ಸಾಲ ಮಾಡಿ ಮನೆ ಕಟ್ಟುವವರಿಗೆ ಸಿಹಿ ಸುದ್ದಿ
ನವದೆಹಲಿ, ಮಾ.6: ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸಲು ಸಾಲ ಬಯಸುವವರಿಗೆ ಆರ್ ಬಿಐ ನಿಂದ ಸಿಹಿ ಸುದ್ದಿ ಸಿಕ್ಕಿದೆ. ಗೃಹ ಸಾಲ ಹಾಗೂ ಆಸ್ತಿ ಖರೀದಿ ನಿಯಮಾವಳಿಗಳನ್ನು ಸಡಿಲಿಸಲಾಗಿದೆ.
ಸಾಲ ಸೋಲ ಮಾಡಿ ಸ್ವಂತಕ್ಕೆ ಒಂದು ಮನೆ ಕಟ್ಟುವುದು ಅಷ್ಟು ಸುಲಭದ ಮಾತಲ್ಲ. ಬ್ಯಾಂಕಿನಿಂದ ಸಾಲ ಪಡೆಯುವುದೇ ದೊಡ್ಡ ಕೆಲಸವಾಗಿಬಿಡುತ್ತದೆ. 10 ಲಕ್ಷ ರು ವರೆಗಿನ ಗೃಹ ಸಾಲ ಹಾಗೂ ಆಸ್ತಿ ಖರೀದಿಗೆ ಸಂಬಂಧಿಸಿದಂತೆ ಇದ್ದ ಪ್ರಕ್ರಿಯೆ ಈಗ ಸರಳಗೊಳ್ಳಲಿದೆ.

ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಸಾಲದ ಮೊತ್ತದಲ್ಲೇ ಸೇರಿಸುವ ಅವಕಾಶ ಕಲ್ಪಿಸಿದೆ. ಇದರಿಂದ ನಿವೇಶನ ಖರೀದಿಸಿ ಮನೆ ನಿರ್ಮಿಸುವ ಯೋಜನೆ ಹಾಕಿಕೊಂಡವರಿಗೆ ಅನುಕೂಲವಾಗಲಿದೆ.ಸಾಲ ಪಡೆಯುವಾಗ ಮುದ್ರಾಂಕ ಹಾಗೂ ನೋಂದಣಿ ಶುಲ್ಕವನ್ನು ಪ್ರತ್ಯೇಕವಾಗಿ ಕಟ್ಟಲು ಪರದಾಡಬೇಕಿತ್ತು. [ಮನೆಸಾಲ, ವಾಹನ ಸಾಲ, ಆಸಾಲ ಈಸಾಲದ ಬಡ್ಡಿ ಇಳಿಕೆ]
ಆರ್ಥಿಕವಾಗಿ ದುರ್ಬಲರಾಗಿರುವವರು ಮತ್ತು ಕಡಿಮೆ ಆದಾಯ ಹೊಂದಿರುವವರು ಮನೆ ಕಟ್ಟುವ ವೇಳೆ ಸಾಲ ಪಡೆಯುವುದು ಹಾಗೂ ಆಸ್ತಿ ಖರೀದಿ ಸಂಬಂಧಿಸಿದಂತೆ ಹಾಲಿ ಮುದ್ರಾಂಕ ಹಾಗೂ ನೋಂದಣಿ ಶುಲ್ಕ ಆಸ್ತಿ ಮೌಲ್ಯದ ಶೇ.15ರಷ್ಟು ಪಾವತಿಸಬೇಕಿದೆ. ಇದರಿಂದ ಮನೆ ಕಟ್ಟುವವರು ಸ್ಟಾಂಪ್ ಡ್ಯೂಟಿ, ನೋಂದಣಿ ಶುಲ್ಕ, ಡಾಕ್ಯುಮೆಂಟ್ ಚಾರ್ಜ್ ಹೀಗೆ ಸಾಕಷ್ಟು ಹಣ ವ್ಯಯಿಸಬೇಕಾಗುತ್ತಿದೆ. ಈಗ ನಿಯಮ ಸಡಿಲಿಕೆಯಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಆರ್ ಬಿಐ ಹೇಳಿದೆ.
ಇತ್ತೀಚೆಗೆ ಆರ್ಬಿಐ ಬಡ್ಡಿದರ 25 ಅಂಶಗಳಷ್ಟು ಇಳಿಕೆ ಮಾಡಿದೆ. ಬ್ಯಾಂಕಿನಿಂದ ಗೃಹ, ವಾಹನ ಲೋನ್ ಪಡೆಯುವವರು ಬ್ಯಾಂಕಿನತ್ತ ಮುಖ ಮಾಡುವ ಅವಕಾಶ ಲಭ್ಯವಾಗಿದೆ. ಅದರೆ, ಬ್ಯಾಂಕುಗಳು ಇನ್ನೂ ಬಡ್ಡಿದರ ಇಳಿಕೆ ಬಗ್ಗೆ ಪ್ರಕಟಣೆ ಹೊರಡಿಸಿಲ್ಲ. (ಪಿಟಿಐ)
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ











Click it and Unblock the Notifications