ಕಾರ್ಪೋರೇಟ್ NBFCಗಳನ್ನು ಬ್ಯಾಂಕ್ ಆಗಿ ಪರಿವರ್ತಿಸುವ ಯೋಜನೆಗೆ ರಘುರಾಮ್ ರಾಜನ್ ವಿರೋಧ
ನವದೆಹಲಿ, ನವೆಂಬರ್ 23: ಬ್ಯಾಂಕೇತರ ಹಣಕಾಸು ಸಂಸ್ಥೆಗಳನ್ನು, ಕಾರ್ಪೋರೇಟ್ ಕಂಪನಿಗಳು ನಡೆಸುತ್ತಿರುವ ಎನ್ಬಿಎಫ್ಸಿಗಳನ್ನು ಬ್ಯಾಂಕ್ ಆಗಿ ಪರಿವರ್ತಿಸಲು, ಆರ್ಬಿಐ ಆಂತರಿಕ ಕಾರ್ಯಕಾರಿ ಸಮಿತಿ ನೀಡಿರುವ ಸಲಹೆಯನ್ನು ಆರ್ಬಿಐ ಮಾಜಿ ಗವರ್ನರ್ ರಘುರಾಮ್ ರಾಜನ್ ಸೋಮವಾರ ವಿರೋಧಿಸಿದ್ದಾರೆ.
ಆರ್ಬಿಐನ ಈ ಯೋಜನೆಯನ್ನು ಕಾರ್ಯ ರೂಪಕ್ಕೆ ತಂದರೆ ವಿನಾಶಕಾರಿ ಎಂದು ರಾಜನ್ ಭಾವಿಸಿದ್ದಾರೆ. ಬ್ಯಾಂಕೇತರ ಹಣಕಾಸು ಸಂಸ್ಥೆಗಳ ಆಸ್ತಿಯ ಒಟ್ಟು ಮೊತ್ತವು 50 ಸಾವಿರ ಕೋಟಿಗಿಂತ ಹೆಚ್ಚಿದ್ದರೆ, ಅವುಗಳನ್ನು ಬ್ಯಾಂಕ್ ಆಗಿ ಪರಿವರ್ತಿಸಬಹುದು ಎಂದು ಆರ್ಬಿನ ಆಂತರಿಕ ಸಮಿತಿ ಸಲಹೆಯನ್ನು ಕೊಟ್ಟಿದೆ. ಕಾರ್ಪೋರೇಟ್ ಕಂಪನಿಗಳು ನಡೆಸುತ್ತಿರುವ ಎನ್ಬಿಎಫ್ಸಿಗಳನ್ನು ಬ್ಯಾಂಕ್ ಆಗಿ ಪರಿವರ್ತಿಸಲು ಪರಿಗಣಿಸಬಹುದು. ಆದರೆ ಅವು ಕನಿಷ್ಠ 10 ವರ್ಷಗಳಿಂದ ವಹಿವಾಟು ನಡೆಸುತ್ತಿರಬೇಕು ಎಂದಿದೆ.
ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಗೆ ತಿದ್ದುಪಡಿ ಮಾಡಿದ ನಂತರ ದೊಡ್ಡ ಕಾರ್ಪೊರೇಟ್ ಮತ್ತು ಕೈಗಾರಿಕಾ ಸಂಸ್ಥೆಗಳಿಗೆ ಬ್ಯಾಂಕಿಂಗ್ ಪರವಾನಗಿ ನೀಡಬೇಕೆಂದು ಸಮಿತಿ ಶಿಫಾರಸು ಮಾಡಿದೆ. ಭಾರತೀಯ ಖಾಸಗಿ ಬ್ಯಾಂಕುಗಳಲ್ಲಿನ ಮಾಲೀಕತ್ವದ ಕಾರ್ಪೊರೇಟ್ ರಚನೆ ಮಾರ್ಗಸೂಚಿಗಳನ್ನು ಪರಿಶೀಲಿಸಲು ಆರ್ಬಿಐ ಕಾರ್ಯನಿರ್ವಾಹಕ ನಿರ್ದೇಶಕ ಪಿ.ಕೆ.ಮಹಂತಿ ನೇತೃತ್ವದ ಸಮಿತಿಯನ್ನು ಜೂನ್ನಲ್ಲಿ ರಚಿಸಲಾಯಿತು.

ಈ ಸಮಿತಿಯು ಈಗಿರುವ ದೇಶದ ಖಾಸಗಿ ಬ್ಯಾಂಕ್ಗಳಲ್ಲಿ ಪ್ರವರ್ತಕರು(Promoters) ಗರಿಷ್ಠ ಶೇಕಡಾ 26ರವರೆಗೆ ಷೇರುಗಳನ್ನು ಹೊಂದಲು ಅವಕಾಶ ಕೊಡಬಹುದು ಎಂದು ಆರ್ಬಿಐಗೆ ಪ್ರಸ್ತಾವ ಸಲ್ಲಿಸಿದೆ.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications