ಆರ್ ಬಿಐ ಸುದೀರ್ಘ ಸಭೆ ಅಂತ್ಯ: ಮಾರುಕಟ್ಟೆಗೆ ಬರಲಿದೆ 8 ಸಾವಿರ ಕೋಟಿ
ಮುಂಬೈ, ನವೆಂಬರ್ 19: ಸೋಮವಾರ ಬೆಳಿಗ್ಗೆ 10 ಗಂಟೆಗೆ ಆರಂಭವಾಗಿದ್ದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಮಂಡಳಿಯ ಸುದೀರ್ಘ ಸಭೆ, ರಾತ್ರಿ ವೇಳೆಗೆ ಕೊನೆಗೂ ಅಂತ್ಯಗೊಂಡಿದೆ.
ಕೇಂದ್ರ ಸರ್ಕಾರ ಮತ್ತು ಆರ್ ಬಿಐ ನಡುವಿನ ಮನಸ್ತಾಪ-ತಿಕ್ಕಾಟದ ಕಾರಣ ಆರ್ಥಿಕ ವಲಯದಲ್ಲಿ ಅನೇಕ ಸಮಸ್ಯೆಗಳು ತಲೆದೋರಿದ್ದವು.
ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ರಾಜಿನಾಮೆ ನೀಡಲಿದ್ದಾರೆ ಎಂಬ ಸುದ್ದಿಯೂ ಹರಡಿತ್ತು. ಈ ನಡುವೆ ಕೇಂದ್ರ ಸರ್ಕಾರ ಸತತ ಸಭೆಗಳನ್ನು ನಡೆಸಿ ಸಂಘರ್ಷಕ್ಕೆ ತೇಪೆ ಹಚ್ಚಲು ಪ್ರಯತ್ನಿಸಿತ್ತು. ಹೀಗಾಗಿ ಸೋಮವಾರದ ಸಭೆ ಮಹತ್ವ ಪಡೆದುಕೊಂಡಿತ್ತು.
ಕೇಂದ್ರದ ಸತತ ಒತ್ತಡದ ಬಳಿಕ ಆರ್ ಬಿಐ ಮುಕ್ತ ಮಾರುಕಟ್ಟೆಗೆ 8 ಸಾವಿರ ಕೋಟಿ ರೂ.ಗಳ ಬಿಡುಗಡೆಯನ್ನು ಹೆಚ್ಚಿಸಲು ಒಪ್ಪಿಕೊಂಡಿದೆ.

ಮಾರುಕಟ್ಟೆಗೆ ಹೆಚ್ಚಿನ ನಗದು ಪೂರೈಕೆ ಮಾಡುವುದು ಆರ್ ಬಿಐ ಮತ್ತು ಕೇಂದ್ರ ಸರ್ಕಾರದ ನಡುವಿನ ಸಂಘರ್ಷಗಳಲ್ಲಿ ಒಂದು ಅಂಶವಾಗಿತ್ತು.
ಸಭೆಯಲ್ಲಿ ಊರ್ಜಿತ್ ಪಟೇಲ್ ಮತ್ತು ಅವರ ಅಧೀನದ ನಾಲ್ವರು ಅಧಿಕಾರಿಗಳು ಹಾಗೂ ಸರ್ಕಾರದಿಂದ ನೇಮಕಗೊಂಡ 13 ಮಂಡಳಿ ಸದಸ್ಯರು ಸರ್ಕಾರ ಮತ್ತು ಆರ್ ಬಿಐ ನಡುವಿನ ವಿವಾದದ ಕುರಿತಾದ ಎಲ್ಲ ಸಂಗತಿಗಳ ಬಗ್ಗೆ ಕೂಲಂಕಷವಾಗಿ ಚರ್ಚಿಸಿದರು.
ಅವುಗಳಲ್ಲಿ ಕೆಲವು ಸಮಸ್ಯೆಗಳನ್ನು ಈಗಾಗಲೇ ಅಸ್ತಿತ್ವದಲ್ಲಿ ಇರುವ ಸಮಿತಿಗಳಿಂದ ಪರಿಶೀಲನೆಗೆ ಒಳಪಡಿಸುವುದಾಗಿ ನಿರ್ಧರಿಸಲಾಯಿತು.
ಅಲ್ಲದೆ, ಆರ್ ಬಿಐ ತನ್ನಲ್ಲಿನ ಹೆಚ್ಚುವರಿ ಮೀಸಲು ಹಣವನ್ನು ಸರ್ಕಾರಕ್ಕೆ ಒಪ್ಪಿಸಬೇಕೆಂಬ ಬೇಡಿಕೆಯಂತಹ ಮಹತ್ವದ ವಿಚಾರದ ಕುರಿತು ಹೊಸ ಸಮಿತಿಯನ್ನು ರಚಿಸಿ ಅದರ ಮೂಲಕ ಪರಿಶೀಲನೆಗೆ ಒಳಪಡಿಸಲಾಗುವುದು.
ಸಮಿತಿಯ ಸಂರಚನೆಯನ್ನು ಸರ್ಕಾರ ಮತ್ತು ಆರ್ ಬಿಐ ಸೇರಿ ಜಂಟಿಯಾಗಿ ನಿರ್ಧರಿಸಲಿವೆ.
ಸರ್ಕಾರಿ ಸ್ವಾಮ್ಯದ ಮೇಲೆ ಹೇರಿರುವ ಸಾಲ ನೀಡಿಕೆ ಮೇಲಿನ ನಿಯಂತ್ರಣದ ಕುರಿತು ಹಣಕಾಸು ಉಸ್ತುವಾರಿ ಮಂಡಳಿಯು ಪರಿಶೀಲನೆ ನಡೆಸಲಿದೆ.
ಮಧ್ಯಮ, ಸಣ್ಣ ಮತ್ತು ಅತಿ ಸಣ್ಣ ಉದ್ಯಮಿಗಳಿಗೆ ನೆರವಾಗುವ ಯೋಜನೆಗಳಿಗೆ ಆದ್ಯತೆ ನೀಡಲು ಕೂಡ ಮಂಡಳಿಯಲ್ಲಿ ಸಲಹೆ ನೀಡಲಾಯಿತು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications