ಆರ್ ಬಿಐ ಗವರ್ನರ್ ಗೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯ ಬಂಧನ
ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ನಾಗ್ಪುರದಲ್ಲಿ ಬಂಧಿಸಲಾಗಿದೆ ಎಂದು ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಮುಂಬೈ, ಮಾರ್ಚ್ 05: ಭಾರತೀಯ ರಿಸರ್ವ್ ಬ್ಯಾಂಕಿನ ಗವರ್ನರ್ ಊರ್ಜಿತ್ ಪಟೇಲ್ ಅವರನ್ನು ತಮ್ಮ ಹುದ್ದೆಯಿಂದ ಕೆಳಗಿಳಿಯುವಂತೆ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ನಾಗ್ಪುರದಲ್ಲಿ ಬಂಧಿಸಲಾಗಿದೆ ಎಂದು ಅವರಿಗೆ ಬೆದರಿಕೆ ಹಾಕಿದ್ದ ವ್ಯಕ್ತಿಯೊಬ್ಬನನ್ನು ಪೊಲೀಸರು ನಾಗ್ಪುರದಲ್ಲಿ ಬಂಧಿಸಿದ್ದಾರೆ.
ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಅವರಿಗೆ ಫೆಬ್ರವರಿ 23ರಂದು ಇಮೇಲ್ ಮೂಲಕ ವ್ಯಕ್ತಿಯೊಬ್ಬ ಬೆದರಿಕೆ ಒಡ್ಡಿದ್ದ. ಈ ಕೂಡಲೇ ನೀವು ನ ಹುದ್ದೆಯಿಂದ ಕೆಳಗಿಳಿಯಬೇಕು ಇಲ್ಲದಿದ್ದರೆ ಪರಿಣಾಮ ನೆಟ್ಟಗಿರುವುದಿಲ್ಲ. ನಿಮ್ಮ ಕುಟುಂಬಸ್ಥರಿಗೂ ಈ ಬೆದರಿಕೆ ಅನ್ವಯವಾಗಲಿದೆ ಎಂದು ಇಮೇಲ್ ಕಳುಹಿಸಿದ್ದ 37 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಈ ಬೆದರಿಕೆ ಪತ್ರ ಬಂದ ಕೂಡಲೇ ಊರ್ಜಿತ್ ಅವರು ಮುಂಬೈನ ಸೈಬರ್ ಪೊಲೀಸ್ ವಿಭಾಗಕ್ಕೆ ದೂರು ನೀಡಿದ್ದರು.

ಮುಂಬೈ ಪೊಲೀಸ್ ಇಲಾಖೆಯ ಸೈಬರ್ ವಿಭಾಗದವರಿಗೆ ತನಿಖೆ ವೇಳೆಯಲ್ಲಿ ಈ ಇ ಮೇಲ್ ನಾಗ್ಪುರದ ಸೈಬರ್ ಕೆಫೆಯಿಂದ ಬಂದಿದ್ದು ಎಂದು ತಿಳಿದು ಬಂದಿದೆ. ತಕ್ಷಣವೇ ಕಾರ್ಯಾಚರಣೆ ನಡೆಸಿ ವೈಭವ್ ಬದ್ದಾಲ್ ವಾರ್ ಎಂಬ ಹೆಸರಿನ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಸೈಬರ್ ಸೆಲ್ ನ ಡಿಸಿಪಿ ಅಖಿಲೇಶ್ ಸಿಂಗ್ ಹೇಳಿದರು.
ಐಪಿಸಿ ಸೆಕ್ಷನ್ 506 (2) ಅನ್ವಯ ಪ್ರಕರಣ ದಾಖಲಾಗಿದ್ದು, ಆರೋಪಿ ವೈಭವ್ ನನ್ನು ನಾಗ್ಪುರ ಕೋರ್ಟಿನ ಮುಂಚೆ ಹಾಜರು ಪಡಿಸಲಾಗಿದ್ದು, ಮಾರ್ಚ್ 06ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ವಿದೇಶದ ವಿವಿಯೊಂದರಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಆರೋಪಿ ಸದ್ಯ ನಿರುದ್ಯೋಗಿಯಾಗಿದ್ದಾನೆ. ಬಹುಶಃ ಉದ್ಯೋಗ ಸಿಗದ ಕಾರಣ, ಹತಾಶೆಗೊಂಡು ಈ ರೀತಿ ಕೃತ್ಯ ಎಸಗಿರಬಹುದು ಎಂದು ಶಂಕಿಸಲಾಗಿದೆ. (ಪಿಟಿಐ)
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications