ದೇಶಕ್ಕೆ ರಘುರಾಂ ರಾಜನ್ ನೀಡಿದ ಎಚ್ಚರಿಕೆ ಏನು?
ಮುಂಬೈ, ಆಗಸ್ಟ್, 09: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ರಘುರಾಂ ರಾಜನ್ ತಮ್ಮ ಅವಧಿಯ ಕೊನೆಯ ಹಣಕಾಸಿನ ನೀತಿ ಘೋಷಣೆಯಲ್ಲಿ ಯಥಾ ಸ್ಥಿತಿ ಕಾಯ್ದುಕೊಂಡಿದ್ದಾರೆ. ಜತೆಗೆ ಹಣದುಬ್ಬರ ಏರಿಕೆ ಎಚ್ಚರಿಕೆಯನ್ನು ನೀಡಿದ್ದಾರೆ.
ರೆಪೊ ದರವನ್ನು ಬದಲಾಯಿಸಲು ರಾಜನ್ ಮುಂದಾಗಿಲ್ಲ. ಸದ್ಯ ಇರುವ ಶೇ. 6.5ರಷ್ಟು ರೆಪೊ ದರ ಹಾಗೇ ಮುಂದುವರಿಯಲಿದೆ. ಬ್ಯಾಂಕ್ ಗಳಿಗೆ ಪಾವತಿಸುವ ಹಣ ರಿವರ್ಸ್ ರೆಪೊ ದರವನ್ನು ಶೇಕಡಾ 6ರಷ್ಟು ಮತ್ತು ಕ್ಯಾಶ್ ರಿಸರ್ವ್ ದರವನ್ನು ಶೇಕಡಾ 4ರಷ್ಟು ಕಾಯ್ದುಕೊಳ್ಳಲಾಗಿದೆ.[ರಿಸರ್ವ್ ಬ್ಯಾಂಕಿಗೆ ನೂತನ ಗವರ್ನರ್: ರೇಸ್ ನಲ್ಲಿರುವ 6 ಪ್ರಮುಖರು]
ಬೆಲೆ ಏರಿಕೆ ಮತ್ತು 7ನೇ ವೇತನ ಆಯೋಗದಲ್ಲಿ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳದಿಂದಾಗಿ ಮುಂದಿನ ವರ್ಷ ಮಾರ್ಚ್ 2017ರಲ್ಲಿ ಹಣದುಬ್ಬರ ಶೇಕಡಾ 5ಕ್ಕಿಂತ ಹೆಚ್ಚಾಗುವ ಸಾಧ್ಯತೆಯಿದೆ ಎಂದು ರಘುರಾಂ ರಾಜನ್ ಎಚ್ಚರಿಕೆ ನೀಡಿದ್ದಾರೆ. ರಘುರಾಂ ರಾಜನ್ ಅವರ ಅವಧಿ ಸೆಪ್ಟೆಂಬರ್ 4ಕ್ಕೆ ಕೊನೆಗೊಳ್ಳಲಿದೆ. [ಆರ್ ಬಿಐ ಬಡ್ಡಿ ದರ ಯಥಾಸ್ಥಿತಿ: ಸಾರ್ವಜನಿಕ ಹೂಡಿಕೆಗೆ ಉತ್ತೇಜನ]

ರಾಜನ್ ಹೇಳಿದ ಹಣಕಾಸು ಲೆಕ್ಕ
ರೆಪೊ ದರದಲ್ಲಿ ಯಾವ ಬದಲಾವಣೆ ಇಲ್ಲ(ಶೇ. 6.5.) ಸಾಲದ ಬಡ್ಡಿ ದರದಲ್ಲಿ(ಶೇ. 4 ) ಯಾವ ಬದಲಾವಣೆ ಇಲ್ಲ.

2017ರ ಮಾರ್ಚ್
ಕೇಂದ್ರ ಸರ್ಕಾರ 7ನೇ ವೇತನ ಆಯೋಗದ ಶಿಫಾರಸುಗಳಿಗೆ ಸಮ್ಮತಿ ನೀಡಿದೆ. ಕೇಂದ್ರ ಸರ್ಕಾರ ತನ್ನ ನೌಕರರಿಗೆ ಶೇ. 23.55 ರಷ್ಟು ವೇತನ ಹಾಗೂ ಭತ್ಯೆ ಹೆಚ್ಚಳ ನೀಡಿದೆ. ಇದರ ಪರಿಣಾಮವನ್ನು ಮುಂದೆ ಎದುರಿಸಬೇಕಾಗುತ್ತದೆ ಎಂದು ರಾಜನ್ ಹೇಳಿದ್ದಾರೆ.

ರಾಜನ್ ಮುಂದಿನ ನಡೆ ಏನು?
ಆರ್ ಬಿಐ ಗವರ್ನರ್ ಸ್ಥಾನದಿಂದ ನಿವೃತ್ತರಾಧ ಬಳಿಕ ರಾಜನ್ ಅಮೆರಿಕದ ಅಕಾಡಮಿಯಾ ಸಂಸ್ಥೆಗೆ ತೆರಳಿ ಸಂಶೋಧನೆ ಮುಂದುವರಿಸಲಿದ್ದಾರೆ.

ರೆಪೊ ದರ ಎಂದರೇನು?
ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರವೇ ರೆಪೊ ದರ. ಸಿಆರ್ ಆರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications