ಪೆಟ್ರೋಲ್ 100ರು ಗಡಿದಾಟಿದ ಬಳಿಕ ಕೊನೆಗೂ ತೆರಿಗೆ ಇಳಿಕೆ
ಜೈಪುರ, ಜನವರಿ 29: ಪೆಟ್ರೋಲ್ ಬೆಲೆ ದಾಖಲೆ ಪ್ರಮಾಣದಲ್ಲಿ ಏರಿಕೆ ಕಂಡು ಪ್ರತಿ ಲೀಟರ್ ದರ 100 ರು ಗಡಿ ದಾಟುತ್ತಿದ್ದಂತೆ ಕೊನೆಗೂ ಎಚ್ಚೆತ್ತುಕೊಂಡ ಸರ್ಕಾರ ತೆರಿಗೆ ಇಳಿಕೆ ಮಾಡಿದೆ.
ರಾಜಸ್ಥಾನದ ಶ್ರೀಗಂಗಾನಗರದಲ್ಲಿ 100 ರು ಗಡಿ ದಾಟಿದ ಪೆಟ್ರೋಲ್ ಬಿಲ್ ವೈರಲ್ ಆಗಿತ್ತು. ದೇಶದ ಹಲವು ನಗರಗಳಲ್ಲೂ 100 ರು ಗಡಿ ದಾಟಿದೆ. ಆದರೆ, ಸದ್ಯಕ್ಕೆ ರಾಜಸ್ಥಾನ ಸರ್ಕಾರ ಮಾತ್ರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ತಗ್ಗಿಸುವುದಾಗಿ ಘೋಷಣೆ ಮಾಡಿದೆ.
ಶ್ರೀಗಂಗಾನಗರದಲ್ಲಿ ಸಾದಾ ಪೆಟ್ರೋಲ್ ಬೆಲೆಯೇ ಪ್ರತಿ ಲೀಟರ್ಗೆ 98.40 ರು ನಷ್ಟಿದ್ದರೆ, ಪ್ರೀಮಿಯಂ ಬ್ರ್ಯಾಂಡೆಡ್ ಪೆಟ್ರೋಲ್ ದರ 101.15 ರು ಆಗಿದೆ. ಜನವರಿ 28ರಂದು ಪೆಟ್ರೋಲ್, ಡೀಸೆಲ್ ದರದಲ್ಲಿ ಅಂಥಾ ವ್ಯತ್ಯಾಸ ಕಂಡು ಬಂದಿರಲಿಲ್ಲ. ಆದರೆ, ವಾಹನ ಸವಾರರ ಆಕ್ರೋಶಕ್ಕೆ ಮಣಿದ ರಾಜಸ್ಥಾನ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಶೇ 2 ರಷ್ಟು ತಗ್ಗಿಸಿರುವುದಾಗಿ ಘೋಷಿಸಿದೆ. ಸದ್ಯ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ವ್ಯಾಟ್ ಕ್ರಮವಾಗಿ ಶೇ 36 ಹಾಗೂ ಶೇ 26ರಷ್ಟಿದೆ.
ಜನವರಿ 6ರಿಂದ ಬಹುತೇಕ ಎಲ್ಲಾ ದಿನಗಳಂದು ಇಂಧನ ಬೆಲೆ ಏರಿಕೆ ಕಾಣುತ್ತಲೇ ಇದೆ. ದೆಹಲಿಯಲ್ಲಿ ಜನವರಿ 27ರಂದು ಗರಿಷ್ಠ ಮಟ್ಟ ಮುಟ್ಟಿ ಪೆಟ್ರೋಲ್ 86.30 ರು ಹಾಗೂ ಡೀಸೆಲ್ 76. 23 ರು ಆಗಿತ್ತು. ಬ್ರ್ಯಾಂಡೆಡ್ ಪೆಟ್ರೋಲ್ ದರ 89.10 ರು ನಷ್ಟಿದೆ.

ಮುಂಬೈನಲ್ಲಿ ಪ್ರತಿ ಲೀಟರ್ಗೆ ನಾರ್ಮಲ್ ಪೆಟ್ರೋಲ್ 92.86 ರು ಇದ್ದರೆ,ಬ್ರ್ಯಾಂಡೆಡ್ ಪೆಟ್ರೋಲ್ ದರ 95.61 ರು ಆಗಿದೆ.
ಕೇಂದ್ರ ಸರ್ಕಾರ ಮೂಲ ಬೆಲೆಯ 125% ರಷ್ಟು ತೆರಿಗೆ ವಿಧಿಸುತ್ತದೆ. ಇಂಧನದ ಮೇಲೆ ಅಬಕಾರಿ ಸುಂಕ 32. 98ರು ನಷ್ಟಿದೆ. ದೆಹಲಿಯಲ್ಲಿ 19 ರು ಪ್ರತಿ ಲೀಟರ್ ವ್ಯಾಟ್, ಡೀಲರ್ ಕಮಿಷನ್ 3.67 ರು ಪ್ರತಿ ಲೀಟರ್ ಸೇರಿ ಬೆಲೆ ಇನ್ನಷ್ಟು ಏರಿಕೆಗೆ ಕಾರಣವಾಗಿದೆ.
-
Arecanut Price: ಶಿವಮೊಗ್ಗ ಮಾರುಕಟ್ಟೆಲ್ಲಿ ಕ್ವಿಂಟಾಲ್ ಅಡಿಕೆ ಧಾರಣೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾರ್ಚ್ 23ರ ದರಪಟ್ಟಿ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications