ಮಲ್ಯ ನೀಡಿದ ರಾಜೀನಾಮೆ ತಿರಸ್ಕಾರವಾಗಿದ್ದೇಕೆ?
ನವದೆಹಲಿ, ಮೇ 04: ಉದ್ಯಮಿ ವಿಜಯ್ ಮಲ್ಯ ಅವರು ರಾಜ್ಯಸಭೆ ಸದಸ್ಯತ್ವಕ್ಕೆ ನೀಡಿದ್ದ ರಾಜೀನಾಮೆಯನ್ನು ರಾಜ್ಯಸಭೆ ಸಭಾಪತಿ ಹಮೀದ್ ಅನ್ಸಾರಿ ತಿರಸ್ಕರಿಸಿದ್ದಾರೆ.
ಸಂಸತ್ನ ಸದಾಚಾರ ಸಮಿತಿ ವರದಿ ಆಧಾರದಲ್ಲಿ ಅನ್ಸಾರಿ ಈ ಕ್ರಮ ಕೈಗೊಂಡಿದ್ದಾರೆ. ಸಾಲ ಮರುಪಾವತಿ ವಿಚಾರದಲ್ಲಿ ಮಲ್ಯ ಅವರು ನೀಡಿದ ಸ್ಪಷ್ಟನೆ ಸಂದೇಶವನ್ನು ತಿರಸ್ಕರಿಸಲಾಗಿದೆ. ಮಲ್ಯರಿಂದ ಸಂಸತ್ತಿನ ಗೌರವಕ್ಕೆ ಕುಂದುಂಟಾಗಿದ್ದು, ಸದಸ್ಯತ್ವವನ್ನು ರದ್ದುಗೊಳಿಸಲು ಸಮಿತಿ ಶಿಫಾರಸು ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು. [ಈಗ ಮಲ್ಯ ಮುಂದಿರುವ ಆಯ್ಕೆಗಳೇನು?]

ರಾಜ್ಯಸಭೆಯ ನಿಯಮಾವಳಿ ಪ್ರಕಾರ ರಾಜೀನಾಮೆ ಪತ್ರವನ್ನು ಖುದ್ದಾಗಿ ಅಥವಾ ಅಧಿಕೃತ ವ್ಯಕ್ತಿಗಳ ಮೂಲಕ ರವಾನಿಸಬೇಕಾಗುತ್ತದೆ. ಆದರೆ ಮಲ್ಯ ಸ್ಕ್ಯಾನ್ ಮಾಡಿದ ಪತ್ರವನ್ನು ಇಮೇಲ್ ಮೂಲಕ ಕಳುಹಿಸಿದ್ದರು. ಹೀಗಾಗಿ ತಾಂತ್ರಿಕ ಕಾರಣಗಳಿಂದ ರಾಜೀನಾಮೆ ಪತ್ರವನ್ನು ತಿರಸ್ಕರಿಸಲಾಗಿದೆ ಎಂದು ಸದಾಚಾರ ಸಮಿತಿ ಹೇಳಿದೆ. [100 ಕೋಟಿ ರು ಮೌಲ್ಯದ ಬಂಗಲೆಯಲ್ಲಿ ಮಲ್ಯ ನೆಲೆ]
ರಾಜ್ಯಸಭೆಯಿಂದ ಮಲ್ಯರನ್ನು ಉಚ್ಚಾಟಿಸಲು ನೀಡಿರುವ ಶಿಫಾರಸ್ಸಿಗೆ ಬೆಂಬಲ ಸಿಕ್ಕರೆ, ನಿಲುವಳಿ ಮಂಡಿಸಿ ಮತದಾನ ನಡೆಸಿದ ನಂತರ ಉಚ್ಚಾಟಿಸಲಾಗುತ್ತದೆ. [ಮಲ್ಯರನ್ನು ಯುಕೆಯಿಂದ ಗಡಿಪಾರು ಮಾಡಿ: ಭಾರತ]
In all humility and not in defiance as they report, I would like Indian media to check and verify facts before calling me a defaulter
— Vijay Mallya (@TheVijayMallya) May 2, 2016
'ನನ್ನನ್ನು ಉದ್ದೇಶಪೂರ್ವಕ ಸುಸ್ತಿದಾರ ಎಂದು ಕರೆಯುವ ಮೊದಲು ಅಂಕಿ ಅಂಶಗಳನ್ನು ಪರಿಶೀಲಿಸಿ, ಆರ್ ಬಿಐ ಪಟ್ಟಿಯಲ್ಲಿರುವ ಸಾಲಗಾರರನ್ನು ನೋಡಿ' ಎಂದು ವಿಜಯ್ ಮಲ್ಯ ಅವರು ಟ್ವೀಟ್ ಮಾಡಿ ಭಾರತದ ಮಾಧ್ಯಮಗಳಿಗೆ ತರಾಟೆಗೆ ತೆಗೆದುಕೊಂಡಿದ್ದರು.
ಒಂದು ಮೂಲದ ಪ್ರಕಾರ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳಲ್ಲಿ ಉದ್ದೇಶಪೂರ್ವಕ ಸುಸ್ತಿದಾರರ ಸಂಖ್ಯೆ 7,686ರಷ್ಟಿದ್ದು 66,190 ಕೋಟಿ ರು ಬಾಕಿ ಬರಬೇಕಿದೆ. ಪರಿಸ್ಥಿತಿ ಹೀಗಿದ್ದರೂ ಮಲ್ಯರನ್ನು ಮಾತ್ರ ಟಾರ್ಗೆಟ್ ಮಾಡುತ್ತಿರುವುದೇಕೆ ಎಂಬ ಪ್ರಶ್ನೆ ಮಲ್ಯರ ಅಭಿಮಾನಿಗಳು ಕೇಳುತ್ತಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications