ಭಾರತದ ಯಾವ ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ದರ ಕಡಿಮೆ ಇದೆ?
ಶ್ರೀಗಂಗಾ ನಗರ್, ಏಪ್ರಿಲ್ 18: ಭಾರತದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಸಾಮಾನ್ಯರ ಕೈಗೆ ಸಿಗದಂತೆ ಓಡುತ್ತಿದೆ. ಪ್ರತಿನಿತ್ಯ ಏರಿಕೆ ಆಗುತ್ತಿರುವ ಇಂಧನ ದರವು ಕಳೆದ ಕೆಲವು ದಿನಗಳಿಂದ ಸ್ಥಿರವಾಗಿದೆ. ಇದರ ನಡುವೆಯೇ ದೇಶದ ಅದೊಂದು ನಗರಗಲ್ಲಿ ಪೆಟ್ರೋಲ್ ದರ 123 ರೂಪಾಯಿ ಗಡಿ ದಾಟಿದೆ.
ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ವೇಳೆಗೆ ಪೆಟ್ರೋಲ್ ಬೆಲೆ ಲೀಟರ್ಗೆ 123 ರೂ.ಗೆ ಏರಿಕೆಯಾಗಿದೆ. ಇದು ದೇಶದಲ್ಲೇ ಅತ್ಯಧಿಕ ಬೆಲೆಯಾಗಿದೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ. ಪೆಟ್ರೋಲ್ ಬೆಲೆಯಲ್ಲಿನ ಈ ಹೆಚ್ಚಳದಿಂದ ಶೇಕಡಾ 80ರಷ್ಟು ಪೆಟ್ರೋಲ್ ಪಂಪ್ಗಳನ್ನು ಮುಚ್ಚುವ ಪರಿಸ್ಥಿತಿ ಬಂದಿದೆ ಎಂದು ಪೆಟ್ರೋಲ್ ಪಂಪ್ ಮಾಲೀಕರು ಹೇಳುತ್ತಿದ್ದಾರೆ.
ದೇಶದಲ್ಲಿ ಡೀಸೆಲ್ ದರದಲ್ಲೂ ಸಹ ಭಾರಿ ಏರಿಕೆ ಕಂಡು ಬಂದಿದೆ. ಡೀಸೆಲ್ ಒಂದು ಲೀಟರ್ಗೆ 105.31 ರೂಪಾಯಿ ಆಗಿರುವುದೇ ಅತ್ಯಧಿಕ ದರ ಎನಿಸಿದೆ. ರಾಜಸ್ಥಾನದ ಶ್ರೀ ಗಂಗಾನಗರ ಜಿಲ್ಲೆಯಲ್ಲಿ ಪೆಟ್ರೋಲ್ ದರ 123 ರೂಪಾಯಿ ಗಡಿ ದಾಟುವುದಕ್ಕೆ ಕಾರಣವೇನು?, ಅತಿ ಅಗ್ಗದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಯಾವ ರಾಜ್ಯದಲ್ಲಿದೆ. ಕರ್ನಾಟಕದ ಬೆಂಗಳೂರಿನಲ್ಲಿ ಪೆಟ್ರೋಲ್-ಡೀಸೆಲ್ ದರ ಎಷ್ಟಿದೆ ಎಂಬುದರ ಕುರಿತು ಒಂದು ವಿವರಣಾತ್ಮಕ ವರದಿ ಇಲ್ಲಿದೆ ನೋಡಿ.

ಪಂಜಾಬ್ನಲ್ಲಿ ಅಗ್ಗದ ದರದಲ್ಲಿ ಪೆಟ್ರೋಲ್-ಡೀಸೆಲ್
ನೆರೆರಾಜ್ಯ ಪಂಜಾಬ್ನಲ್ಲಿ ಪೆಟ್ರೋಲ್ ದರ 17 ರಪಾಯಿ ಮತ್ತು ಡೀಸೆಲ್ ಪ್ರತಿ ಲೀಟರ್ಗೆ 11 ರೂಪಯಿಯಷ್ಟು ಅಗ್ಗವಾಗಿದೆ. ರಾಜಸ್ಥಾನದ ಪೆಟ್ರೋಲ್ ಗ್ರಾಹಕರು ಪಂಜಾಬ್ನ ಫಿಲ್ಲಿಂಗ್ ಸ್ಟೇಷನ್ಗಳಲ್ಲಿ ಸಾಲುಗಟ್ಟಿ ನಿಂತಿರುವ ದೃಶ್ಯಗಳು ಸರ್ವೇ ಸಾಮಾನ್ಯ ಎನ್ನುವಂತಾಗಿದೆ. ಇನ್ನೊಂದು ದಿಕ್ಕಿನಲ್ಲಿ ಅತಿಹೆಚ್ಚು ಏರಿಕೆ ಕಂಡಿರುವ ಶ್ರೀ ಗಂಗಾನಗರದಲ್ಲಿ ಇಂಧನ ಹಾಕಿಸಿಕೊಳ್ಳುವ ಗ್ರಾಹಕರ ಸಂಖ್ಯೆ ತೀರಾ ವಿರಳವಾಗಿ ಬಿಟ್ಟಿದೆ.

ಶ್ರೀ ಗಂಗಾನಗರದಲ್ಲಿ ಪೆಟ್ರೋಲ್-ಡೀಸೆಲ್ ಏಕೆ ದುಬಾರಿ?
ಇಂಧನ ವೆಚ್ಚದಲ್ಲಿನ ಭಾರಿ ವ್ಯತ್ಯಾಸದ ಪರಿಣಾಮದಿಂದ ಶೇಕಡಾ 80ರಷ್ಟು ಪೆಟ್ರೋಲ್ ಪಂಪ್ಗಳು ಮುಚ್ಚುವ ಹಂತದಲ್ಲಿವೆ ಎಂದು ಶ್ರೀ ಗಂಗಾನಗರ ಜಿಲ್ಲಾ ಪೆಟ್ರೋಲ್ ಪಂಪ್ ಡೀಲರ್ಸ್ ಅಸೋಸಿಯೇಶನ್ ಜಿಲ್ಲಾ ಅಧ್ಯಕ್ಷ ಅಶುತೋಷ್ ಗುಪ್ತಾ ಹೇಳಿದ್ದಾರೆ. "ದೇಶದಲ್ಲೇ ಅತ್ಯಂತ ದುಬಾರಿ ಬೆಲೆಗೆ ನಮ್ಮ ಜಿಲ್ಲೆಯಲ್ಲಿ ಪೆಟ್ರೋಲ್ ಮಾರಾಟ ಮಾಡಲಾಗುತ್ತಿದೆ. ಈ ಜಿಲ್ಲೆಯಿಂದ ಡಿಪೋ 500 ಕಿಮೀ ದೂರದಲ್ಲಿದೆ. ಆದ್ದರಿಂದ ಒಬ್ಬರು ಸುಮಾರು 1,100 ಕಿಮೀ ಪ್ರಯಾಣಿಸಬೇಕಾಗುತ್ತದೆ. ಇದರಿಂದಾಗಿ ಹೆಚ್ಚುವರಿ ವೆಚ್ಚವನ್ನು ಸೇರಿಸಲಾಗುತ್ತಿದ್ದು, ಈ ಹೆಚ್ಚಿನ ಬೆಲೆಗೆ ಪ್ರಮುಖ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ.

ರಾಜಸ್ಥಾನದಲ್ಲಿ ಪಂಜಾಬ್ ಮಾದರಿ ಅಳವಡಿಕೆಗೆ ಮನವಿ
"ನಾನು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರನ್ನು ಈ ನಿಟ್ಟಿನಲ್ಲಿ ಭೇಟಿ ಮಾಡಿದ್ದು, ರಾಜ್ಯ ಸರ್ಕಾರವು ಮೂರು ತಿಂಗಳ ಕಾಲ ಪಂಜಾಬ್ಗೆ ಸಮಾನವಾದ ಮಾದರಿ ಅಳವಡಿಸಿಕೊಳ್ಳಬೇಕು. ಪೆಟ್ರೋಲ್, ಡೀಸೆಲ್ ಬೆಲೆಗಳನ್ನು ಇಳಿಸಿ ಪರಿಣಾಮವನ್ನು ಪರಿಶೀಲಿಸಬೇಕು. ಅದು ಸಕಾರಾತ್ಮಕವಾಗಿದ್ದರೆ ನಾವು ಮಾದರಿಯೊಂದಿಗೆ ಮುಂದುವರಿಯಬಹುದು. ಇಲ್ಲದಿದ್ದರೆ, ಅದನ್ನು ಕೈಬಿಡಲಾಗುವುದು, "ಎಂದು ಗುಪ್ತಾ ಹೇಳಿದ್ದಾರೆ. ರಾಜ್ಯದ ಮುಖ್ಯಮಂತ್ರಿಯು ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ತಕ್ಕ ಪರಿಹಾರವನ್ನು ನೀಡಬೇಕು. ಆದರೆ ಈ ವಿಷಯದಲ್ಲಿ ಅದ್ಯಾವುದೂ ಆಗುತ್ತಿಲ್ಲ ಎಂದು ಅವರು ದೂಷಿಸಿದ್ದಾರೆ.

ದೆಹಲಿಯಲ್ಲಿ ಇಂಧನ ದರ ಇಳಿಸುವಂತೆ ಆಗ್ರಹಿಸಿ ಪ್ರತಿಭಟನೆ
ರಾಷ್ಟ್ರ ರಾಜಧಾನಿಯಲ್ಲಿ ಆಟೋರಿಕ್ಷಾ, ಟ್ಯಾಕ್ಸಿ ಮತ್ತು ಕ್ಯಾಬ್ ಚಾಲಕರ ಒಕ್ಕೂಟ ಸೋಮವಾರ ಪ್ರತಿಭಟನೆ ನಡೆಸುತ್ತಿದೆ. ದೆಹಲಿ ಮತ್ತು ಎನ್ ಸಿ ಆರ್ ಪ್ರದೇಶಗಳಲ್ಲಿ ಸಿಎನ್ ಜಿ ದರ ಪರಿಷ್ಕರಣೆ ಮಾಡುವುದು, ಟ್ಯಾಕ್ಸಿ, ಆಟೋಗಳ ಮೀಟರ್ ದರ ಹೆಚ್ಚಳ ಮಾಡುವಂತೆ ಆಗ್ರಹಿಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭಾರತದ ಪ್ರಮುಖ ನಗರ ಪೆಟ್ರೋಲ್-ಡೀಸೆಲ್ ದರ?
ದೆಹಲಿ
ಪೆಟ್ರೋಲ್ ದರ: 105.41
ಡೀಸೆಲ್ ದರ: 96.67
ಮುಂಬೈ
ಪೆಟ್ರೋಲ್ ದರ: 120.51
ಡೀಸೆಲ್ ದರ: 104.77
ಬೆಂಗಳೂರು
ಪೆಟ್ರೋಲ್ ದರ: 111.09
ಡೀಸೆಲ್ ದರ: 94.79
ಚೆನ್ನೈ
ಪೆಟ್ರೋಲ್ ದರ: 110.85
ಡೀಸೆಲ್ ದರ: 100.94
-
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ











Click it and Unblock the Notifications