ಈ ವರ್ಷದಲ್ಲಿ ಪೆಟ್ರೋಲ್ 63 ಬಾರಿ, ಡೀಸೆಲ್ 61 ಬಾರಿ ಏರಿಕೆ!
ನವದೆಹಲಿ, ಜುಲೈ 20: ದೆಹಲಿಯಲ್ಲಿ ಈ ವರ್ಷದಲ್ಲಿ ಈ ಬಾರಿ 63 ಬಾರಿ, ಡೀಸೆಲ್ 61 ಬಾರಿ ಏರಿಕೆಯಾಗಿದೆ. ಅಡುಗೆ ಅನಿಲ ದರ 5 ಬಾರಿ ಹೆಚ್ಚಳವಾಗಿದೆ. ಪೆಟ್ರೋಲ್, ಡೀಸೆಲ್ ದರ 4 ಬಾರಿ ದೆಹಲಿಯಲ್ಲಿ ಈ ವರ್ಷ ಕಡಿಮೆಯಾಗಿದೆ.
2021-22 ಆರ್ಥಿಕ ವರ್ಷದಲ್ಲಿ ದೇಶದಲ್ಲಿ 39 ಬಾರಿ ಪೆಟ್ರೋಲ್ ಹಾಗೂ 36 ಡೀಸೆಲ್ ಏರಿಕೆಯಾಗಿದ್ದು, ಪೆಟ್ರೋಲ್ ಒಮ್ಮೆ ಹಾಗೂ ಡೀಸೆಲ್ ಎರಡು ಬಾರಿ ಇಳಿಕೆಯಾಗಿದೆ ಎಂದು ಪೆಟ್ರೋಲಿಯಂ ಹಾಗೂ ನೈಸರ್ಗಿಕ ಅನಿಲ ಖಾತೆ ಸಚಿವ ರಾಮೇಶ್ವರ್ ತೇಲಿ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ್ದಾರೆ.
2020-2021ರ ಆರ್ಥಿಕ ವರ್ಷದಲ್ಲಿ ದೇಶದಲ್ಲಿ 76 ಬಾರಿ ಪೆಟ್ರೋಲ್ ಹಾಗೂ 73 ಡೀಸೆಲ್ ಏರಿಕೆಯಾಗಿದ್ದು, ಪೆಟ್ರೋಲ್ 10 ಬಾರಿ ಹಾಗೂ ಡೀಸೆಲ್ 24 ಬಾರಿ ಇಳಿಕೆಯಾಗಿದೆ.

ಮಾರ್ಚ್ 31ರ ಅಂತ್ಯಕ್ಕೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಗಳಿಕೆ ಶೇ 88ರಷ್ಟು ಏರಿಕೆಯಾಗಿದೆ. ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 19.98% ಹಾಗು ಡೀಸೆಲ್ ಬೆಲೆ 15.83% ಏರಿಕೆಯಾಗಿದ್ದು, 3.35 ಲಕ್ಷ ಕೋಟಿ ರು 2020-21ರಲ್ಲಿ ಬಂದಿದೆ.
Recommended Video
ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಯಲ್ಲಿ ಏರಿಳಿತ ಮತ್ತು ಡಾಲರ್-ರುಪಾಯಿ ವಿನಿಮಯ ದರದ ಆಧಾರದ ಮೇಲೆ ಪೆಟ್ರೋಲ್-ಡೀಸೆಲ್ ಬೆಲೆಯು ಏರಿಳಿತ ಕಾಣುತ್ತದೆ. ಸರ್ಕಾರಿ ತೈಲ ಕಂಪನಿಗಳು ಬೆಲೆಗಳನ್ನು ಪರಿಶೀಲಿಸಿದ ನಂತರ, ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಪರಿಷ್ಕರಿಸುತ್ತವೆ ಮತ್ತು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಪೆಟ್ರೋಲ್ ದರ ಮತ್ತು ಡೀಸೆಲ್ ದರವನ್ನು ನೀಡುತ್ತವೆ. ಅಂತಾರಾಷ್ಟ್ರೀಯ ದರ, ವಿನಿಮಯ ದರ, ತೆರಿಗೆ ವಿಧಾನ ಎಲ್ಲವೂ ಗಣನೆಗೆ ಬರುತ್ತದೆ ಎಂದು ವಿವರಿಸಿದರು.
-
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
ಎಲ್ಪಿಜಿ ಸಿಲಿಂಡರ್ ದರ 60 ರೂ ಏರಿಕೆ: ಮೋದಿ ಸರ್ಕಾರದ ವಿರುದ್ಧ ತೀವ್ರ ಟೀಕೆ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್












Click it and Unblock the Notifications