ರೆಪೋ ದರ ಇಳಿಕೆ: ಸಾಲ ಮಾಡಿ ತುಪ್ಪ ತಿನ್ನಲಡ್ಡಿಯಿಲ್ಲ!
ಮುಂಬೈ, ಜ.15: ಅರ್ಥ ವ್ಯವಸ್ಥೆಯ ಉತ್ತೇಜನ, ವಿದೇಶಿ ವಿನಿಮಯ ಮಾರುಕಟ್ಟೆಯಲ್ಲಿ ಸ್ಥಿರತೆ, ಹಣದುಬ್ಬರ ನಿಯಂತ್ರಣ ಹಿನ್ನೆಲೆಯಲ್ಲಿ ಆರ್ ಬಿಐ ಗವರ್ನರ್ ರಘುರಾಮ್ ಜಿ ರಾಜನ್ ಅವರು ಹೊಸ ಹಣಕಾಸು ನೀತಿ ಪ್ರಕಟಿಸುವುದಕ್ಕೂ ಮುನ್ನವೇ ಸಂಕ್ರಾಂತಿ ಗಿಫ್ಟ್ ನೀಡಿದ್ದಾರೆ. ಬ್ಯಾಂಕ್ ಲೋನ್ ಪಡೆಯುವವರು ಬಡ್ಡಿದರ ಇಳಿಕೆಯ ನಿರೀಕ್ಷೆ ಇಟ್ಟುಕೊಳ್ಳಬಹುದು.
ಫೆ.3ರಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ತನ್ನ ಹಣಕಾಸು ನೀತಿ ಪ್ರಕಟಿಸಲಿದೆ. ಇದಕ್ಕೂ ಮುನ್ನ ಸಾರ್ವಜನಿಕರಿಗೆ ಹಿತಕರ ಸುದ್ದಿ ನೀಡಿದ್ದು, ರೆಪೋ ದರ 25 ಮೂಲಾಂಶ(bps) ಶೇ 7.75ಕ್ಕೆ ಇಳಿಕೆ ಮಾಡಲಾಗಿದೆ. ಶೇ 8ರಷ್ಟಿದ್ದ ರೆಪೋ ದರವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಇಳಿಸಲಾಗಿದೆ ಎಂದು ಆರ್ ಬಿಐ ಗುರುವಾರ ಪ್ರಕಟಿಸಿದೆ. ನಗದು ಮೀಸಲು ಅನುಪಾತ(ಸಿಆರ್ ಆರ್) ಶೇ.4ರ ಪ್ರಮಾಣದಲ್ಲೇ ಇದೆ ಯಾವುದೇ ಬದಲಾವಣೆ ಮಾಡುವ ನಿರೀಕ್ಷೆ ಸದ್ಯಕ್ಕಿಲ್ಲ.
ಗಾಹ್ರಕ ದರ ಸ್ಯೂಚಂಕ(ಸಿಪಿಐ) ಶೇ 5ಕ್ಕೆ ಕುಸಿದಿದೆ. ಜನವರಿ 2016ರ ತನಕ ಹಣದುಬ್ಬರ ಶೇ 6ರಂತೆ ಉಳಿಯುವ ನಿರೀಕ್ಷೆಯಿದೆ.

ಬ್ಯಾಂಕುಗಳ ಗೃಹ ಹಾಗೂ ಕಾರು ಸಾಲ ಕೈಗುಟುಕುವಂತಾಗಲಿದೆ. ಆದರೆ, ಎಸ್ ಬಿಐ ಹಾಗೂ ಎಚ್ ಡಿಎಫ್ ಸಿ ಸೇರಿದಂತೆ ಪ್ರಮುಖ ಬ್ಯಾಂಕ್ ಗಳು ಸಾಲ ಬಡ್ಡಿದರ ಬಗ್ಗೆ ಯಾವುದೇ ಪ್ರತಿಕ್ರಿಯೆ ತಕ್ಷಣಕ್ಕೆ ನೀಡಿಲ್ಲ. ಯುನೈಟೆಡ್ ಬ್ಯಾಂಕ್ ಮಾತ್ರ 25 ಮುಲಾಂಶ ಕಡಿತ ಘೋಷಿಸಿದೆ. ಇತರೆ ಬ್ಯಾಂಕುಗಳು ಇದೇ ಹಾದಿ ಹಿಡಿದರೆ ಗ್ರಾಹಕರು ಸಾಲದ ಬಡ್ಡಿದರ ಇಳಿಕೆ ನಿರೀಕ್ಷಿಸಬಹುದು.
ನಿಫ್ಟಿಯಲ್ಲಿ ಸೂಚ್ಯಂಕ ಏರುತ್ತಲೇ ಇದೆ. ಬ್ಯಾಂಕಿಂಗ್ ಕ್ಷೇತ್ರದ ಷೇರುಗಳು ಸಂಕ್ರಾಂತಿ ಹಬ್ಬದ ಸಂಭ್ರಮವನ್ನು ಆಚರಿಸುತ್ತಿವೆ.
ಮಾರ್ಜಿನಲ್ ಸ್ಟಾಡಿಂಗ್ ಫೆಸಿಲಿಟಿ(ಎಂಎಸ್ ಎಫ್) ದರ ಹಾಗೂ ಬ್ಯಾಂಕ್ ದರ ಶೇ 9.5ರಷ್ಟಿತ್ತು ಈಗ ಶೇ 8.75ಕ್ಕೆ ಇಳಿದಿದೆ. ರೆಪೋದರ ಆಧಾರಿಸಿ ಬ್ಯಾಂಕುಗಳು ಈಗ ಶೇ 8.75ರಂತೆ ಆರ್ ಬಿಅನಿಂದ ಹಣ ಪಡೆದುಕೊಳ್ಳಲಿವೆ.
ಸಿಆರ್ ಅರ್: ಬ್ಯಾಂಕುಗಳಲ್ಲಿರುವ ಠೇವಣಿಗೆ ಅನುಗುಣವಾಗಿ ಆರ್ ಬಿಐ ನಲ್ಲಿ ಇಡಬೇಕಾದ ಹಣದ ಮೊತ್ತ
ರೆಪೋ ದರ: ಆರ್ ಬಿಐನಿಂದ ಬ್ಯಾಂಕುಗಳ ಹಣ ಪಡೆಯುವ ದರ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications