Alert: ಅಂಚೆ ಕಚೇರಿ ಉಳಿತಾಯ ಖಾತೆಯಲ್ಲಿ 500 ರೂ. ಬ್ಯಾಲೆನ್ಸ್ ಕಡ್ಡಾಯ
ನವದೆಹಲಿ, ಡಿಸೆಂಬರ್ 11: ಅಂಚೆ ಕಚೇರಿಯಲ್ಲಿ ಉಳಿತಾಯ ಖಾತೆ ಹೊಂದಿರುವವರು ಕನಿಷ್ಠ 500 ರೂಪಾಯಿ ಬ್ಯಾಲೆನ್ಸ್ ಹೊಂದಿರುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ 100 ರೂ. ದಂಡ ಮತ್ತು ಜಿಎಸ್ಟಿ ವಿಧಿಸಲಾಗುವುದು ಎಂದು ಇಂಡಿಯಾ ಪೋಸ್ಟ್ ತಿಳಿಸಿದೆ.
ಈ ಹೊಸ ನಿಯಮಗಳು ಡಿಸೆಂಬರ್ 11ರಿಂದ ಜಾರಿಗೆ ಬರಲಿದ್ದು, ಉಳಿತಾಯ ಖಾತೆ ಹೊಂದಿರುವವರು ಡಿಸೆಂಬರ್ ಕೊನೆಯ ಹೊತ್ತಿಗೆ ಖಾತೆಯಲ್ಲಿ 500 ರೂಪಾಯಿ ಹೊಂದಿರಬೇಕಾಗುತ್ತದೆ. ಉಳಿತಾಯ ಖಾತೆಗೆ ಪ್ರಸ್ತುತ ವಾರ್ಷಿಕ ಶೇಕಡಾ 4ರ ಬಡ್ಡಿಯನ್ನು ನೀಡುತ್ತದೆ.
"ಹಣಕಾಸಿನ ವರ್ಷದ ಕೊನೆಯಲ್ಲಿ ಖಾತೆ ಬಾಕಿ 500 ರೂ. ಇರಿಸದಿದ್ದಲ್ಲಿ 100 ರೂ.ಗಳನ್ನು ಖಾತೆ ನಿರ್ವಹಣಾ ಶುಲ್ಕವಾಗಿ ಕಡಿತಗೊಳಿಸಲಾಗುತ್ತದೆ ಮತ್ತು ಖಾತೆಯಲ್ಲಿ ಹಣ ಬಾಕಿ ಇಲ್ಲದಿದ್ದರೆ ಸ್ವಯಂಚಾಲಿತವಾಗಿ ಅಕೌಂಟ್ ಮುಚ್ಚಲ್ಪಡುತ್ತದೆ" ಎಂದು ಹೊಸ ನಿಯಮ ಹೇಳುತ್ತದೆ.

ಅಂಚೆ ಕಚೇರಿ ಉಳಿತಾಯ ಖಾತೆ ತೆರೆಯಲು 500 ರೂ. ಠೇವಣಿಯಾಗಿದ್ದರೆ, ನಂತರದ ಕನಿಷ್ಠ ಠೇವಣಿ 10 ರೂ. ಹಾಗೂ ಕನಿಷ್ಠ ವಾಪಸಾತಿ ಮೊತ್ತ 50 ರೂ. ಆಗಿದ್ದು, ಠೇವಣಿಗೆ ಗರಿಷ್ಠ ಮಿತಿಯಿಲ್ಲ. ಖಾತೆಯಲ್ಲಿ 500 ರೂ.ಗಿಂತ ಕಡಿಮೆ ಹಣವಿದ್ದರೆ ವಿತ್ಡ್ರಾ ಮಾಡಲು ಸಾಧ್ಯವಾಗುವುದಿಲ್ಲ.
ಸತತ ಮೂರು ಹಣಕಾಸು ವರ್ಷಗಳವರೆಗೆ ಖಾತೆಯಲ್ಲಿ ಯಾವುದೇ ವಹಿವಾಟು ಇಲ್ಲದಿದ್ದರೆ, ಖಾತೆಯು ಮುಚ್ಚಲ್ಪಡುತ್ತವೆ. ಅಂತಹ ಖಾತೆಗಳನ್ನು ಮತ್ತೆ ಪ್ರಾರಂಭಿಸಲು ಗ್ರಾಹಕರು ಅರ್ಜಿಯೊಂದಿಗೆ ಹೊಸ ಕೆವೈಸಿ ದಾಖಲೆಗಳು, ಪಾಸ್ಬುಕ್ ಅನ್ನು ಸಲ್ಲಿಸಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications