ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತ ಆದೇಶವನ್ನು ಹಿಂಪಡೆದ ಸರ್ಕಾರ
ನವದೆಹಲಿ, ಏಪ್ರಿಲ್ 1: ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಕಡಿತದ ಆದೇಶವನ್ನು ಸರ್ಕಾರ ಹಿಂಪಡೆದಿರುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
ಸುಕನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪತ್ರ, ಪಿಪಿಎಫ್, ನಿಗದಿತ ಠೇವಣಿ, ಉಳಿತಾಯ ಖಾತೆ ಸೇರಿದಂತೆ ಬಹುತೇಕ ಎಲ್ಲಾ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರ ಇಳಿಕೆ ಮಾಡಲಾಗಿತ್ತು.
ಪರಿಷ್ಕೃತ ಬಡ್ಡಿ ದರಗಳು ಏಪ್ರಿಲ್ 1 ರಿಂದ ಅನ್ವಯ ಆಗಲಿದ್ದು, ಏಪ್ರಿಲ್- ಜೂನ್ ತ್ರೈಮಾಸಿಕದಲ್ಲಿ ಜಾರಿಯಲ್ಲಿ ಇರಲಿದೆ ಎಂದು ಹೇಳಲಾಗಿತ್ತು.

ಬಡ್ಡಿದರ ಪರಿಷ್ಕೃತಗೊಳಿಸಿ ಆದೇಶ ಹಿಂದಕ್ಕೆ
ಸಣ್ಣ ಉಳಿತಾಯ ಯೋಜನೆಗಳ ಮೇಲೆ ಗರಿಷ್ಠ ಶೇ.1.1ರವರೆಗೆ ಬಡ್ಡಿ ಇಳಿಕೆ ಮಾಲಡಾಗಿತ್ತು. ಗುರುವಾರ ಬೆಳಗ್ಗೆ ಟ್ವೀಟ್ ಮಾಡಿರುವ ನಿರ್ಮಲಾ ಸೀತಾರಾಮನ್ ಭಾರತ ಸರ್ಕಾರದ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರಗಳು 2021-21 ನಾಲ್ಕನೇ ತ್ರೈಮಾಸಿಕದಲ್ಲಿ ಅಂದರೆ 2021ರ ಮಾರ್ಚ್ವರೆಗೆ ಇದ್ದ ದರಗಳು ಮುಂದುವರೆಯಲಿವೆ ಎಂದು ಹೇಳಿದ್ದಾರೆ.

ಪ್ರಮುಖ ಬದಲಾವಣೆಗಳು ಏನಾಗಿತ್ತು?
ಸಾರ್ವಜನಿಕ ಭವಿಷ್ಯ ನಿಧಿ(ಪಿಪಿಎಫ್) ದರ ಶೇ 7.1ರಿಂದ ಶೇ 6.4ಕ್ಕಿಳಿದಿದೆ. ರಾಷ್ಟ್ರೀಯ ಉಳಿತಾಯ ಪ್ರಮಾಣ ಪತ್ರ(ಎನ್ಎಸ್ಸಿ) ಶೇ 6.8ರಿಂದ ಶೇ 5.9ಕ್ಕಿಳಿಸಲಾಗಿದೆ. ಸುಕನ್ಯಾ ಸಮೃದ್ಧಿ ಯೋಜನಾ (ಎಸ್ಎಸ್ವೈ) ಶೇ 7.6 ರಿಂದ ಶೇ 6.9ಕ್ಕಿಳಿಸಲಾಗಿದೆ. ಅಂಚೆ ಕಚೇರಿ ಹೂಡಿಕೆ ವಿವಿಧ ಅವಧಿಗೆ ಶೇ 1.1%ರಿಂದ0.40 ಕ್ಕೆ ಇಳಿಸಲಾಗಿದ್ದು, ಶೇ 4.4-5.3% ಬಡ್ಡಿ ನಿರೀಕ್ಷಿಸಬಹುದು ಎಂದು ಹೇಳಲಾಗಿತ್ತು.

ಬಡ್ಡಿಯನ್ನು 3 ತಿಂಗಳಿಗೊಮ್ಮೆ ಪರಿಷ್ಕರಣೆ
ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿಯನ್ನು ಪ್ರತಿ ಮೂರು ತಿಂಗಳಿಗೆ ಒಮ್ಮೆ ಪರಿಷ್ಕರಣೆ ಮಾಡಲಾಗುತ್ತದೆ.

ಕಿಸಾನ್ ವಿಕಾಸ್ ಪತ್ರ ಹೂಡಿಕೆ ಅವಧಿ
124 ತಿಂಗಳು ಇದ್ದ ಕಿಸಾನ್ ವಿಕಾಸ ಪತ್ರ ಹೂಡಿಕೆ ಅವಧಿಯನ್ನು 138 ತಿಂಗಳ ಅವಧಿಗೆ ಹೆಚ್ಚಿಸಲಾಗಿತ್ತು. ಹಿರಿಯ ನಾಗರಿಕರ 5 ವರ್ಷಗಳ ಉಳಿತಾಯ ಯೋಜನೆಯ ಮೇಲಿನ ಬಡ್ಡಿ ಶೇ.0.9ರಷ್ಟು ಇಳಿಕೆ ಮಾಡಲಾಗಿತ್ತು. ಹಾಗೂ ಪಿಪಿಎಫ್ ಬಡ್ಡಿ ದರ ಶೇ.6.4ರಷ್ಟು ನಿಗದಿ ಮಾಡಲಾಗಿತ್ತು.
ಕ್ಷಣ ಕ್ಷಣದ ಸುದ್ದಿಗಳಿಗಾಗಿ ಒನ್ ಇಂಡಿಯಾ ಕನ್ನಡ ಟೆಲಿಗ್ರಾಂ ಚಾನಲ್ ಸೇರಿ
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications