಿತ್ತು. ಬುಧವಾರ ರೂ.96.67ಕ್ಕೆ ಏರಿಕೆ ಆಗಿದ್ದು, ಇಂದು ಸ್ಥಿರವಾಗಿದೆ.
ರಷ್ಯಾ ಮತ್ತು ಉಕ್ರೇನ್ ಯುದ್ಧದ ಪರಿಣಾಮವಾಗಿ ಕಚ್ಚಾತೈಲ ಬೆಲೆ ದಶಕದ ಬಳಿಕ ಮೊದಲ ಬಾರಿಗೆ ಭಾರೀ ಏರಿಕೆ ಕಂಡು ಬಂದಿದೆ. ಈ ಬೆನ್ನಲ್ಲೇ ದೇಶದಲ್ಲಿ ಮಾರ್ಚ್ 22ರಂದು ಸುಮಾರು ನಾಲ್ಕೂವರೆ ತಿಂಗಳ ನಂತರ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಲಾಗಿದೆ. ಪೆಟ್ರೋಲ್, ಡೀಸೆಲ್ ದರ ಕಳೆದ 17 ದಿನಗಳಲ್ಲಿ ಮೂರು ದಿನ ಮಾತ್ರ ಸ್ಥಿರವಾಗಿದ್ದು, ಉಳಿದ ದಿನಗಳಲ್ಲಿ ಏರಿಕೆ ಕಂಡಿದೆ. ಹಾಗಾದರೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಎಂದು ತಿಳಿಯಲು ಮುಂದೆ ಓದಿ..

ಬೆಂಗಳೂರು ಸೇರಿ ಇತರ ನಗರಗಳಲ್ಲಿ ಪೆಟ್ರೋಲ್-ಡೀಸೆಲ್ ದರ
ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೆಟ್ರೋಲ್ ದರ 7 ಪೈಸೆ ಇಳಿಕೆ ಹೊಂದಿ, 111.09 ರೂಪಾಯಿ ಆಗಿದೆ. ಇನ್ನು ಡೀಸೆಲ್ ಬೆಲೆಯು ಕೂಡಾ 7 ಪೈಸೆ ಇಳಿಕೆಯಾಗಿದ್ದು, 94.79 ರೂ ಆಗಿದೆ. ಚೆನ್ನೈನಲ್ಲಿ ಪೆಟ್ರೋಲ್ ದರ ಕೊಂಚ ಇಳಿಕೆಯಾಗಿದೆ. ಬುಧವಾರ 110.95 ರೂಪಾಯಿ ಆಗಿದ್ದ ಪೆಟ್ರೋಲ್ ದರ ಇಂದು110.85 ಕ್ಕೆ ತಗ್ಗಿದೆ. ಡೀಸೆಲ್ ದರ ಬುಧವಾರ 101.04 ರೂಪಾಯಿ ಇದ್ದು, ಇಂದು 100.94 ರೂ ಆಗಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ದರ 115.12 ರೂಪಾಯಿ, ಡೀಸೆಲ್ ದರ 99.83 ರೂಪಾಯಿ ಆಗಿದೆ.

ವಾಣಿಜ್ಯ ನಗರಿ ಪೆಟ್ರೋಲ್, ಡೀಸೆಲ್ ದರ
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಇಂದು ಪೆಟ್ರೋಲ್ ಬೆಲೆ ಸ್ಥಿರತೆ ಕಾಯ್ದುಕೊಂಡಿದ್ದು, ರೂ. 120.51 ಆಗಿದೆ. ಡೀಸೆಲ್ ಬೆಲೆ ಸ್ಥಿರವಾಗಿದ್ದು ರೂ. 104.77 ಆಗಿದೆ. ಇನ್ನು ಹೈದರಾಬಾದ್ನಲ್ಲಿ ಪೆಟ್ರೋಲ್ ದರ 119.49 ರೂಪಾಯಿ ಆಗಿದ್ದರೆ, ಡೀಸೆಲ್ ದರ 105.49 ರೂಪಾಯಿ ಆಗಿದೆ. ಇನ್ನು ಪ್ರಮುಖ ರಾಜ್ಯಗಳ ಪೈಕಿ ಪಂಜಾಬ್ ರಾಜ್ಯ ರಾಜಧಾನಿ ಪೈಕಿ ಚಂಡೀಗಢದಲ್ಲಿ ಅತೀ ಕಡಿಮೆ ಡೀಸೆಲ್ ದರವಿದೆ. ಪ್ರತಿ ಲೀಟರ್ಗೆ 90.83 ರೂಪಾಯಿ ಆಗಿದೆ. ಇನ್ನು ಪೆಟ್ರೋಲ್ ದರವು ಕೂಡಾ ಚಂಡೀಗಢದಲ್ಲಿ ಕಡಿಮೆ ಇದೆ. 104.74 ರೂಪಾಯಿ ಆಗಿದೆ.

ಪ್ರಮುಖ ನಗರಗಳಲ್ಲಿ ಬೆಲೆ ಎಷ್ಟಿದೆ?
ದೇಶದ ಎಲ್ಲಾ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ಬೆಲೆಯು ನೂರರ ಗಡಿ ದಾಟಿದೆ. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್ ದರವು 104 ರೂಪಾಯಿಯಿಂದ 120 ರೂಪಾಯಿ ಆಸುಪಾಸಿನಲ್ಲಿದೆ. ಇನ್ನು ಡೀಸೆಲ್ ದರವು ದೇಶದ ಕೆಲವು ಪ್ರಮುಖ ನಗರದಲ್ಲಿ ನೂರರ ಗಡಿಯನ್ನು ದಾಟಿದೆ. ಹೈದರಾಬಾದ್, ಮುಂಬೈ, ತಿರುವನಂತಪುರ, ಭುವನೇಶ್ವರ, ಚೆನ್ನೈ, ಜೈಪುರ, ಪಾಟ್ನಾದಲ್ಲಿ ಡೀಸೆಲ್ ದರವು ನೂರರ ಗಡಿಯನ್ನು ದಾಟಿದೆ. ಉಳಿದಂತೆ ಇತರೆ ನಗರಗಳಲ್ಲಿ 90 ರೂಪಾಯಿ ಆಸುಪಾಸಿನಲ್ಲಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲದ ಬೆಲೆ
ಜಾಗತಿಕ ಬ್ರೆಂಟ್ ಕಚ್ಚಾ ತೈಲ ಬೆಲೆಯು ಪ್ರತಿ ಬ್ಯಾರೆಲ್ಗೆ 102.8 ಯುಎಸ್ ಡಾಲರ್ನಂತೆ ವ್ಯವಹಾರ ನಡೆಸುತ್ತಿದೆ. ಭಾರತದಲ್ಲಿ ಇಂಧನ ಆಮದು ಬಳಿಕ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ರಾಜ್ಯಗಳಲ್ಲಿ ಅಬಕಾರಿ ಸುಂಕಗಳನ್ನು ಸೇರಿಸಲಾಗುತ್ತದೆ, ನಂತರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ. ಈ ಹಿಂದೆ ಕೇಂದ್ರ ಸರ್ಕಾರ ಹಾಗೂ ಕೆಲವು ರಾಜ್ಯಗಳು ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಸುಂಕವನ್ನು ಕಡಿತ ಮಾಡಿದ್ದವು, ಈಗ ಇಂಧನ ದರ ಏರಿಕೆಯ ನಡುವೆ ಮತ್ತೆ ಸೆಸ್ ಅನ್ನು ಇಳಿಕೆ ಮಾಡಬೇಕು ಎಂಬ ಆಗ್ರಹ ಕೇಳಿಬಂದಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
ಪೆಟ್ರೋಲ್, ಡೀಸೆಲ್ ಮೇಲಿನ ಅಬಕಾರಿ ಸುಂಕ ಭಾರೀ ಕಡಿತ; ಗ್ರಾಹಕರಿಗೆ ಇಳಿಯುತ್ತಾ ಕಚ್ಚಾ ತೈಲ ಬೆಲೆ? -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ












Click it and Unblock the Notifications