ಸತತ ಏರಿಕೆ ಬಳಿಕ ಪೆಟ್ರೋಲ್, ಡೀಸೆಲ್ ದರದಲ್ಲಿ ಭಾರಿ ಇಳಿಕೆ
ನವದೆಹಲಿ, ಅಕ್ಟೋಬರ್ 5: ಪೆಟ್ರೋಲ್ ಮತ್ತು ಡೀಸೆಲ್ ದರದಲ್ಲಿ ಶನಿವಾರ ಭಾರಿ ಇಳಿಕೆಯಾಗಿದೆ. ಕೆಲವು ದಿನಗಳ ಹಿಂದೆ ಸತತ ಏರಿಕೆಯಾಗಿದ್ದ ತೈಲ ಬೆಲೆ ಸತತ ಮೂರನೇ ದಿನ ಇಳಿಕೆಯ ಹಾದಿಯಲ್ಲಿದೆ. ಶನಿವಾರ ದೇಶಾದ್ಯಂತ ಪೆಟ್ರೋಲ್ ದರವು 29-31 ಪೈಸೆ ಇಳಿಕೆಯಾಗಿದ್ದರೆ, ಡೀಸೆಲ್ ದರವು 19-20 ಪೈಸೆಯಷ್ಟು ಕಡಿಮೆಯಾಗಿದೆ. ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯು ಮುಂದಿನ ದಿನಗಳಲ್ಲಿ ಮತ್ತಷ್ಟು ತಗ್ಗುವ ಸೂಚನೆ ಇರುವುದರಿಂದ ಪೆಟ್ರೋಲ್ ಹಾಗೂ ಡೀಸೆಲ್ ಇನ್ನೂ ಅಗ್ಗವಾಗುವ ಸಾಧ್ಯತೆ ಇದೆ ಎಂದು ಇಂಡಿಯನ್ ಆಯಿಲ್ ತಿಳಿಸಿದೆ.
ಜಗತ್ತಿನ ಅತಿ ದೊಡ್ಡ ತೈಲ ಉತ್ಪಾದಕ ದೇಶವಾದ ಸೌದಿ ಅರೇಬಿಯಾದಲ್ಲಿ ಅರ್ಧದಷ್ಟು ತೈಲ ಉತ್ಪಾದನೆ ಮಾಡುವ ಕಚ್ಚಾ ತೈಲ ಸಂಸ್ಕರಣಾ ಘಟಕಗಳ ಮೇಲೆ ಬಂಡುಕೋರರು ಸೆ. 14ರಂದು ಡ್ರೋನ್ ದಾಳಿ ನಡೆಸಿದ ಬಳಿಕ ತೈಲ ಬೆಲೆಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಇಳಿಕೆಯಾಗಿದೆ. ರಾಜಧಾನಿ ದೆಹಲಿಯಲ್ಲಿ ಲೀಟರ್ಗೆ 71.97 ರೂ ಇದ್ದ ಪೆಟ್ರೋಲ್ ಹಾಗೂ 65.37 ರೂ. ಇದ್ದ ಡೀಸೆಲ್ ಬೆಲೆಯಲ್ಲಿ ಈ ದಾಳಿಯ ಬಳಿಕ ತೈಲ ಬೆಲೆಯ ಸ್ವಯಂಚಾಲಿತ ಬದಲಾವಣೆಯಲ್ಲಿ ಭಾರಿ ಏರಿಕೆ ಉಂಟಾಗಿತ್ತು.

ರಾಜಧಾನಿ ದೆಹಲಿಯಲ್ಲಿ ಬೆಲೆ
ಶನಿವಾರ ದೆಹಲಿಯಲ್ಲಿ ಪೆಟ್ರೋಲ್ ಬೆಲೆ 29 ಪೈಸೆ ಇಳಿಕೆಯಾಗಿದ್ದು, ಲೀಟರ್ಗೆ 74.04 ರೂ. ಇದೆ. ಶುಕ್ರವಾರ ಲೀಟರ್ಗೆ 74.33 ರೂ ಇತ್ತು. ಡೀಸೆಲ್ ಬೆಲೆಯು 20 ಪೈಸೆ ಇಳಿಕೆಯಾಗಿದ್ದು, ಶುಕ್ರವಾರದ 67.35 ರಿಂದ 67.15 ರೂ ಪ್ರತಿ ಲೀಟರ್ಗೆ ಇಳಿಕೆಯಾಗಿದೆ.

ಮುಂಬೈನಲ್ಲಿ ಎಷ್ಟು ಇಳಿಕೆ?
ವಾಣಿಜ್ಯ ನಗರಿ ಮುಂಬೈನಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀ. 79.65 ರೂ. ಇಳಿಕೆಯಾಗಿದೆ. ಶುಕ್ರವಾರದ ದರಕ್ಕೆ ಹೋಲಿಸಿದರೆ 28 ಪೈಸೆ ಕಡಿಮೆಯಾಗಿದೆ. ಹಾಗೆಯೇ ಡೀಸೆಲ್ ಬೆಲೆ 21 ಪೈಸೆ ಕಡಿಮೆಯಾಗಿದ್ದು, 70.39 ರೂ,ಗೆ ಮಾರಾಟವಾಗುತ್ತಿದೆ.

ಚೆನ್ನೈ ಮತ್ತು ಕೋಲ್ಕತಾ
ಚೆನ್ನೈನಲ್ಲಿ ಪೆಟ್ರೋಲ್ ದರ 31 ಪೈಸೆ ಕಡಿಮೆಯಾಗಿದೆ. ಲೀಟರ್ಗೆ 76.90 ರೂ. ಇದೆ. ಡೀಸೆಲ್ ಪ್ರತಿ ಲೀಟರ್ಗೆ 70.94 ರೂ.ಗೆ ತಲುಪಿದೆ. ಶುಕ್ರವಾರಕ್ಕೆ ಹೋಲಿಸಿದರೆ ಡೀಸೆಲ್ ದರ 21 ಪೈಸೆ ಇಳಿಕೆಯಾಗಿದೆ. ಕೋಲ್ಕತಾದಲ್ಲಿ ಪೆಟ್ರೋಲ್ 29 ಪೈಸೆ ಅಗ್ಗವಾಗಿದ್ದು, ಲೀಟರ್ಗೆ 76.67 ರೂ. ಇದೆ. ಡೀಸೆಲ್ ಬೆಲೆ 69.51ಕ್ಕೆ ಇಳಿದಿದೆ.

ಬೆಂಗಳೂರಿನಲ್ಲಿ ತೈಲ ಬೆಲೆ ಎಷ್ಟು?
ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಶನಿವಾರ 30 ಪೈಸೆಯಷ್ಟು ಕಡಿಮೆಯಾಗಿದೆ. ಶುಕ್ರವಾರ 76.87 ರೂ. ಇದ್ದ ಪೆಟ್ರೋಲ್ ಬೆಲೆ 76.57 ರೂ.ಗೆ ಇಳಿಕೆಯಾಗಿದೆ. ಶುಕ್ರವಾರ 69.65 ರೂ. ಇದ್ದ ಪ್ರತಿ ಲೀಟರ್ ಡೀಸೆಲ್ ದರದಲ್ಲಿ 21 ಪೈಸೆ ಇಳಿಕೆಯಾಗಿದ್ದು, ಶನಿವಾರ ಲೀ.ಗೆ 69.44 ರೂ.ಗೆ ಮಾರಾಟವಾಗುತ್ತಿದೆ.
-
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
ಮದ್ಯಪಾನದ ಅಭ್ಯಾಸವನ್ನು ನಿಯಂತ್ರಿಸಲು ಬಯಸುತ್ತೀರಾ? ತಜ್ಞರ ಸರಳ ಸಲಹೆಗಳು ಇಲ್ಲಿವೆ -
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ












Click it and Unblock the Notifications