ಪೆಟ್ರೋಲ್ ದರ ತುಸು ಏರಿಕೆ, ಎಲ್ಲೆಲ್ಲಿ ಎಷ್ಟಿದೆ ಬೆಲೆ?
ಬೆಂಗಳೂರು, ಸೆ.1: ಸೋಮವಾರಂದು ಯಾವುದೇ ಬದಲಾವಣೆ ಕಾಣದಿದ್ದ ಪೆಟ್ರೋಲ್ ದರದಲ್ಲಿ ಮಂಗಳವಾರದಂದು ತುಸು ಏರಿಕೆ ಕಂಡಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 82.03 ರು ನಿಂದ 82.08ರುಗೇರಿದೆ. ಡೀಸೆಲ್ ದರ ಬಹುದಿನಗಳಿಂದ 73.56ರು ನಂತೆ ಮುಂದುವರೆದಿದೆ ಎಂದು ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ತಿಳಿಸಿದೆ.
Recommended Video
ದೆಹಲಿಯಲ್ಲಿ ಒಟ್ಟಾರೆ ಕಳೆದ 18 ದಿನಗಳಲ್ಲಿ 15 ದಿನಗಳ ಕಾಲ ಪೆಟ್ರೋಲ್ ಏರಿಕೆ ಕಂಡು ಸುಮಾರು 1.64 ರು ಏರಿಕೆಯಾಗಿತ್ತು. ಒಟ್ಟಾರೆ, ಸೆಪ್ಟೆಂಬರ್ 01ರಂದು ಪ್ರಮುಖ ನಗರಗಳಲ್ಲಿ 4 ರಿಂದ 5 ಪೈಸೆ ಏರಿಕೆಯಾಗಿದೆ.
ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಏರಿಕೆ ಕಾಣುತ್ತಿದ್ದು, ಬ್ರೆಂಟ್ ಕಚ್ಚಾತೈಲ ಬೆಲೆ ಪ್ರತಿ ಬ್ಯಾರೆಲ್ ಬೆಲೆ 44. 87 ಯುಎಸ್ ಡಾಲರ್ ನಷ್ಟಿದೆ.

ಸೆಪ್ಟೆಂಬರ್ 01ರ ದರ ಪಟ್ಟಿ ಪೆಟ್ರೋಲ್ ಹಾಗೂ ಡೀಸೆಲ್ (ಪ್ರತಿ ಲೀಟರ್, ಬೆಲೆ ರು ಗಳಲ್ಲಿ)
ನಗರ-ಪೆಟ್ರೋಲ್-ಡೀಸೆಲ್
ದೆಹಲಿ-82.08-73.56
ಕೋಲ್ಕತಾ-83.57-77.06
ಮುಂಬೈ-88.73-80.11
ಚೆನ್ನೈ-85.04-78.86
ಬೆಂಗಳೂರು-84.75-77.88
ಡೀಸೆಲ್ ಬೆಲೆ ಬದಲಾಗಿಲ್ಲ:
ಕಳೆದ 20 ದಿನಗಳಿಂದ ದೆಹಲಿಯಲ್ಲಿ ಡೀಸೆಲ್ ಬೆಲೆ ಬದಲಾಗಿಲ್ಲ. ಪ್ರತಿ ಲೀಟರ್ ಗೆ 73.56 ರು ನಷ್ಟೇ ಇದೆ. ಜುಲೈ 31ರಂದು 8 ರು ಕುಸಿತ ಕಂಡಿತ್ತು. ಕೇಜ್ರಿವಾಲ್ ಸರ್ಕಾರ ವ್ಯಾಟ್ ಇಳಿಸಿದ್ದರ ಪರಿಣಾಮವಿದು. ಮಿಕ್ಕಂತೆ ಮುಂಬೈನಲ್ಲಿ ಪ್ರತಿ ಲೀಟರ್ ಬೆಲೆ 80.11 ರು , ಚೆನ್ನೈನಲ್ಲಿ 78.86ರು, ಕೋಲ್ಕತಾದಲ್ಲಿ 77.06 ರು ನಷ್ಟಿದೆ. ಬೆಂಗಳೂರಲ್ಲಿ ಸೋಮವಾರದಂದು 28 ಪೈಸೆ ಇಳಿಕೆಯಾಗಿ 77.88 ರು ಆಗಿತ್ತು. ಮಂಗಳವಾರ ಯಾವುದೇ ಬದಲಾವಣೆಯಾಗಿಲ್ಲ.
ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ನಗರಗಳಲ್ಲಿನ ಇಂಧನ ದರ ಎಷ್ಟಿದೆ ತಿಳಿದುಕೊಳ್ಳಲು ಕ್ಲಿಕ್ ಮಾಡಿ
-
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್












Click it and Unblock the Notifications