ಈ ಸಹಕಾರಿ ಬ್ಯಾಂಕ್ನ ಲೈಸೆನ್ಸ್ ರದ್ದುಗೊಳಿಸಿದ RBI: ಠೇವಣಿದಾರರಿಗೆ 5 ಲಕ್ಷ ರೂ.ವರೆಗೆ ಮರುಪಾವತಿ
ನವದೆಹಲಿ, ಡಿಸೆಂಬರ್ 09: ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದ ಕರದ್ ಜನತಾ ಸಹಕಾರಿ ಬ್ಯಾಂಕಿನ ಪರವಾನಗಿಯನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ(ಆರ್ಬಿಐ) ಬುಧವಾರ ರದ್ದುಗೊಳಿಸಿದೆ. ಈ ಮೂಲಕ ಬ್ಯಾಂಕ್ ಯಾವುದೇ ಠೇವಣಿ ತೆಗೆದುಕೊಳ್ಳುವುದು ಅಥವಾ ಮರುಪಾವತಿ ಮಾಡುವುದನ್ನು ನಿಷೇಧಿಸಲಾಗಿದೆ.
ಬ್ಯಾಂಕಿನಲ್ಲಿ ಸಮರ್ಪಕ ಹಣಕಾಸು ಇಲ್ಲ ಎಂದು ಉಲ್ಲೇಖಿಸಿ ಆರ್ಬಿಐ, ಕರದ್ ಜನತಾ ಸಹಕಾರಿ ಬ್ಯಾಂಕಿನ ವ್ಯವಹಾರವನ್ನು ರದ್ದುಗೊಳಿಸಿದೆ. ಇದರ ಜೊತೆಗೆ ಮಹಾರಾಷ್ಟ್ರದ ಸಹಕಾರಿ ಸಂಘಗಳ ಸಹಕಾರ ರಿಜಿಸ್ಟ್ರಾರ್, ಬ್ಯಾಂಕ್ ಅನ್ನು ಮುಟ್ಟುಗೋಲು ಹಾಕಲು ಆದೇಶ ಹೊರಡಿಸಿ ಮತ್ತು ಅದಕ್ಕಾಗಿ ಲಿಕ್ವಿಡೇಟರ್ ಅನ್ನು ನೇಮಿಸುವಂತೆ ಕೇಂದ್ರ ಬ್ಯಾಂಕ್ ವಿನಂತಿಸಿದೆ.
ಆದಾಗ್ಯೂ, ಬ್ಯಾಂಕಿನ ಠೇವಣಿದಾರರಿಗೆ ಹಣವನ್ನು ಪಾವತಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗುವುದು ಎಂದು ಆರ್ಬಿಐ ಸ್ಪಷ್ಟಪಡಿಸಿದೆ. ಇದರರ್ಥ, ಬ್ಯಾಂಕ್ ದಿವಾಳಿಯಾದ ಮೇಲೆ ನಿಯಮ ಮತ್ತು ಷರತ್ತುಗಳ ಪ್ರಕಾರ ಠೇವಣಿ ವಿಮೆ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ನಿಂದ ಠೇವಣಿದಾರರು 5 ಲಕ್ಷ ರೂಪಾಯಿವರೆಗೆ ಪಡೆಯುತ್ತಾರೆ.

ಇನ್ನು ಈ ಬ್ಯಾಂಕಿನ ಠೇವಣಿದಾರರಲ್ಲಿ ಶೇಕಡಾ 99ರಷ್ಟು ಜನರು ತಮ್ಮ ಠೇವಣಿಗಳ ಸಂಪೂರ್ಣ ಪಾವತಿಯನ್ನು ಡಿಐಜಿಸಿಯಿಂದ ಪಡೆಯುತ್ತಾರೆ.
ಆರ್ಬಿಐ ಮಂಗಳವಾರ ನೀಡಿರುವ ನೋಟಿಸ್ನಲ್ಲಿ ಬ್ಯಾಂಕ್ಗೆ ಸಮರ್ಪಕ ಬಂಡವಾಳ ಮತ್ತು ಗಳಿಕೆಯ ನಿರೀಕ್ಷೆಯಿಲ್ಲ ಎಂದು ಉಲ್ಲೇಖಿಸಲಾಗಿದೆ. ಆದ್ದರಿಂದ, ಅದರ ಪ್ರಸ್ತುತ ಠೇವಣಿದಾರರಿಗೆ ಪೂರ್ಣವಾಗಿ ಪಾವತಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಇನ್ನೂ ಬ್ಯಾಂಕ್ ತನ್ನ ವ್ಯವಹಾರವನ್ನು ನಡೆಸಲು ಬಿಟ್ಟರೆ ಸಾರ್ವಜನಿಕರ ಹಿತಾಸಕ್ತಿಗೆ ದೊಡ್ಡ ತೊಂದರೆಯಾಗುತ್ತದೆ ಎಂದು ಆರ್ಬಿಐ ಹೇಳಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications