ಹದಿನೈದು ದಿನಗಳ ನಂತರ ಮತ್ತೆ ತಗ್ಗಿದ ಪೆಟ್ರೋಲ್, ಡೀಸೆಲ್ ಬೆಲೆ
ನವದೆಹಲಿ, ಏಪ್ರಿಲ್ 15: ದೇಶಾದ್ಯಂತ ಕಳೆದ ಹದಿನೈದು ದಿನಗಳಿಂದಲೂ ಸ್ಥಿರವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆ ಗುರುವಾರ ಕೊಂಚ ತಗ್ಗಿದೆ. ಮಾರ್ಚ್ ತಿಂಗಳಿನಲ್ಲಿ ಕೊನೆಯದಾಗಿ ತೈಲ ಬೆಲೆಯನ್ನು ತಗ್ಗಿಸಿದ್ದು, ಇದೀಗ ಮತ್ತೆ ಬೆಲೆ ಕಡಿಮೆ ಮಾಡಲಾಗಿದೆ. ದೇಶದ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರಿಗೆ 16 ಪೈಸೆ ಇಳಿಕೆಯಾಗಿದ್ದು, ಡೀಸೆಲ್ ಬೆಲೆಯಲ್ಲಿ 14 ಪೈಸೆಯನ್ನು ತಗ್ಗಿಸಲಾಗಿದೆ.
ಈ ತಿಂಗಳಿನಲ್ಲಿ ಇದೇ ಮೊದಲ ಬಾರಿಗೆ ಪೆಟ್ರೋಲ್, ಡೀಸೆಲ್ ಬೆಲೆ ಪರಿಷ್ಕರಣೆಯಾಗಿರುವುದಾಗಿ ತಿಳಿದುಬಂದಿದೆ. ಮಾರ್ಚ್ 30ರಂದು ಕೊನೆಯ ಬಾರಿ ತೈಲ ಬೆಲೆಯನ್ನು ಪರಿಷ್ಕರಿಸಲಾಗಿತ್ತು. ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ? ಮುಂದೆ ಓದಿ...

ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟಿದೆ?
ನಗರ ಪೆಟ್ರೋಲ್ ಡೀಸೆಲ್
ದೆಹಲಿ: 90.40 ರೂ 80.73 ರೂ.
ಕೊಲ್ಕತ್ತಾ: 90.62 ರೂ 83.61 ರೂ.
ಮುಂಬೈ: 96.83 ರೂ 87.81 ರೂ.
ಬೆಂಗಳೂರು: 93.43 ರೂ 85.60 ರೂ.
ಹೈದರಾಬಾದ್: 93.99 ರೂ 88.05 ರೂ.
ಚೆನ್ನೈ: 92.43 ರೂ 85.75 ರೂ.

ಫೆಬ್ರವರಿಯಲ್ಲಿ ಶತಕ ಮುಟ್ಟಿದ್ದ ತೈಲ ಬೆಲೆ
ಫೆಬ್ರವರಿ ತಿಂಗಳಿನಲ್ಲಿ ಮೊದಲ ಬಾರಿ ಪೆಟ್ರೋಲ್ ಬೆಲೆ ದಾಖಲೆಯ ಮಟ್ಟ ತಲುಪಿತ್ತು. ರಾಜಸ್ಥಾನ ಹಾಗೂ ಮಧ್ಯಪ್ರದೇಶದಲ್ಲಿ ಲೀಟರಿಗೆ ನೂರು ರೂವರೆಗೂ ತಲುಪಿತ್ತು. ರಾಜಸ್ಥಾನದಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 100.89 ರೂ ಇದ್ದರೆ, ಡೀಸೆಲ್ಗೆ 92.99 ರೂ ಇತ್ತು. ಮಧ್ಯಪ್ರದೇಶದಲ್ಲಿ ಪೆಟ್ರೋಲಿಗೆ 100.79 ರೂ ಇದ್ದರೆ, ಡೀಸೆಲ್ ಬೆಲೆ 91.18 ರೂ ಇತ್ತು. ಇದೇ ಮೊದಲ ಬಾರಿ ದೇಶದಲ್ಲಿ ತೈಲ ಬೆಲೆ ದಾಖಲೆಯ ಮಟ್ಟ ತಲುಪಿತ್ತು.

ಫೆಬ್ರವರಿ ಕೊನೆಯಲ್ಲಿ ಬೆಲೆ ಇಳಿಕೆ
ಫೆಬ್ರವರಿ ತಿಂಗಳ ಕೊನೆಯಲ್ಲಿ ತೈಲ ಬೆಲೆಯಲ್ಲಿ ಕೊಂಚ ಇಳಿಕೆಯಾಯಿತು. ಫೆಬ್ರವರಿ 27ರಂದು ಬೆಲೆ ತಗ್ಗಿಸಿದ್ದು, ಆನಂತರ ಮಾರ್ಚ್ ತಿಂಗಳಿನಲ್ಲಿ ನಾಲ್ಕು ಬಾರಿ ಪೆಟ್ರೋಲ್, ಡೀಸೆಲ್ ಬೆಲೆಯನ್ನು ತಗ್ಗಿಸಲಾಯಿತು. ಪಂಚ ರಾಜ್ಯಗಳಲ್ಲಿ ಚುನಾವಣೆಗಳು ನಡೆಯುತ್ತಿದ್ದ ಕಾರಣ ತೈಲ ಬೆಲೆ ಇಳಿಕೆಯಾಗಿದೆ ಎನ್ನಲಾಗಿತ್ತು.

ಅಂತಾರಾಷ್ಟ್ರೀಯ ಮಾರುಕಟ್ಟೆ ಕಚ್ಚಾತೈಲ ಬೆಲೆ ಪರಿಣಾಮ
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 63.69 ಯುಎಸ್ ಡಾಲರ್( 1 USD=75.41ರು) ಪ್ರತಿ ಬ್ಯಾರೆಲ್ನಷ್ಟಿದೆ. ಒಪೆಕ್ ರಾಷ್ಟ್ರಗಳು ತೈಲ ಪೂರೈಕೆಯಲ್ಲಿ ವ್ಯತ್ಯಯ ಮಾಡಿರುವುದರಿಂದ ಭಾರತದಂಥ ಅತಿ ಹೆಚ್ಚು ಆಮದು ಮಾಡಿಕೊಳ್ಳುವ ರಾಷ್ಟ್ರಕ್ಕೆ ಭಾರಿ ಹೊಡೆತ ಬಿದ್ದಿದೆ. ಭಾರತ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ ಪೆಟ್ರೋಲ್ ಮೇಲೆ 32. 98ರು ಹಾಗೂ ಡೀಸೆಲ್ ಮೇಲೆ 31.80 ರು ನಷ್ಟಿದೆ.
-
ಬೆಂಗಳೂರಿನ ಬಂಕ್ಗಳ ಮುಂದೆ ಕಿಲೋಮೀಟರ್ಗಟ್ಟಲೆ ಕ್ಯೂ: ಗ್ಯಾಸ್ ಇಲ್ಲದೆ ಕಂಗಾಲಾದ ಆಟೋ ಚಾಲಕರು -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ












Click it and Unblock the Notifications