200ರೂ. ನೋಟು ಬರುತ್ತಂತೆ, ಅಂತೆ-ಕಂತೆ!
ಇದು ರಿಸರ್ವ್ ಬ್ಯಾಂಕ್ ನ ಅಂಗಳದಿಂದ ನುಸುಳಿ ಹೊರಬಂದಿರುವ ಸುದ್ದಿ. 200 ರುಪಾಯಿ ನೋಟು ಚಲಾವಣೆಗೆ ತರುತ್ತಾರಂತೆ. ಈ ಬಗ್ಗೆ ರಿಸರ್ವ್ ಬ್ಯಾಂಕ್ ವಕ್ತಾರರೇನೋ ಇಲ್ಲ ಅನ್ನುತ್ತಿದ್ದಾರೆ. ಆದರೆ ಮೂಲಗಳೇನೋ ಬರುತ್ತಂತೆ ಅನ್ನುತ್ತಿವೆ
ಮುಂಬೈ, ಏಪ್ರಿಲ್ 4: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 200 ರುಪಾಯಿ ಮುಖಬೆಲೆಯ ನೊಟು ಪರಿಚಯಿಸಲು ಮುಂದಾಗಿದೆ. ಮಾರ್ಚ್ ನಲ್ಲಿ ನಡೆದ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದ್ದು, ಈ ಬಗ್ಗೆ ಮಾಹಿತಿ ನೀಡಿದವರು ತಮ್ಮ ಗುರುತನ್ನು ತಿಳಿಸದಂತೆ ಮನವಿ ಮಾಡಿದ್ದಾರೆ. ಮಾಧ್ಯಮದ ಜತೆಗೆ ಈ ವಿಚಾರ ವಿನಿಮಯ ಮಾಡಿಕೊಳ್ಳುವ ಅಧಿಕಾರ ತಮಗಿಲ್ಲ ಎಂದು ಕೂಡ ಹೇಳಿದ್ದಾರೆ.
ಕೇಂದ್ರ ಸರಕಾರ ಒಮ್ಮೆ ಅಧಿಕೃತವಾಗಿ ಒಪ್ಪಿಗೆ ನೀಡಿದ ಮೇಲೆ ಈ ವರ್ಷದ ಜೂನ್ ನ ನಂತರ 200 ರುಪಾಯಿ ನೋಟಿನ ಮುದ್ರಣ ಆರಂಭವಾಗುತ್ತದೆ. ಆದರೆ ರಿಸರ್ವ್ ಬ್ಯಾಂಕ್ ಇಂಡಿಯಾದ ವಕ್ತಾರ ಈ ಹೇಳಿಕೆಯನ್ನು ನಿರಾಕರಿಸಿದ್ದಾರೆ. ಕಡಿಮೆ ಮುಖ ಬೆಲೆಯ ನೋಟುಗಳನ್ನು ಪರಿಚಯಿಸಲು ಸರಕಾರ ಕೈಗೊಂಡಿರುವ ಕ್ರಮದ ಭಾಗವಾಗಿ 200 ರುಪಾಯಿ ನೋಟು ಚಾಲ್ತಿಗೆ ಬರಲಿದೆ.[ಹಳೇನೋಟು ಬದಲಿಸಲು ಅನಿವಾಸಿ ಭಾರತೀಯರಿಗೆ ಬಾಗಿಲು ತೆರೆದಿದೆ]

ಕಳೆದ ವರ್ಷ ನವೆಂಬರ್ 8ರಂದು 500, 1000 ರುಪಾಯಿ ಹಳೇ ನೋಟನ್ನು ಚಲಾವಣೆಯಿಂದ ಹಿಂಪಡೆಯಲಾಯಿತು. ಆ ನಂತರ 2000 ಹಾಗೂ 500 ರುಪಾಯಿಯ ಹೊಸ ನೋಟು ಪರಿಚಯಿಸಲಾಯಿತು. ಈ ಹಿಂದೆ ಕೂಡ 2000 ರುಪಾಯಿ ನೋಟಿನ ಚಿತ್ರಗಳು ಬಿಡುಗಡೆಗೂ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದವು.
ಫೊಟೋ ಸೋರಿಕೆ ಮಾಡಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಕೇಂದ್ರ ಸರಕಾರ ತಿಳಿಸಿತ್ತು. ಆದರೆ ಯಾರಿಗಾದರೂ ಶಿಕ್ಷೆಯಾಯಿತೇ ಎಂಬ ಬಗ್ಗೆ ಯಾವುದೇ ಮಾಹಿತಿ ಹೊರಬರಲಿಲ್ಲ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications