ವಿವಾದ ತಾರಕಕ್ಕೇರುವ ಮೊದಲೇ ಊರ್ಜಿತ್ ರಾಜೀನಾಮೆ ನೀಡ್ತಾರಾ?
ಬೆಂಗಳೂರು, ಅಕ್ಟೋಬರ್ 31 : ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಕೇಂದ್ರ ಸರಕಾರದ ನಡುವಿನ ವಿವಾದದ ಕಂದಕ ದೊಡ್ಡದಾಗುತ್ತಿರುವ ಹಿನ್ನೆಲೆಯಲ್ಲಿ ರಿಸರ್ವ್ ಬ್ಯಾಂಕ್ ನ ಗವರ್ನರ್ ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಒಂದು ಮೂಲ ತಿಳಿಸಿದೆ.
ಆದರೆ, ರಿಸರ್ವ್ ಬ್ಯಾಂಕ್ ನ ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರ ಪ್ರಕಾರ, ದೀಢೀರನೆ ಊರ್ಜಿತ್ ಪಟೇಲ್ ಅವರು ಗವರ್ನರ್ ಹುದ್ದೆಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆ ಕಡಿಮೆ. ಊರ್ಜಿತ್ ಪಟೇಲ್ ತಕ್ಷಣ ರಾಜೀನಾಮೆ ನೀಡುವ ಸಾಧ್ಯತೆಯನ್ನು ಆ ಅಧಿಕಾರಿ ತಳ್ಳಿಹಾಕಿದ್ದಾರೆ.
ಊರ್ಜಿತ್ ಪಟೇಲ್ ಅವರೂ ಭಾಗಿಯಾಗಿದ್ದ, ಮಂಗಳವಾರ ನಡೆದ ಕಾರ್ಯಕ್ರಮವೊಂದರಲ್ಲಿ, ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಸೆಂಟ್ರಲ್ ಬ್ಯಾಂಕ್ ನ ಕಾರ್ಯವೈಖರಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಊರ್ಜಿತ್ ಪಟೇಲ್ ಅವರು ರಾಜೀನಾಮೆ ಸಲ್ಲಿಸಬಹುದು ಎಂಬ ಗಾಳಿಸುದ್ದಿ ಹಬ್ಬಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ, ಕೇಂದ್ರ ಸರಕಾರ ತನ್ನ ಸ್ವಾತಂತ್ರ್ಯ ಕಸಿದುಕೊಂಡಿದ್ದು, ಸ್ವಾಯತ್ತತೆಗೆ ಧಕ್ಕೆ ತಂದಿದೆ, ಹೀಗಾದರೆ ಭಾರತದ ಅರ್ಥ ವ್ಯವಸ್ಥೆಗೆ ಬೆಂಕಿ ಬೀಳಲಿದೆ, ಹಣಕಾಸು ಮಾರುಕಟ್ಟೆ ಅಲ್ಲೋಲಕಲ್ಲೋಲವಾಗಲಿದೆ ಎಂದು ಆರೋಪಿಸಿದೆ.
ಇದಕ್ಕೆ ಪ್ರತಿಯಾಗಿ, ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ, 2008ರಿಂದ 2014ರ ಅವಧಿಯಲ್ಲಿ, ಬ್ಯಾಂಕ್ ಗಳು ಬೇಕಾಬಿಟ್ಟಿ ಸಾಲ ನೀಡಿದ್ದವು, ಅಲ್ಲದೆ ಕೆಟ್ಟ ಸಾಲಗಳನ್ನು ನಿಯಂತ್ರಿಸುವಲ್ಲಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಸಂಪೂರ್ಣ ವಿಫಲವಾಯಿತು. ಆಗ ಸೆಂಟ್ರಲ್ ಬ್ಯಾಂಕ್ ಏನು ಮಾಡುತ್ತಿತ್ತೋ ಗೊತ್ತಿಲ್ಲ, ಸತ್ಯವನ್ನು ಕಾರ್ಪೆಟ್ ಕೆಳಗೆ ತಳ್ಳುತ್ತಲೇ ಬಂದಿತು. ಅದರ ಪರಿಣಾಮ ನಾವೀಗ ಅನುಭವಿಸುತ್ತಿದ್ದೇವೆ ಎಂದು ಅರುಣ್ ಜೇಟ್ಲಿ ಅವರು ನೇರವಾಗಿಯೇ ಊರ್ಜಿತ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದರು.
ಕೇಂದ್ರದ ಮೇಲೆ ಪರೋಕ್ಷವಾಗಿ ದಾಳಿ ನಡೆಸಿರುವ ಸೆಂಟ್ರಲ್ ಬ್ಯಾಂಕ್, ಬಿಜೆಪಿ ನೇತೃತ್ವದ ಕೇಂದ್ರ ಸರಕಾರ 2019ರಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯ ಮೇಲೆ ಕೇಂದ್ರೀಕರಿಸಿದ್ದು, ಬ್ಯಾಂಕಿಂಗ್ ಸೆಕ್ಟರ್ ನಲ್ಲಿ ಹಣದ ಕೊರತೆ ಸೃಷ್ಟಿಯಾಗಿರುವುದರಿಂದ, ಸಣ್ಣ ಮತ್ತು ಮಧ್ಯಮ ವರ್ತಕರಿಗೆ ಯಾವುದೇ ಸಹಾಯವಾಗುತ್ತಿಲ್ಲ. ಇದು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೊಡೆತ ನೀಡಲಿದೆ. ಈ ಕಾರಣದಿಂದಾಗಿ ಸೆಂಟ್ರಲ್ ಬ್ಯಾಂಕ್ ಅನ್ನು ಟೀಕಿಸುತ್ತಿದೆ ಎಂದು ವಾದಿಸಿದೆ.
ಈ ಎಲ್ಲ ಬೆಳವಣಿಗೆಗಳಿಂದ ಊರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡುವ ಸಾಧ್ಯಾಸಾಧ್ಯತೆಗಳ ಬಗ್ಗೆ ಚರ್ಚೆ ನಡೆಯುತ್ತಿದೆ. ಎಲ್ಲ ದ್ವಾರಗಳೂ ಮುಕ್ತವಾಗಿದ್ದು, ಏನು ಬೇಕಾದರೂ ಸಂಭವಿಸಬಹುದು ಎಂಬ ಸನ್ನಿವೇಶ ಸೃಷ್ಟಿಯಾಗಿದೆ. ಅಲ್ಲದೆ, ಊರ್ಜಿತ್ ಅವರ ಸೇವಾವಧಿ ಮುಂದಿನ ಸೆಪ್ಟೆಂಬರ್ ವರೆಗೆ ಇರಲಿದ್ದು, ಅವರನ್ನು ಅಲ್ಲಿಯವರೆಗೆ ಮುಂದುವರಿಸುವ ಸಾಧ್ಯತೆ ಕಡಿಮೆ ಎಂಬ ಮಾತು ಕೂಡ ಕೇಳಿಬಂದಿದೆ. ಇದನ್ನು ತಪ್ಪಿಸಲೆಂದೇ ಊರ್ಜಿತ್ ಅವರು ಸೇವಾವಾಧಿ ಮುಗಿಯುವ ಮುನ್ನವೇ ರಾಜೀನಾಮೆ ಸಲ್ಲಿಸಬಹುದು ಎಂಬ ಸುದ್ದಿ ಹರಿದಾಡುತ್ತಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications